• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗುಜರಾತ್ ಚುನಾವಣೆಯಲ್ಲಿ ಮತ್ತೆ ಅರಳಿದೆ ಕಮಲ: ಸಮೀಕ್ಷೆ

TNN Correspondent Posted On October 25, 2017
0


0
Shares
  • Share On Facebook
  • Tweet It

ದೆಹಲಿ: ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ಗುಜರಾತಿನಲ್ಲಿದ್ದ ಬಿಜೆಪಿ ಪರ ಅಲೆ ಮೋದಿ ಪ್ರಧಾನಿಯಾದರೂ ಮುಂಬವರು ಚುನಾವಣೆಯಲ್ಲಿ ಮುಂದುವರಿಯುವ ಸಾಧ್ಯತೆ ಗೋಚರಿಸಿದ್ದು, ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿಯೇ ಗದ್ದುಗೆ ಏರಲಿದೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.

ಇಂಡಿಯಾ ಟುಡೆ-ಆಕ್ಸಿಸ್ ಮೈ ಇಂಡಿಯಾ ಸಂಸ್ಥೆಗಳು ನಡೆಸಿದ ಚುನಾವಣೆ ಪೂರ್ವ ಸಮೀಕ್ಷೆ ನಡೆಸಿದ್ದು, ಸೆಪ್ಟೆಂಬರ್ 15ರಿಂದ ಅಕ್ಟೋಬರ್ 15ರವರೆಗಿನ ಅವಧಿಯಲ್ಲಿ ರಾಜ್ಯದ ಎಲ್ಲ 182 ಕ್ಷೇತ್ರಗಳಲ್ಲಿ ಮತದಾರರ ಅಭಿಪ್ರಾಯ ಸಂಗ್ರಹಿಸಿದೆ. ಈ ಅಭಿಪ್ರಾಯ ಸಂಗ್ರಹಣೆಯ ಪ್ರಕಾರ ಬಿಜೆಪಿ 115-125 ಸ್ಥಾನ ಗಳಿಸಲಿದೆ ಎಂದು ತಿಳಿದುಬಂದಿದೆ.

ಅತ್ತ ದಶಕಕ್ಕೂ ಅಧಿಕ ಅವಧಿಯಿಂದ ಪ್ರತಿಪಕ್ಷ ಸ್ಥಾನದ ಕುರ್ಚಿ ಬಿಸಿ ಮಾಡುತ್ತಿರುವ ಕಾಂಗ್ರೆಸ್ಸಿಗೆ ಕೇವಲ 57 ರಿಂದ 65 ಸ್ಥಾನ ಲಭಿಸಲಿವೆ ಎಂದು ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.

ಸಮೀಕ್ಷೆಗಾಗಿ ಗುಜರಾತಿನ 18,243 ಜನರನ್ನು ಸಂಪರ್ಕಿಸಲಾಗಿದ್ದು ಅದರಲ್ಲಿ ಶೇ.48ರಷ್ಟು ಜನ ಬಿಜೆಪಿಗೆ ಮತ ಹಾಕುವುದಾಗಿ ತಿಳಿಸಿದ್ದಾರೆ ಎಂದು ಸಮೀಕ್ಷೆಯಿಂದ ದೃಢಪಟ್ಟಿದೆ. ಉತ್ತರ ಪ್ರದೇಶ, ದೆಹಲಿ ಹಾಗೂ ಬಿಹಾರ ಚುನಾವಣೆ ವೇಳೆಯಲ್ಲೂ ಆಕ್ಸಿಸ್ ಮೈ ಇಂಡಿಯಾ ಸಂಸ್ಥೆ ನಡೆಸಿದ ಸಮೀಕ್ಷೆ ನಿಜವಾಗಿದ್ದವು. ಅಷ್ಟೇ ಅಲ್ಲ, 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಬಹಿರಂಗಗೊಳಿಸಿದ್ದು, ಅದರಂತೆಯೇ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಗದ್ದುಗೆ ಏರಿತು.

ಈ ಎಲ್ಲ ಕಾರಣಗಳಿಂದ ಇಂಡಿಯಾ ಟುಡೆ ಹಾಗೂ ಆಕ್ಸಿಸ್ ಮೈ ಇಂಡಿಯಾ ಸಂಸ್ಥೆಗಳು ಗುಜರಾತಿನಲ್ಲಿ ನಡೆಸಿರುವ ಸಮೀಕ್ಷೆ ನಿಜವಾಗಲಿದ್ದು, ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರುವ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಮಾಡಲು ಹೊರಟಿರುವ ಬಿಜೆಪಿ ಕನಸಿಗೆ ಗುಜರಾತ್ ಮತ್ತಷ್ಟು ಇಂಬು ನೀಡಲಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.

ಬುಧವಾರ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ ಇದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search