• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶಭಕ್ತಿ ಸಾಬೀತಿಗೆ ಸಿನಿಮಾ ಮಂದಿರದಲ್ಲಿ ಎದ್ದು ನಿಲ್ಲುವುದು ಕಡ್ಡಾಯವಲ್ಲ : ಸುಪ್ರೀಂ

TNN Correspondent Posted On October 24, 2017
0


0
Shares
  • Share On Facebook
  • Tweet It

>> ರಾಷ್ಟ್ರಭಕ್ತ ಎಂದು ತೋಳಿನ ಮೇಲೆ ಮುದ್ರಿಸಿಕೊಂಡು ತಿರುಗಲು ಸಾಧ್ಯವಿಲ್ಲ

ನ್ಯೂಡೆಲ್ಲಿ : ಪ್ರಸ್ತುತ ಮುಖ್ಯ ನ್ಯಾಯಮೂರ್ತಿಯಾಗಿರುವ ದೀಪಕ್ ಮಿಶ್ರಾ ಸಿನಿಮಾ ಮಂದಿರಗಳಲ್ಲಿ ಚಿತ್ರ ಪ್ರಸಾರಕ್ಕೂ ಮುನ್ನ ರಾಷ್ಟ್ರಗೀತೆ ಮೊಳಗುವುದು ಕಡ್ಡಾಯ ಎಂದು 2016ರಲ್ಲಿ ನೀಡಿದ್ದ ತೀರ್ಪಿಗೆ ವ್ಯತಿರಿಕ್ತವಾಗಿ ತ್ರಿಸದಸ್ಯ ಪೀಠದಲ್ಲಿ ಮಿಶ್ರಾ ಪಕ್ಕದಲ್ಲಿ ಕೂತು ನ್ಯಾ.ಚಂದ್ರಚೂಡ್ ಹೇಳಿಕೆ ನೀಡಿದ್ದಾರೆ. ಸ್ವತಃ ಮುಖ್ಯ ನ್ಯಾ. ದೀಪ್ ಮಿಶ್ರಾ ವ್ಯತಿರಿಕ್ತ ಹೇಳಿಕೆ ದಾಖಲಿಸಿದ್ದಾರೆ. ನ.30, 2016ರಂದು ಸುಪ್ರೀಂಕೋರ್ಟ್‍ನ ತ್ರಿಸದಸ್ಯ ಪೀಠದಲ್ಲಿದ್ದ ನ್ಯಾ. ಮಿಶ್ರಾ “ಒಂದು ಬದ್ಧತೆಯ ದೇಶಭಕ್ತಿ ಮತ್ತು ರಾಷ್ಟ್ರೀಯತೆಯನ್ನು ಪ್ರಜೆಯಲ್ಲಿ ಜಾಗೃತವಾಗಿಡಲು ಪ್ರತಿ ಶೋ ಮುನ್ನ ರಾಷ್ಟ್ರಗೀತೆ ಪ್ರಸಾರ ಕಡ್ಡಾಯ. ಎಲ್ಲ ವೀಕ್ಷಕರು ಎದ್ದು ನಿಂತು ಗೌರವ ಸೂಚಿಸಲೇಬೇಕು ” ಎಂದಿದ್ದರು.
ಸೋಮವಾರ ಕೇರಳದ ಕೊಡುಂಗಲ್ಲೂರು ಫಿಲ್ಮ್ ಸೊಸೈಟಿ ನ.2016ರ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭ ಚಂದ್ರಚೂಡ್ ಅದಕ್ಕೆ ಉಲ್ಟಾ ಅಭಿಪ್ರಾಯಪಟ್ಟಿದ್ದಾರೆ.

” ಒಂದು ಹೆಜ್ಜೆ ಮುಂದುವರಿದು ಸಿನಿಮಾ ಮಂದಿರದಲ್ಲಿ ಚಡ್ಡಿ ಮತ್ತು ಟಿ-ಶರ್ಟ್ ತೊಟ್ಟು ಬರಬಾರದು, ಇದರಿಂದ ರಾಷ್ಟ್ರಗೀತೆಗೆ ಅಗೌರವ ಎನ್ನುತ್ತೀರಿ. ಇಂಥ ನೈತಿಕ ಪೊಲೀಸ್‍ಗಿರಿ ನಿಲ್ಲುವುದಿಲ್ಲ’ ಎಂದು ನ್ಯಾ. ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ.

ದೇಶದ ಪ್ರಜೆ ತನ್ನ ತೋಳುಗಳ ಮೇಲೆ ಭಾರತದ ಪರವಾಗಿ ದೇಶಭಕ್ತಿಯನ್ನು ಮುದ್ರಿಸಿಕೊಂಡು ತಿರುಗುವುದು ಅಸಾಧ್ಯ ಎಂದು ಚಂದ್ರಚೂಡ್ ರಾಷ್ಠ್ರಭಕ್ತಿ ಚಿಂತಕರಿಗೆ ಟಾಂಗ್ ಕೊಟ್ಟಿದ್ದಾರೆ. ಅಟಾರ್ನಿ ಜೆನರಲ್ ಕೆ.ಕೆ.ವೇಣುಗೋಪಾಲ್ 2016ರ ತೀರ್ಪು ಪರವಾಗಿ ಸಲ್ಲಿಸಿದ ವರದಿ ಆಧರಿಸಿ ಮಾತನಾಡುತ್ತಾ ” ದೇಶಭಕ್ತರೆಂದು ಸಾರುವುದಕ್ಕೆ ಸಿನಿಮಾ ಮಂದಿರದಲ್ಲಿ ರಾಷ್ಟ್ರಗೀತೆ ಮೊಳಗುವಾಗ ಎದ್ದು ನಿಲ್ಲುವುದು ಕಡ್ಡಾಯವಲ್ಲ’ ಎಂದಿದ್ದಾರೆ.
ಹಲವು ವಾದಗಳ ನಂತರ ಕೇಂದ್ರ ಸರ್ಕಾರದ ಮೈದಾನಕ್ಕೆ ಸುಪ್ರೀಂಕೋರ್ಟ್ ಚೆಂಡನ್ನು ತಳ್ಳಿದೆ. ಜ.9, 2018ರೊಳಗೆ ನಿರ್ದಿಷ್ಟ ನಿಯಮಗಳ ಅಧಿಸೂಚನೆ ಪ್ರಕಟಿಸಿ ಸಿನಿಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಪ್ರಸಾರಕ್ಕೆ ಕಡ್ಡಾಯವಾಗಿ ಎದ್ದು ನಿಲ್ಲಬೇಕೊ, ಬೇಡವೊ ಎಂದು ಸ್ಪಷ್ಟಪಡಿಸಿ ಎಂದು ಸುಪ್ರೀಂ ಸೂಚಿಸಿದೆ.

 

0
Shares
  • Share On Facebook
  • Tweet It


anthemchandrachudcourtindiamodinationalndarahul gandhisoniasupremeupa


Trending Now
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
Tulunadu News April 6, 2026
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
You may also like
ವಿಶ್ವದ ದೊಡ್ಡಣ್ಣ ಅಮೆರಿಕಕ್ಕೆ ಸೆಡ್ಡು ಹೊಡೆದ ಭಾರತ: ರಷ್ಯಾದಿಂದ ಎಸ್ -400 ಕ್ಷಿಪಣಿ ಕೊಳಲು ಮುಂದಾದ ಭಾರತ
July 1, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
  • Popular Posts

    • 1
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search