• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

100 ಸಿಸಿಗಿಂತ ಕಡಿಮೆ ಇದ್ದರೆ ಸಹಸವಾರ ಕೂರುವಂತಿಲ್ಲ!

Ganesh Kumar Posted On October 23, 2017
0


0
Shares
  • Share On Facebook
  • Tweet It

ಹೊಸ ವರ್ಷಕ್ಕೆ ಹೊಸ ಸ್ಕೂಟರ್ ಅಥವಾ ಬೈಕ್ ಖರೀದಿಸಲು ಯೋಚಿಸುತ್ತಿದ್ದಿರಾ? ಕಾಲೇಜಿನಲ್ಲಿ ಕಲಿಯುತ್ತಿರುವ ಮಗನಿಗೋ, ಮಗಳಿಗೋ ಹೊಸ ಸ್ಕೂಟಿ ತರಹದ್ದು ಖರೀದಿಸಿ ಕೊಡಲು ಪ್ಲಾನ್ ಹಾಕುತ್ತಿದ್ದೀರಾ? ಹೌದಾದರೆ ನಿಮ್ಮ ಯೋಚನೆಗಳಿಗೆ ಬ್ರೇಕ್ ಹಾಕಿ.
ಯಾಕೆಂದರೆ ಕರ್ನಾಟಕ ರಾಜ್ಯ ಮೋಟಾರು ವಾಹನ ಕಾಯ್ದೆಯಲ್ಲಿರುವ ಕಾನೂನನ್ನು ಎತ್ತಿ ಹಿಡಿದ ರಾಜ್ಯ ಉಚ್ಚ ನ್ಯಾಯಾಲಯ ಆ ಪ್ರಕಾರ 100 ಸಿಸಿ ಮೋಟಾರು ಇಂಜಿನ್ ಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಸಹಸವಾರ ಪ್ರಯಾಣಿಸುವುದರ ಕುರಿತು ಆಕ್ಷೇಪ ಎತ್ತಿ ಹಿಡಿದಿತ್ತು. ಅಂತಹ ವಾಹನಗಳಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತಿರುವುದು ಬೆಳಕಿಗೆ ಬಂದ ಕಾರಣ ಆ ಕಳಕಳಿ ವ್ಯಕ್ತವಾಗಿತ್ತು. ಅದರಂತೆ ರಾಜ್ಯ ಸಾರಿಗೆ ಇಲಾಖೆ 100 ಸಿಸಿಗಿಂತ ಕಡಿಮೆ ಸಾಮರ್ತ್ಯದ ಇಂಜಿನ್ ಇರುವ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರನ್ನು ಒಳಗೊಂಡ ವಾಹನಗಳನ್ನು ನೋಂದಾವಣೆ ಮಾಡುವುದನ್ನು ನಿಷೇಧಿಸಿದೆ. ಈ ಮೂಲಕ ನೀವು ಖರೀದಿಸುವ ಹೊಸ ದ್ವಿಚಕ್ರ ವಾಹನಗಳು 100 ಸಿಸಿಗಿಂತ ಕಡಿಮೆ ಇದ್ದರೆ ಅದರಲ್ಲಿ ಹಿಂಬದಿ ಸೀಟನ್ನೇ ರದ್ದು ಮಾಡಬೇಕು, ಅಂತಹ ಹಿಂಬದಿ ಸೀಟು ಇರುವ ವಾಹನಗಳನ್ನು ನೋಂದಾವಣೆ ಮಾಡಬಾರದು ಎಂದು ಸಾರಿಗೆ ಇಲಾಖೆಯಿಂದ ಎಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಸುತ್ತೋಲೆ ಕಳುಹಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಸುತ್ತೋಲೆ ಈಗಾಗಲೇ ರಸ್ತೆಯಲ್ಲಿ ಇರುವ ವಾಹನಗಳಿಗೆ ಅನ್ವಯಿಸುವುದಿಲ್ಲ.
ಇದರ ಮುಖ್ಯ ಉದ್ದೇಶ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತಗಳನ್ನು ಕಡಿಮೆ ಮಾಡುವುದು. ಯುವ ಜನಾಂಗ 100 ಸಿಸಿ ಕಡಿಮೆ ಇರುವ ದ್ವಿಚಕ್ರ ವಾಹನಗಳನ್ನು ಖರೀದಿಸಿ ನಿರ್ಲಕ್ಷ್ಯ ಚಾಲನೆ ಮಾಡಿದ ಕಾರಣ ಸಾವು ನೋವು ಹೆಚ್ಚು ಸಂಭವಿಸುತ್ತಿರುವುದರಿಂದ ಇಂತಹ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಉಚ್ಚ ನ್ಯಾಯಾಲಯ ಕೂಡ ಇದನ್ನು ಇತ್ತೀಚೆಗೆ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿರುವುದನ್ನು ನಾವು ಸ್ಮರಿಸಬಹುದು.

0
Shares
  • Share On Facebook
  • Tweet It


100 cc vehiclesno registration


Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Ganesh Kumar February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Ganesh Kumar February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search