• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

100 ಸಿಸಿಗಿಂತ ಕಡಿಮೆ ಇದ್ದರೆ ಸಹಸವಾರ ಕೂರುವಂತಿಲ್ಲ!

Ganesh Kumar Posted On October 23, 2017
0


0
Shares
  • Share On Facebook
  • Tweet It

ಹೊಸ ವರ್ಷಕ್ಕೆ ಹೊಸ ಸ್ಕೂಟರ್ ಅಥವಾ ಬೈಕ್ ಖರೀದಿಸಲು ಯೋಚಿಸುತ್ತಿದ್ದಿರಾ? ಕಾಲೇಜಿನಲ್ಲಿ ಕಲಿಯುತ್ತಿರುವ ಮಗನಿಗೋ, ಮಗಳಿಗೋ ಹೊಸ ಸ್ಕೂಟಿ ತರಹದ್ದು ಖರೀದಿಸಿ ಕೊಡಲು ಪ್ಲಾನ್ ಹಾಕುತ್ತಿದ್ದೀರಾ? ಹೌದಾದರೆ ನಿಮ್ಮ ಯೋಚನೆಗಳಿಗೆ ಬ್ರೇಕ್ ಹಾಕಿ.
ಯಾಕೆಂದರೆ ಕರ್ನಾಟಕ ರಾಜ್ಯ ಮೋಟಾರು ವಾಹನ ಕಾಯ್ದೆಯಲ್ಲಿರುವ ಕಾನೂನನ್ನು ಎತ್ತಿ ಹಿಡಿದ ರಾಜ್ಯ ಉಚ್ಚ ನ್ಯಾಯಾಲಯ ಆ ಪ್ರಕಾರ 100 ಸಿಸಿ ಮೋಟಾರು ಇಂಜಿನ್ ಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಸಹಸವಾರ ಪ್ರಯಾಣಿಸುವುದರ ಕುರಿತು ಆಕ್ಷೇಪ ಎತ್ತಿ ಹಿಡಿದಿತ್ತು. ಅಂತಹ ವಾಹನಗಳಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತಿರುವುದು ಬೆಳಕಿಗೆ ಬಂದ ಕಾರಣ ಆ ಕಳಕಳಿ ವ್ಯಕ್ತವಾಗಿತ್ತು. ಅದರಂತೆ ರಾಜ್ಯ ಸಾರಿಗೆ ಇಲಾಖೆ 100 ಸಿಸಿಗಿಂತ ಕಡಿಮೆ ಸಾಮರ್ತ್ಯದ ಇಂಜಿನ್ ಇರುವ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರನ್ನು ಒಳಗೊಂಡ ವಾಹನಗಳನ್ನು ನೋಂದಾವಣೆ ಮಾಡುವುದನ್ನು ನಿಷೇಧಿಸಿದೆ. ಈ ಮೂಲಕ ನೀವು ಖರೀದಿಸುವ ಹೊಸ ದ್ವಿಚಕ್ರ ವಾಹನಗಳು 100 ಸಿಸಿಗಿಂತ ಕಡಿಮೆ ಇದ್ದರೆ ಅದರಲ್ಲಿ ಹಿಂಬದಿ ಸೀಟನ್ನೇ ರದ್ದು ಮಾಡಬೇಕು, ಅಂತಹ ಹಿಂಬದಿ ಸೀಟು ಇರುವ ವಾಹನಗಳನ್ನು ನೋಂದಾವಣೆ ಮಾಡಬಾರದು ಎಂದು ಸಾರಿಗೆ ಇಲಾಖೆಯಿಂದ ಎಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಸುತ್ತೋಲೆ ಕಳುಹಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಸುತ್ತೋಲೆ ಈಗಾಗಲೇ ರಸ್ತೆಯಲ್ಲಿ ಇರುವ ವಾಹನಗಳಿಗೆ ಅನ್ವಯಿಸುವುದಿಲ್ಲ.
ಇದರ ಮುಖ್ಯ ಉದ್ದೇಶ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತಗಳನ್ನು ಕಡಿಮೆ ಮಾಡುವುದು. ಯುವ ಜನಾಂಗ 100 ಸಿಸಿ ಕಡಿಮೆ ಇರುವ ದ್ವಿಚಕ್ರ ವಾಹನಗಳನ್ನು ಖರೀದಿಸಿ ನಿರ್ಲಕ್ಷ್ಯ ಚಾಲನೆ ಮಾಡಿದ ಕಾರಣ ಸಾವು ನೋವು ಹೆಚ್ಚು ಸಂಭವಿಸುತ್ತಿರುವುದರಿಂದ ಇಂತಹ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಉಚ್ಚ ನ್ಯಾಯಾಲಯ ಕೂಡ ಇದನ್ನು ಇತ್ತೀಚೆಗೆ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿರುವುದನ್ನು ನಾವು ಸ್ಮರಿಸಬಹುದು.

0
Shares
  • Share On Facebook
  • Tweet It


100 cc vehiclesno registration


Trending Now
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Ganesh Kumar September 16, 2025
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Ganesh Kumar September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
  • Popular Posts

    • 1
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 2
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 3
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 4
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 5
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

  • Privacy Policy
  • Contact
© Tulunadu Infomedia.

Press enter/return to begin your search