• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಜಾತ್ಯತೀತ ವಾದಿ ಸೋಗಲಾಡಿಗಳೇ ಈಗೆಲ್ಲಿದ್ದೀರಿ, ಇದನ್ನು ಖಂಡಿಸುವ ತಾಕತ್ತಿದೆಯಾ ನಿಮಗೆ?

-ನಾಗೇಶ್ ರಾವ್, ಉಡುಪಿ Posted On October 24, 2017
0


0
Shares
  • Share On Facebook
  • Tweet It

ಬಸವಣ್ಣನವರು 12ನೇ ಶತಮಾನದಲ್ಲೇ ಅಂತರ್ಜಾತಿ ವಿವಾಹ ಮಾಡಿಸಿ ಮೇಲ್ಪಂಕ್ತಿ ಹಾಕಿದರು ನಿಜ. ಆದರೆ ಆಗಲೂ ಅದನ್ನು ಕೆಲ ಕುತ್ಸಿತ ಮನಸ್ಸುಗಳು ವಿರೋಧಿಸಿದ್ದವು ಎಂಬುದೂ ನಿಜ.

ಈ ಜಾತ್ಯತೀತವಾದ, ಅಂತರ್ಜಾತಿ ವಿವಾಹ ಪ್ರಚಾರದ ಸರಕಾಗಿದ್ದೂ ಅಷ್ಟೇ ನಿಜ. ಅದಕ್ಕಾಗಿಯೇ ಕೆಲವರು ಬ್ರಾಹ್ಮಣರು ದಲಿತರನ್ನು ಮದುವೆಯಾಗಲಿ ನೋಡೋಣ ಎಂದು ಬಾಯಿಯ ತಲುಬು ತೀರಿಸಿಕೊಳ್ಳುತ್ತಾರೆ. ಆದರೆ ಅದೇ ಮುಸ್ಲಿಮರು ಹಿಂದೂಗಳನ್ನು ಮದುವೆಯಾಗಿ, ಮೆಹಬೂಬ್ ಇದ್ದುದನ್ನು ರಾಮಣ್ಣನಾಗಿ ಬದಲಾಗಲಿ ಎನ್ನಲು ತಾಕತ್ತಿರುವುದಿಲ್ಲ.

ಆದರೂ ಕೇರಳದಲ್ಲಿ ಮುಸ್ಲಿಂ ಕುಟುಂಬವೊಂದು ನಿಜವಾದ ಜಾತ್ಯತೀತತನ ಮೆರೆದು ಅಂತರ್ಜಾತಿಯ ವಿವಾಹಕ್ಕೆ ಪ್ರೋತ್ಸಾಹ ನೀಡುತ್ತಿದೆ. ಇಂಥ ವಿವಾಹ ಮಾಡಿಸುತ್ತಿದೆ. ಆದರೆ ಮುಸ್ಲಿಂ ಮೂಲಭೂತವಾದಿಗಳು ಇದನ್ನು ಸಹಿಸದೆ ಇಡೀ ಕುಟುಂಬವನ್ನೇ ಸಮಾಜದಿಂದ ಬಹಿಷ್ಕಾರ ಮಾಡಿದ್ದಾರೆ.

ಕುನ್ನುಮ್ಮಲ್ ಯೂಸುಫ್ ಹಾಗೂ ಅವರ ಕುಟುಂಬ ಅಂತರ್ಜಾತಿಯ ವಿವಾಹ ಬೆಂಬಲಿಸುತ್ತಿದೆ. ಬರೀ ಬಾಯಿ ಮಾತಿಗಷ್ಟೇ ಮಾಡದೆ, ಬೇರೆಯವರ ಮಕ್ಕಳನ್ನ ಬೇರೆ ಜಾತಿಯವರಿಗೆ ಮದುವೆ ಮಾಡಿ ಕೊಡದೆ, ತಮ್ಮ ಮನೆಯ ಹೆಣ್ಣುಮಕ್ಕಳನ್ನು ಹಿಂದೂ ಸೇರಿ ನಾನಾ ಮುಸ್ಲಿಮೇತರರಿಗೆ ಮದುವೆ ಮಾಡಿಕೊಟ್ಟಿದೆ.

ಇದನ್ನು ಸಹಿಸದ ಮದುರಲ್ ಇಸ್ಲಾಂ ಸಂಘಮ್ಸ್ ಮಹಲ್ಲು ಸಮಿತಿ ಎಂಬ ಮಸೀದಿ ಆಡಳಿತ ಕಮಿಟಿ ಕುಟುಂಬವನ್ನು ಸಾಮಾಜಿಕವಾಗಿ ಬಹಿಷ್ಕರಿಸಿದೆ. ಅಲ್ಲದೆ, ಸಮಿತಿ ಜತೆಗೆ ಕುಟುಂಬಕ್ಕಿದ್ದ ನಂಟನ್ನು ಕಿತ್ತುಹಾಕಿ ನೋಟಿಸ್ ನೀಡಿದೆ.

ಅಲ್ಲ ಸ್ವಾಮಿ, ಜಾತ್ಯತೀತವಾದವನ್ನು ಬೆಂಬಲಿಸುವವರು, ಬೇರೊಬ್ಬರಲ್ಲಿ ಅಸಹಿಷ್ಣುತೆ ಇದೆ ಎಂದು ಬೊಬ್ಬೆ ಹಾಕುವವರು, ಸ್ವತಃ ತಂದೆಯೇ ಒಪ್ಪಿ ತಮ್ಮ ಮಗಳನ್ನು ಬೇರೆ ಧರ್ಮೀಯರೊಂದಿಗೆ ಮದುವೆ ಮಾಡಿಕೊಟ್ಟರೆ ನಿಮಗೇನು ತ್ರಾಸ? ಇದು ಹೇಗೆ ಇಸ್ಲಾಮಿಗೆ ವಿರೋಧವಾಗುತ್ತದೆ ಹಾಗೂ ಸಾಮಾಜಿಕ ಬಹಿಷ್ಕಾರ ಮಾಡುವ ತಪ್ಪಾಗುತ್ತದೆ?

ಇಷ್ಟಾದರೂ ಬಸವ ತತ್ವವಾದಿಗಳು, ಪ್ರತ್ಯೇಕ ಧರ್ಮ ಮಾಡಬೇಕು ಎನ್ನುವವರು, ಜಾತ್ಯತೀತವಾದಿಗಳು ಸೊಲ್ಲೆತ್ತುತ್ತಿಲ್ಲ? ಯಾರೂ ಏಕೆ ಇಸ್ಲಾಂ ಧರ್ಮಗುರುಗಳ ಈ ಅಸಹಿಷ್ಣುತೆಯನ್ನು ವಿರೋಧಿಸಲ್ಲ? ಯಾವ ಮಾಧ್ಯಮಗಳೂ ಇದನ್ನೇಕೆ ಬಿತ್ತರಿಸಲ್ಲ? ಯಾವ ಬರ್ಖಾ ದತ್, ರಾಜ್ ದೀಪ್ ಸರ್ದೇಸಾಯಿ, ಯಾವ ಕಾಂಗ್ರೆಸ್, ಯಾವ ಮಹಿಳೆಯರನ್ನು ಉದ್ಧಾರ ಮಾಡುವೆ ಎನ್ನುವ ರಾಹುಲ್ ಗಾಂಧಿ, ಯಾವ ಪ್ರಕಾಶ್ ರೈ… ಹೂಂ, ಹೂಂ. ಒಬ್ಬರೂ ಬಾಯಿ ಬಿಡುತ್ತಿಲ್ಲ? ಇಂಥವರು ಮಾತ್ರ ಬೇರೆಯವರನ್ನು ಕೋಮುವಾದಿಗಳು ಎಂಬ ಪಟ್ಟ ಕಟ್ಟುತ್ತಾರೆ. ಇದು ಮಾತ್ರ ಕೋಮಲವಾದವೇ?

ಯೂಸುಫ್ ಮುಸ್ಲಿಮೇತರನ ಜತೆಗೆ ತಮ್ಮ ಮಗಳ ಜತೆ ಮದುವೆ ನಿಶ್ಚಯಿಸಿದ ಬೆನ್ನಲ್ಲೇ ಅ.19ರಂದು ಸಮಿತಿ ನೋಟಿಸ್ ಜಾರಿ ಮಾಡಿದೆ. ಆದರೂ ಯೂಸುಫ್ ಅ.20ರಂದು ತಮ್ಮ ಮಗಳನ್ನು ಕ್ರಿಶ್ಚಿಯನ್ ವ್ಯಕ್ತಿಗೆ ಧಾರೆಯೆರೆದಿದ್ದಾರೆ. ಅದ್ದೂರಿ ಮದುವೆಗೆ ನೂರಾರು ಜನ ಆಗಮಿಸಿ ಶುಭಾಶಯ ಕೋರಿದ್ದಾರೆ. ಈಗ ಇಸ್ಲಾಂ ಧರ್ಮಗುರುಗುಳು, ಸೋಗಲಾಡಿ ಜಾತ್ಯತೀತವಾದಿಗಳು ಕರೆಂಡು ಹೊಡೆದ ಕಾಗೆಯಂತಾಗಿದ್ದಾರೆ ನಿಜ. ಆದರೆ ಸಾಮಾಜಿಕ ಬಹಿಷ್ಕಾರದಂಥ ಕೃತ್ಯವನ್ನೂ ವಿರೋಧಿಸದವರನ್ನು ಏನೆನ್ನಬೇಕೋ ತಿಳಿಯುತ್ತಿಲ್ಲ.

 

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
-ನಾಗೇಶ್ ರಾವ್, ಉಡುಪಿ January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
-ನಾಗೇಶ್ ರಾವ್, ಉಡುಪಿ January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search