• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉದ್ಘಾಟನೆಯ ದಿನವೇ ಬಾಗಿಲು ಮುರಿತ: ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಶೀತಲ ಸಮರ!

Ganesh Kumar Posted On October 22, 2017
0


0
Shares
  • Share On Facebook
  • Tweet It

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬಂಟ್ವಾಳದಲ್ಲಿ ಹತ್ತು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮಿನಿ ವಿಧಾನಸೌಧದ ಉದ್ಘಾಟನೆ ಮಾಡಿದ್ದಾರೆ. ಅದರ ಬೆನ್ನಿಗೆ ಮಿನಿ ವಿಧಾನಸೌಧದ ಒಳಗೆ ಕಾರ್ಯಕತ್ತರು ನುಗ್ಗಿದ ರಭಸಕ್ಕೆ ವಿಧಾನಸೌಧದ ಬಾಗಿಲು ಮುರಿದಿದೆ.
ಉದ್ಘಾಟನೆಯಾದ ದಿನವೇ ಬಾಗಿಲು ಮುರಿಯಲು ಕಾರಣವೇನು ಎನ್ನುವುದರ ಕುರಿತು ಜನ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಆ ಬಾಗಿಲು ಮಾಡಿಸಿದ ಗುತ್ತಿಗೆದಾರ ಕಳಪೆ ಗುಣಮಟ್ಟದ ಕಚ್ಚಾಪದಾರ್ಥವನ್ನು ಬಳಸಿರಬೇಕು ಎಂದು ಸಂಶಯ ಉಂಟಾಗಿದೆ. ಒಂದು ವೇಳೆ ಕಾರ್ಯಕತ್ತರು ಒಳಗೆ ಹೋಗುವ ರಭಸಕ್ಕೆ ಬಾಗಿಲು ಮುರಿಯಿತು ಎನ್ನುವುದಾದರೆ ಆ ಬಾಗಿಲು ಎಷ್ಟು ವರ್ಷ ಬಾಳಿಕೆ ಬರುತ್ತೆ ಎಂದು ಈಗಲೇ ಗೊತ್ತಾಗುತ್ತೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಕೋಟ್ಯಾಂತರ ರೂಪಾಯಿ ಯೋಜನೆಗಳು ಹೀಗೆ ಮೊದಲ ದಿನವೇ ತಮ್ಮ ಬಣ್ಣ ತೋರಿಸಿದರೆ ಏನು ಕಥೆ ಎನ್ನುವುದು ಸದ್ಯದ ಪ್ರಶ್ನೆ.
ಅತ್ತ ಮಿನಿ ವಿಧಾನಸೌಧದ ಬಾಗಿಲು ತುಂಡಾದರೆ ಇತ್ತ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಎದುರು ಮಿಂಚಬೇಕೆನ್ನುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ಸಿನ ಮುಖಂಡರ ಆಸೆಗೆ ಸಿಎಂ ತಣ್ಣೀರೆರೆಚಿದ ಘಟನೆ ಕೂಡ ನಡೆದಿದೆ. ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳನ್ನು ಸ್ವಾಗತಿಸಲು ಕಾದು ನಿಂತ ಐವನ್ ಡಿಸೋಜಾ ಬಣ ಮತ್ತು ಅಭಯಚಂದ್ರ ಜೈನ್ ಬಣಗಳು ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ತೋರಿಸಿದಂತೆ ಕಾಣುತ್ತಿತ್ತು. ಈ ಮಧ್ಯೆ ಸ್ಥಳೀಯ ಖಾಸಗಿ ವಾಹಿನಿಯೊಂದು ವಿಡಿಯೋ ತುಣುಕೊಂದನ್ನು ಪ್ರಸಾರ ಮಾಡಿದ್ದು ಅದರಲ್ಲಿ ಈ ಆಂತರಿಕ ಶೀತಲ ಸಮರ ನಡೆದಿರುವ ದೃಶ್ಯ ಪ್ರಸಾರವಾಗುತ್ತಿದೆ!

0
Shares
  • Share On Facebook
  • Tweet It


Bantwalmini vidan soudha


Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Ganesh Kumar March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Ganesh Kumar March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search