• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಜಾತ್ಯತೀತ ವಾದಿ ಸೋಗಲಾಡಿಗಳೇ ಈಗೆಲ್ಲಿದ್ದೀರಿ, ಇದನ್ನು ಖಂಡಿಸುವ ತಾಕತ್ತಿದೆಯಾ ನಿಮಗೆ?

-ನಾಗೇಶ್ ರಾವ್, ಉಡುಪಿ Posted On October 24, 2017
0


0
Shares
  • Share On Facebook
  • Tweet It

ಬಸವಣ್ಣನವರು 12ನೇ ಶತಮಾನದಲ್ಲೇ ಅಂತರ್ಜಾತಿ ವಿವಾಹ ಮಾಡಿಸಿ ಮೇಲ್ಪಂಕ್ತಿ ಹಾಕಿದರು ನಿಜ. ಆದರೆ ಆಗಲೂ ಅದನ್ನು ಕೆಲ ಕುತ್ಸಿತ ಮನಸ್ಸುಗಳು ವಿರೋಧಿಸಿದ್ದವು ಎಂಬುದೂ ನಿಜ.

ಈ ಜಾತ್ಯತೀತವಾದ, ಅಂತರ್ಜಾತಿ ವಿವಾಹ ಪ್ರಚಾರದ ಸರಕಾಗಿದ್ದೂ ಅಷ್ಟೇ ನಿಜ. ಅದಕ್ಕಾಗಿಯೇ ಕೆಲವರು ಬ್ರಾಹ್ಮಣರು ದಲಿತರನ್ನು ಮದುವೆಯಾಗಲಿ ನೋಡೋಣ ಎಂದು ಬಾಯಿಯ ತಲುಬು ತೀರಿಸಿಕೊಳ್ಳುತ್ತಾರೆ. ಆದರೆ ಅದೇ ಮುಸ್ಲಿಮರು ಹಿಂದೂಗಳನ್ನು ಮದುವೆಯಾಗಿ, ಮೆಹಬೂಬ್ ಇದ್ದುದನ್ನು ರಾಮಣ್ಣನಾಗಿ ಬದಲಾಗಲಿ ಎನ್ನಲು ತಾಕತ್ತಿರುವುದಿಲ್ಲ.

ಆದರೂ ಕೇರಳದಲ್ಲಿ ಮುಸ್ಲಿಂ ಕುಟುಂಬವೊಂದು ನಿಜವಾದ ಜಾತ್ಯತೀತತನ ಮೆರೆದು ಅಂತರ್ಜಾತಿಯ ವಿವಾಹಕ್ಕೆ ಪ್ರೋತ್ಸಾಹ ನೀಡುತ್ತಿದೆ. ಇಂಥ ವಿವಾಹ ಮಾಡಿಸುತ್ತಿದೆ. ಆದರೆ ಮುಸ್ಲಿಂ ಮೂಲಭೂತವಾದಿಗಳು ಇದನ್ನು ಸಹಿಸದೆ ಇಡೀ ಕುಟುಂಬವನ್ನೇ ಸಮಾಜದಿಂದ ಬಹಿಷ್ಕಾರ ಮಾಡಿದ್ದಾರೆ.

ಕುನ್ನುಮ್ಮಲ್ ಯೂಸುಫ್ ಹಾಗೂ ಅವರ ಕುಟುಂಬ ಅಂತರ್ಜಾತಿಯ ವಿವಾಹ ಬೆಂಬಲಿಸುತ್ತಿದೆ. ಬರೀ ಬಾಯಿ ಮಾತಿಗಷ್ಟೇ ಮಾಡದೆ, ಬೇರೆಯವರ ಮಕ್ಕಳನ್ನ ಬೇರೆ ಜಾತಿಯವರಿಗೆ ಮದುವೆ ಮಾಡಿ ಕೊಡದೆ, ತಮ್ಮ ಮನೆಯ ಹೆಣ್ಣುಮಕ್ಕಳನ್ನು ಹಿಂದೂ ಸೇರಿ ನಾನಾ ಮುಸ್ಲಿಮೇತರರಿಗೆ ಮದುವೆ ಮಾಡಿಕೊಟ್ಟಿದೆ.

ಇದನ್ನು ಸಹಿಸದ ಮದುರಲ್ ಇಸ್ಲಾಂ ಸಂಘಮ್ಸ್ ಮಹಲ್ಲು ಸಮಿತಿ ಎಂಬ ಮಸೀದಿ ಆಡಳಿತ ಕಮಿಟಿ ಕುಟುಂಬವನ್ನು ಸಾಮಾಜಿಕವಾಗಿ ಬಹಿಷ್ಕರಿಸಿದೆ. ಅಲ್ಲದೆ, ಸಮಿತಿ ಜತೆಗೆ ಕುಟುಂಬಕ್ಕಿದ್ದ ನಂಟನ್ನು ಕಿತ್ತುಹಾಕಿ ನೋಟಿಸ್ ನೀಡಿದೆ.

ಅಲ್ಲ ಸ್ವಾಮಿ, ಜಾತ್ಯತೀತವಾದವನ್ನು ಬೆಂಬಲಿಸುವವರು, ಬೇರೊಬ್ಬರಲ್ಲಿ ಅಸಹಿಷ್ಣುತೆ ಇದೆ ಎಂದು ಬೊಬ್ಬೆ ಹಾಕುವವರು, ಸ್ವತಃ ತಂದೆಯೇ ಒಪ್ಪಿ ತಮ್ಮ ಮಗಳನ್ನು ಬೇರೆ ಧರ್ಮೀಯರೊಂದಿಗೆ ಮದುವೆ ಮಾಡಿಕೊಟ್ಟರೆ ನಿಮಗೇನು ತ್ರಾಸ? ಇದು ಹೇಗೆ ಇಸ್ಲಾಮಿಗೆ ವಿರೋಧವಾಗುತ್ತದೆ ಹಾಗೂ ಸಾಮಾಜಿಕ ಬಹಿಷ್ಕಾರ ಮಾಡುವ ತಪ್ಪಾಗುತ್ತದೆ?

ಇಷ್ಟಾದರೂ ಬಸವ ತತ್ವವಾದಿಗಳು, ಪ್ರತ್ಯೇಕ ಧರ್ಮ ಮಾಡಬೇಕು ಎನ್ನುವವರು, ಜಾತ್ಯತೀತವಾದಿಗಳು ಸೊಲ್ಲೆತ್ತುತ್ತಿಲ್ಲ? ಯಾರೂ ಏಕೆ ಇಸ್ಲಾಂ ಧರ್ಮಗುರುಗಳ ಈ ಅಸಹಿಷ್ಣುತೆಯನ್ನು ವಿರೋಧಿಸಲ್ಲ? ಯಾವ ಮಾಧ್ಯಮಗಳೂ ಇದನ್ನೇಕೆ ಬಿತ್ತರಿಸಲ್ಲ? ಯಾವ ಬರ್ಖಾ ದತ್, ರಾಜ್ ದೀಪ್ ಸರ್ದೇಸಾಯಿ, ಯಾವ ಕಾಂಗ್ರೆಸ್, ಯಾವ ಮಹಿಳೆಯರನ್ನು ಉದ್ಧಾರ ಮಾಡುವೆ ಎನ್ನುವ ರಾಹುಲ್ ಗಾಂಧಿ, ಯಾವ ಪ್ರಕಾಶ್ ರೈ… ಹೂಂ, ಹೂಂ. ಒಬ್ಬರೂ ಬಾಯಿ ಬಿಡುತ್ತಿಲ್ಲ? ಇಂಥವರು ಮಾತ್ರ ಬೇರೆಯವರನ್ನು ಕೋಮುವಾದಿಗಳು ಎಂಬ ಪಟ್ಟ ಕಟ್ಟುತ್ತಾರೆ. ಇದು ಮಾತ್ರ ಕೋಮಲವಾದವೇ?

ಯೂಸುಫ್ ಮುಸ್ಲಿಮೇತರನ ಜತೆಗೆ ತಮ್ಮ ಮಗಳ ಜತೆ ಮದುವೆ ನಿಶ್ಚಯಿಸಿದ ಬೆನ್ನಲ್ಲೇ ಅ.19ರಂದು ಸಮಿತಿ ನೋಟಿಸ್ ಜಾರಿ ಮಾಡಿದೆ. ಆದರೂ ಯೂಸುಫ್ ಅ.20ರಂದು ತಮ್ಮ ಮಗಳನ್ನು ಕ್ರಿಶ್ಚಿಯನ್ ವ್ಯಕ್ತಿಗೆ ಧಾರೆಯೆರೆದಿದ್ದಾರೆ. ಅದ್ದೂರಿ ಮದುವೆಗೆ ನೂರಾರು ಜನ ಆಗಮಿಸಿ ಶುಭಾಶಯ ಕೋರಿದ್ದಾರೆ. ಈಗ ಇಸ್ಲಾಂ ಧರ್ಮಗುರುಗುಳು, ಸೋಗಲಾಡಿ ಜಾತ್ಯತೀತವಾದಿಗಳು ಕರೆಂಡು ಹೊಡೆದ ಕಾಗೆಯಂತಾಗಿದ್ದಾರೆ ನಿಜ. ಆದರೆ ಸಾಮಾಜಿಕ ಬಹಿಷ್ಕಾರದಂಥ ಕೃತ್ಯವನ್ನೂ ವಿರೋಧಿಸದವರನ್ನು ಏನೆನ್ನಬೇಕೋ ತಿಳಿಯುತ್ತಿಲ್ಲ.

 

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
-ನಾಗೇಶ್ ರಾವ್, ಉಡುಪಿ December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
-ನಾಗೇಶ್ ರಾವ್, ಉಡುಪಿ December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search