• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

100 ಸಿಸಿಗಿಂತ ಕಡಿಮೆ ಇದ್ದರೆ ಸಹಸವಾರ ಕೂರುವಂತಿಲ್ಲ!

Ganesh Kumar Posted On October 23, 2017
0


0
Shares
  • Share On Facebook
  • Tweet It

ಹೊಸ ವರ್ಷಕ್ಕೆ ಹೊಸ ಸ್ಕೂಟರ್ ಅಥವಾ ಬೈಕ್ ಖರೀದಿಸಲು ಯೋಚಿಸುತ್ತಿದ್ದಿರಾ? ಕಾಲೇಜಿನಲ್ಲಿ ಕಲಿಯುತ್ತಿರುವ ಮಗನಿಗೋ, ಮಗಳಿಗೋ ಹೊಸ ಸ್ಕೂಟಿ ತರಹದ್ದು ಖರೀದಿಸಿ ಕೊಡಲು ಪ್ಲಾನ್ ಹಾಕುತ್ತಿದ್ದೀರಾ? ಹೌದಾದರೆ ನಿಮ್ಮ ಯೋಚನೆಗಳಿಗೆ ಬ್ರೇಕ್ ಹಾಕಿ.
ಯಾಕೆಂದರೆ ಕರ್ನಾಟಕ ರಾಜ್ಯ ಮೋಟಾರು ವಾಹನ ಕಾಯ್ದೆಯಲ್ಲಿರುವ ಕಾನೂನನ್ನು ಎತ್ತಿ ಹಿಡಿದ ರಾಜ್ಯ ಉಚ್ಚ ನ್ಯಾಯಾಲಯ ಆ ಪ್ರಕಾರ 100 ಸಿಸಿ ಮೋಟಾರು ಇಂಜಿನ್ ಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಸಹಸವಾರ ಪ್ರಯಾಣಿಸುವುದರ ಕುರಿತು ಆಕ್ಷೇಪ ಎತ್ತಿ ಹಿಡಿದಿತ್ತು. ಅಂತಹ ವಾಹನಗಳಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತಿರುವುದು ಬೆಳಕಿಗೆ ಬಂದ ಕಾರಣ ಆ ಕಳಕಳಿ ವ್ಯಕ್ತವಾಗಿತ್ತು. ಅದರಂತೆ ರಾಜ್ಯ ಸಾರಿಗೆ ಇಲಾಖೆ 100 ಸಿಸಿಗಿಂತ ಕಡಿಮೆ ಸಾಮರ್ತ್ಯದ ಇಂಜಿನ್ ಇರುವ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರನ್ನು ಒಳಗೊಂಡ ವಾಹನಗಳನ್ನು ನೋಂದಾವಣೆ ಮಾಡುವುದನ್ನು ನಿಷೇಧಿಸಿದೆ. ಈ ಮೂಲಕ ನೀವು ಖರೀದಿಸುವ ಹೊಸ ದ್ವಿಚಕ್ರ ವಾಹನಗಳು 100 ಸಿಸಿಗಿಂತ ಕಡಿಮೆ ಇದ್ದರೆ ಅದರಲ್ಲಿ ಹಿಂಬದಿ ಸೀಟನ್ನೇ ರದ್ದು ಮಾಡಬೇಕು, ಅಂತಹ ಹಿಂಬದಿ ಸೀಟು ಇರುವ ವಾಹನಗಳನ್ನು ನೋಂದಾವಣೆ ಮಾಡಬಾರದು ಎಂದು ಸಾರಿಗೆ ಇಲಾಖೆಯಿಂದ ಎಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಸುತ್ತೋಲೆ ಕಳುಹಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಸುತ್ತೋಲೆ ಈಗಾಗಲೇ ರಸ್ತೆಯಲ್ಲಿ ಇರುವ ವಾಹನಗಳಿಗೆ ಅನ್ವಯಿಸುವುದಿಲ್ಲ.
ಇದರ ಮುಖ್ಯ ಉದ್ದೇಶ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತಗಳನ್ನು ಕಡಿಮೆ ಮಾಡುವುದು. ಯುವ ಜನಾಂಗ 100 ಸಿಸಿ ಕಡಿಮೆ ಇರುವ ದ್ವಿಚಕ್ರ ವಾಹನಗಳನ್ನು ಖರೀದಿಸಿ ನಿರ್ಲಕ್ಷ್ಯ ಚಾಲನೆ ಮಾಡಿದ ಕಾರಣ ಸಾವು ನೋವು ಹೆಚ್ಚು ಸಂಭವಿಸುತ್ತಿರುವುದರಿಂದ ಇಂತಹ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಉಚ್ಚ ನ್ಯಾಯಾಲಯ ಕೂಡ ಇದನ್ನು ಇತ್ತೀಚೆಗೆ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿರುವುದನ್ನು ನಾವು ಸ್ಮರಿಸಬಹುದು.

0
Shares
  • Share On Facebook
  • Tweet It


100 cc vehiclesno registration


Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Ganesh Kumar July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Ganesh Kumar July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search