• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಾಂಗ್ರೆಸ್ಸಿನ ಬಣ ರಾಜಕೀಯಕ್ಕೆ ಜಿರಳೆ ಬಲಿ!

Shanker Mysore Posted On October 24, 2017


  • Share On Facebook
  • Tweet It

ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿ ಅದರ ಮೈಲೇಜನ್ನು ಹೇಗಾದರೂ ಈ ಬಾರಿಯ ಚುನಾವಣೆಯಲ್ಲಿ ಬಳಸಿ ಕುಸಿದು ಹಳ್ಳ ಹಿಡಿದಿರುವ ಕಾಂಗ್ರೆಸ್ ವರ್ಚಸ್ಸನ್ನು ಶತಾಯಗತಾಯ ಮೇಲಕ್ಕೆ ಎತ್ತಬೇಕೆಂದು ಸಿಎಂ ಸಿದ್ಧರಾಮಯ್ಯ ಪ್ರಯತ್ನ ಮಾಡುತ್ತಿದ್ದರೆ ಇತ್ತ ಅವರದ್ದೇ ಪಕ್ಷದ ಕಾರ್ಯಕತ್ತರು ಏನೋ ಮಾಡಲು ಹೋಗಿ ಏನೋ ಎಡವಟ್ಟು ಮಾಡಿಕೊಂಡಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಳಗಾಳ ಎನ್ನುವ ಪ್ರದೇಶದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಂಡಿತ್ತು. ಆ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನಲ್ಲಿ ಎರಡು ಗುಂಪುಗಳಿವೆ. ಇಂದಿರಾ ಕ್ಯಾಂಟೀನ್ ಆರಂಭವಾದ ನಂತರ ಆ ಕ್ಷೇತ್ರದ ಶಾಸಕ, ಕಾಂಗ್ರೆಸ್ ಮುಖಂಡ ಮುನಿರತ್ನ ಅವರ ವರ್ಚಸ್ಸು ಹೆಚ್ಚಾಯಿತು ಎಂದು ಅಸಮಾಧಾನಗೊಂಡ ಕಾಂಗ್ರೆಸ್ಸಿನ ಇನ್ನೊಂದು ಗುಂಪು ಅಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಸಿಗುವ ವಾಂಗೀಬಾತ್ ಮತ್ತು ಖಾರಾಬಾತ್ ನಲ್ಲಿ ಸತ್ತಿರುವ ಜಿರಳೆ ಹಾಕಿ ಆಹಾರದ ಬಗ್ಗೆ ತಗಾದೆ ತೆಗೆದಿದ್ದರು. ಅದರ ಫೋಟೋ ಮತ್ತು ವಿಡಿಯೋ ಮಾಡಿ ಫೇಸ್ ಬುಕ್ ಮತ್ತು ಟ್ವಿಟರ್ ನಲ್ಲಿ ಹಾಕಿದ್ದರು. ಇದು ಮುಖ್ಯಮಂತ್ರಿಗಳ ಹೆಸರು ಕೆಡಿಸಲು ಪ್ರಯತ್ನ ಎಂದು ಕಾಂಗ್ರೆಸ್ ಪಕ್ಷ ಬಿಜೆಪಿಯ ಮೇಲೆ ಆರೋಪ ಮಾಡಿದರೆ ಬಿಜೆಪಿ ಕಾರ್ಯಕತ್ತರು ನಿಮ್ಮ ತಿಂಡಿ ಜಿರಳೆ ತಿನ್ನಲು ಮಾತ್ರ ಫಿಟ್, ಅದಕ್ಕೆ ಅದೇ ಹುಡುಕಿಕೊಂಡು ಬಂದಿರಬೇಕು, ನಮಗೆ ಹಾಕುವ ಅಗತ್ಯವಿಲ್ಲ ಎಂದು ಮಾತಾಡಿಕೊಂಡಿದ್ದರು.
ಈ ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿ ಸಹಿತ ಬಿಬಿಎಂಪಿ ಅಧಿಕಾರಿಗಳು ಭಾನುವಾರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಮತ್ತು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿ ನಾಲ್ವರು ವ್ಯಕ್ತಿಗಳನ್ನು ಆರೋಪಿಗಳನ್ನಾಗಿ ಮಾಡಿದ್ದರು. ಇಂದಿರಾ ಕ್ಯಾಂಟೀನ್ ನಲ್ಲಿ ಉಪಹಾರದಲ್ಲಿ ಜಿರಳೆ ಹಾಕಿದ ಕುರಿತು ಪೊಲೀಸರು ಹೇಮಂತ್ ಹಾಗೂ ದೇವರಾಜ್ ನನ್ನು ಬಂಧಿಸಿದ್ದಾರೆ. ಅವರು ಕಾಂಗ್ರೆಸ್ ಕಾರ್ಯಕತ್ತರು ಎನ್ನಲಾಗಿದೆ. ಕಾಂಗ್ರೆಸ್ ನ ಎರಡು ಬಣಗಳ ಗಲಾಟೆಯಲ್ಲಿ ಇಂದಿರಾ ಕ್ಯಾಂಟೀನ್ ನ ಜಿರಳೆ ರಾಜ್ಯಮಟ್ಟದಲ್ಲಿ ಸುದ್ದಿಯಾದದ್ದು ಮಾತ್ರ ವಿಪರ್ಯಾಸ. ಒಂದು ವೇಳೆ ಆರೋಪಿಗಳು ಬಿಜೆಪಿ ಕಾರ್ಯಕತ್ತರಾಗಿದ್ದಲ್ಲಿ ಜನರಿಗೂ ಬಿಜೆಪಿ ಬಗ್ಗೆ ಅಸಹ್ಯ ಮೂಡುತ್ತಿತ್ತು. ಆದರೆ ಕಾಂಗ್ರೆಸ್ಸಿಗರೇ ಮಾಡಿದ ಕಾರಣ ಅದು ಅಲ್ಲಿಗೆ ಮುಗಿದಿದೆ!

  • Share On Facebook
  • Tweet It


- Advertisement -
Cockroachcongress


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Shanker Mysore June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Shanker Mysore June 24, 2022
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಯುಟಿ ಖಾದರ್ ಅಥವಾ ಬಿಎಂ ಫಾರೂಕ್ ಯಾರಾಗಲಿದ್ದಾರೆ ದಕ್ಷಿಣ ಕನ್ನಡದ ಉಸ್ತುವಾರಿ!!
May 31, 2018
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search