• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

100 ಸಿಸಿಗಿಂತ ಕಡಿಮೆ ಇದ್ದರೆ ಸಹಸವಾರ ಕೂರುವಂತಿಲ್ಲ!

Ganesh Kumar Posted On October 23, 2017
0


0
Shares
  • Share On Facebook
  • Tweet It

ಹೊಸ ವರ್ಷಕ್ಕೆ ಹೊಸ ಸ್ಕೂಟರ್ ಅಥವಾ ಬೈಕ್ ಖರೀದಿಸಲು ಯೋಚಿಸುತ್ತಿದ್ದಿರಾ? ಕಾಲೇಜಿನಲ್ಲಿ ಕಲಿಯುತ್ತಿರುವ ಮಗನಿಗೋ, ಮಗಳಿಗೋ ಹೊಸ ಸ್ಕೂಟಿ ತರಹದ್ದು ಖರೀದಿಸಿ ಕೊಡಲು ಪ್ಲಾನ್ ಹಾಕುತ್ತಿದ್ದೀರಾ? ಹೌದಾದರೆ ನಿಮ್ಮ ಯೋಚನೆಗಳಿಗೆ ಬ್ರೇಕ್ ಹಾಕಿ.
ಯಾಕೆಂದರೆ ಕರ್ನಾಟಕ ರಾಜ್ಯ ಮೋಟಾರು ವಾಹನ ಕಾಯ್ದೆಯಲ್ಲಿರುವ ಕಾನೂನನ್ನು ಎತ್ತಿ ಹಿಡಿದ ರಾಜ್ಯ ಉಚ್ಚ ನ್ಯಾಯಾಲಯ ಆ ಪ್ರಕಾರ 100 ಸಿಸಿ ಮೋಟಾರು ಇಂಜಿನ್ ಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಸಹಸವಾರ ಪ್ರಯಾಣಿಸುವುದರ ಕುರಿತು ಆಕ್ಷೇಪ ಎತ್ತಿ ಹಿಡಿದಿತ್ತು. ಅಂತಹ ವಾಹನಗಳಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತಿರುವುದು ಬೆಳಕಿಗೆ ಬಂದ ಕಾರಣ ಆ ಕಳಕಳಿ ವ್ಯಕ್ತವಾಗಿತ್ತು. ಅದರಂತೆ ರಾಜ್ಯ ಸಾರಿಗೆ ಇಲಾಖೆ 100 ಸಿಸಿಗಿಂತ ಕಡಿಮೆ ಸಾಮರ್ತ್ಯದ ಇಂಜಿನ್ ಇರುವ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರನ್ನು ಒಳಗೊಂಡ ವಾಹನಗಳನ್ನು ನೋಂದಾವಣೆ ಮಾಡುವುದನ್ನು ನಿಷೇಧಿಸಿದೆ. ಈ ಮೂಲಕ ನೀವು ಖರೀದಿಸುವ ಹೊಸ ದ್ವಿಚಕ್ರ ವಾಹನಗಳು 100 ಸಿಸಿಗಿಂತ ಕಡಿಮೆ ಇದ್ದರೆ ಅದರಲ್ಲಿ ಹಿಂಬದಿ ಸೀಟನ್ನೇ ರದ್ದು ಮಾಡಬೇಕು, ಅಂತಹ ಹಿಂಬದಿ ಸೀಟು ಇರುವ ವಾಹನಗಳನ್ನು ನೋಂದಾವಣೆ ಮಾಡಬಾರದು ಎಂದು ಸಾರಿಗೆ ಇಲಾಖೆಯಿಂದ ಎಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಸುತ್ತೋಲೆ ಕಳುಹಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಸುತ್ತೋಲೆ ಈಗಾಗಲೇ ರಸ್ತೆಯಲ್ಲಿ ಇರುವ ವಾಹನಗಳಿಗೆ ಅನ್ವಯಿಸುವುದಿಲ್ಲ.
ಇದರ ಮುಖ್ಯ ಉದ್ದೇಶ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತಗಳನ್ನು ಕಡಿಮೆ ಮಾಡುವುದು. ಯುವ ಜನಾಂಗ 100 ಸಿಸಿ ಕಡಿಮೆ ಇರುವ ದ್ವಿಚಕ್ರ ವಾಹನಗಳನ್ನು ಖರೀದಿಸಿ ನಿರ್ಲಕ್ಷ್ಯ ಚಾಲನೆ ಮಾಡಿದ ಕಾರಣ ಸಾವು ನೋವು ಹೆಚ್ಚು ಸಂಭವಿಸುತ್ತಿರುವುದರಿಂದ ಇಂತಹ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಉಚ್ಚ ನ್ಯಾಯಾಲಯ ಕೂಡ ಇದನ್ನು ಇತ್ತೀಚೆಗೆ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿರುವುದನ್ನು ನಾವು ಸ್ಮರಿಸಬಹುದು.

0
Shares
  • Share On Facebook
  • Tweet It


100 cc vehiclesno registration


Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Ganesh Kumar December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Ganesh Kumar December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search