• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರ ಪ್ರತ್ಯೇಕತಾವಾದಿಗಳ ಜತೆಗೆ ಸಂಧಾನ ಮಾತುಕತೆಗೆ ಮಧ್ಯವರ್ತಿಯಾಗಿ ದಿನೇಶ್ವರ ಶರ್ಮಾ : ರಾಜನಾಥ್

TNN Correspondent Posted On October 24, 2017
0


0
Shares
  • Share On Facebook
  • Tweet It

ನ್ಯೂಡೆಲ್ಲಿ : ಕಾಶ್ಮೀರ ಕಣಿವೆಯಲ್ಲಿ ಪಾಕ್ ಪ್ರಚೋದಿತ ಉಗ್ರರರಿಗೆ ನೆರವು ನೀಡುತ್ತಾ ಗಲಭೆ ಎಬ್ಬಿಸುತ್ತಿರುವ ಹುರ್ರಿಯತ್ ಮುಖಂಡರೊಂದಿಗೆ ಸಂಧಾನ ಮಾತುಕತೆ ಕೇಂದ್ರ ಸರ್ಕಾರ ಮುಂದಾಗಿದೆ. ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿರುವ ಹುರ್ರಿಯತ್ ಮುಖಂಡರ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ತನಿಖೆ ನಡೆಸುತ್ತಿರುವ ಬೆನ್ನಲ್ಲೇ ಗೃಹ ಸಚಿವ ರಾಜನಾಥ್ ಸಿಂಗ್ ಶರ್ಮಾರನ್ನು ಸಂವಹನಕ್ಕೆ ತಳ್ಳುತ್ತಿದ್ದಾರೆ. ಇದೊಂದು ಭಾರಿ ಆಶ್ಚರ್ಯಕರ ನಡೆಯಾಗಿದ್ದು ನಿರಂತರ ಸಂವಹನದ ಮೂಲಕ ಕಣಿವೆಯಲ್ಲಿ ಶಾಂತಿ ಸ್ಥಾಪನೆ ನಮ್ಮ ಉದ್ದೇಶ ಎಂದು ಸಚಿವ ರಾಜನಾಥ್ ಹೇಳಿದ್ದಾರೆ.


ಯಾವುದೇ ಪ್ರಾದೇಶಿಕ , ರಾಷ್ಟ್ರೀಯ ಪಕ್ಷಗಳೊಂದಿಗೆ ಮಾತುಕತೆಗೆ ಸರ್ಕಾರ ಸಿದ್ದ. ಅದೇ ರೀತಿ ಜಮ್ಮು-ಕಾಶ್ಮೀರ ಯುವಕರ ಒಳಿತಿಗಾಗಿ ಶರ್ಮಾ ಅವರಿಗೆ ಪೂರ್ಣ ಸ್ವಾತಂತ್ರ್ಯವನ್ನು ಸರ್ಕಾರ ಕೊಟ್ಟಿದೆ. ಅವರು ಯಾವುದೇ ರಾಜಕೀಯ ಮುಖಂಡರೊಂದಿಗೆ ಮಾತುಕತೆ ನಡೆಸಬಹುದು ಎಂದು ಸಿಂಗ್ ಮುಕ್ತ ಅಧಿಕಾರ ನೀಡಿರುವ ಸ್ಪಷ್ಟನೆ ಕೊಟ್ಟರು.

1979ರ ಐಪಿಎಸ್ ಬ್ಯಾಚ್‍ನ ಅಧಿಕಾರಿಯಾಗಿರುವ ಶರ್ಮಾ, 2014 ರಿಂದ 16ರವರೆಗೆ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿದ್ದರು. ನಂತರ ಅವರನ್ನು ಅಸ್ಸಾಂನಲ್ಲಿ ಉಲ್ಫಾ ಉಗ್ರರ ಶರಣಾಗತಿಗೆ ಸಂಧಾನಕಾರರನ್ನಾಗಿ ಕೇಂದ್ರ ಸರ್ಕಾರ ನೇಮಿಸಿತ್ತು. ಕೇರಳದಲ್ಲಿ ಐಸಿಸ್ ನೇಮಕಾತಿ, ಉಗ್ರ ಬುರ್ಹನ್ ವನಿ ಎನ್‍ಕೌಂಟರ್‍ನಲ್ಲಿ ಹತ್ಯೆಯಂಥ ಪ್ರಮುಖ ಬೆಳವಣಿಗೆಗಳು ಶರ್ಮಾ ಅವರ ಗುಪ್ತಚರ ದಳ ಮುಖ್ಯಸ್ಥರಾಗುದ್ದಾಗ ನಡೆದಿದ್ದವು.

0
Shares
  • Share On Facebook
  • Tweet It


conferencedineshwargandhihuriyatibintelligenceipskashmirkashmirimodindarahulrajnathseparatistssharmasinghterroryouth


Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
June 19, 2018
ಈ ಬಾರಿ ಲೋಕಸಭಾ ಚುನಾವಣೆ 2004 ರ ಪುನರಾವರ್ತನೆಯಾ?
June 2, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search