• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿನ ಬಣ ರಾಜಕೀಯಕ್ಕೆ ಜಿರಳೆ ಬಲಿ!

Shanker Mysore Posted On October 24, 2017
0


0
Shares
  • Share On Facebook
  • Tweet It

ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿ ಅದರ ಮೈಲೇಜನ್ನು ಹೇಗಾದರೂ ಈ ಬಾರಿಯ ಚುನಾವಣೆಯಲ್ಲಿ ಬಳಸಿ ಕುಸಿದು ಹಳ್ಳ ಹಿಡಿದಿರುವ ಕಾಂಗ್ರೆಸ್ ವರ್ಚಸ್ಸನ್ನು ಶತಾಯಗತಾಯ ಮೇಲಕ್ಕೆ ಎತ್ತಬೇಕೆಂದು ಸಿಎಂ ಸಿದ್ಧರಾಮಯ್ಯ ಪ್ರಯತ್ನ ಮಾಡುತ್ತಿದ್ದರೆ ಇತ್ತ ಅವರದ್ದೇ ಪಕ್ಷದ ಕಾರ್ಯಕತ್ತರು ಏನೋ ಮಾಡಲು ಹೋಗಿ ಏನೋ ಎಡವಟ್ಟು ಮಾಡಿಕೊಂಡಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಳಗಾಳ ಎನ್ನುವ ಪ್ರದೇಶದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಗೊಂಡಿತ್ತು. ಆ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನಲ್ಲಿ ಎರಡು ಗುಂಪುಗಳಿವೆ. ಇಂದಿರಾ ಕ್ಯಾಂಟೀನ್ ಆರಂಭವಾದ ನಂತರ ಆ ಕ್ಷೇತ್ರದ ಶಾಸಕ, ಕಾಂಗ್ರೆಸ್ ಮುಖಂಡ ಮುನಿರತ್ನ ಅವರ ವರ್ಚಸ್ಸು ಹೆಚ್ಚಾಯಿತು ಎಂದು ಅಸಮಾಧಾನಗೊಂಡ ಕಾಂಗ್ರೆಸ್ಸಿನ ಇನ್ನೊಂದು ಗುಂಪು ಅಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಸಿಗುವ ವಾಂಗೀಬಾತ್ ಮತ್ತು ಖಾರಾಬಾತ್ ನಲ್ಲಿ ಸತ್ತಿರುವ ಜಿರಳೆ ಹಾಕಿ ಆಹಾರದ ಬಗ್ಗೆ ತಗಾದೆ ತೆಗೆದಿದ್ದರು. ಅದರ ಫೋಟೋ ಮತ್ತು ವಿಡಿಯೋ ಮಾಡಿ ಫೇಸ್ ಬುಕ್ ಮತ್ತು ಟ್ವಿಟರ್ ನಲ್ಲಿ ಹಾಕಿದ್ದರು. ಇದು ಮುಖ್ಯಮಂತ್ರಿಗಳ ಹೆಸರು ಕೆಡಿಸಲು ಪ್ರಯತ್ನ ಎಂದು ಕಾಂಗ್ರೆಸ್ ಪಕ್ಷ ಬಿಜೆಪಿಯ ಮೇಲೆ ಆರೋಪ ಮಾಡಿದರೆ ಬಿಜೆಪಿ ಕಾರ್ಯಕತ್ತರು ನಿಮ್ಮ ತಿಂಡಿ ಜಿರಳೆ ತಿನ್ನಲು ಮಾತ್ರ ಫಿಟ್, ಅದಕ್ಕೆ ಅದೇ ಹುಡುಕಿಕೊಂಡು ಬಂದಿರಬೇಕು, ನಮಗೆ ಹಾಕುವ ಅಗತ್ಯವಿಲ್ಲ ಎಂದು ಮಾತಾಡಿಕೊಂಡಿದ್ದರು.
ಈ ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿ ಸಹಿತ ಬಿಬಿಎಂಪಿ ಅಧಿಕಾರಿಗಳು ಭಾನುವಾರ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಮತ್ತು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿ ನಾಲ್ವರು ವ್ಯಕ್ತಿಗಳನ್ನು ಆರೋಪಿಗಳನ್ನಾಗಿ ಮಾಡಿದ್ದರು. ಇಂದಿರಾ ಕ್ಯಾಂಟೀನ್ ನಲ್ಲಿ ಉಪಹಾರದಲ್ಲಿ ಜಿರಳೆ ಹಾಕಿದ ಕುರಿತು ಪೊಲೀಸರು ಹೇಮಂತ್ ಹಾಗೂ ದೇವರಾಜ್ ನನ್ನು ಬಂಧಿಸಿದ್ದಾರೆ. ಅವರು ಕಾಂಗ್ರೆಸ್ ಕಾರ್ಯಕತ್ತರು ಎನ್ನಲಾಗಿದೆ. ಕಾಂಗ್ರೆಸ್ ನ ಎರಡು ಬಣಗಳ ಗಲಾಟೆಯಲ್ಲಿ ಇಂದಿರಾ ಕ್ಯಾಂಟೀನ್ ನ ಜಿರಳೆ ರಾಜ್ಯಮಟ್ಟದಲ್ಲಿ ಸುದ್ದಿಯಾದದ್ದು ಮಾತ್ರ ವಿಪರ್ಯಾಸ. ಒಂದು ವೇಳೆ ಆರೋಪಿಗಳು ಬಿಜೆಪಿ ಕಾರ್ಯಕತ್ತರಾಗಿದ್ದಲ್ಲಿ ಜನರಿಗೂ ಬಿಜೆಪಿ ಬಗ್ಗೆ ಅಸಹ್ಯ ಮೂಡುತ್ತಿತ್ತು. ಆದರೆ ಕಾಂಗ್ರೆಸ್ಸಿಗರೇ ಮಾಡಿದ ಕಾರಣ ಅದು ಅಲ್ಲಿಗೆ ಮುಗಿದಿದೆ!

0
Shares
  • Share On Facebook
  • Tweet It


Cockroachcongress


Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Shanker Mysore December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Shanker Mysore December 23, 2025
You may also like
ಮುಸ್ಲಿಂ ಅಭ್ಯರ್ಥಿಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕು ಎನ್ನುವ ಹಿಂದಿರುವ ರಹಸ್ಯ ಏನು?
October 31, 2018
ಹಿಂದೆ ಕಾಂಗ್ರೆಸ್ ಮಾಡಿದ್ದ ತಪ್ಪುಗಳನ್ನು ಪರಿಹರಿಸಲು ಖಾದರ್ ಮನಸ್ಸು ಮಾಡ್ತಾರಾ?
August 9, 2018
ಯುಟಿ ಖಾದರ್ ಅಥವಾ ಬಿಎಂ ಫಾರೂಕ್ ಯಾರಾಗಲಿದ್ದಾರೆ ದಕ್ಷಿಣ ಕನ್ನಡದ ಉಸ್ತುವಾರಿ!!
May 31, 2018
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search