• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೋದಾಮುಗಳಲ್ಲಿ ಕೊಳೆಯುತ್ತಿದೆ ಅನ್ನಭಾಗ್ಯ ಯೋಜನೆಯ ಆಹಾರ ಪದಾರ್ಥಗಳು

Tulunadu News Posted On October 25, 2017
0


0
Shares
  • Share On Facebook
  • Tweet It

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಅನ್ನಭಾಗ್ಯದ ಟನ್‍ಗಟ್ಟಲೇ ಆಹಾರ ಪದಾರ್ಥಗಳು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಆನೇಕಲ್, ಜಿಗಣಿ ಹಾಗೂ ಸರ್ಜಾಪುರದಲ್ಲಿರುವ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಗೋದಾಮುಗಳಲ್ಲಿ ಕೊಳೆಯುತ್ತಿದೆ. ಸರ್ಕಾರ ನೂರಾರು ಕೋಟಿ ರೂ. ನೀಡಿ ಖರೀದಿಸಿದ್ದಆಹಾರ ಪದಾರ್ಥಗಳು ವ್ಯರ್ಥವಾಗುತ್ತಿದೆ.

ಆನೇಕಲ್ ತಾಲೂಕಿನ ಕೇಂದ್ರ ಭಾಗವಾಗಿರುವ ಆನೇಕಲ್ ಪಟ್ಟಣದ ಗೋದಾಮಿನಲ್ಲಿ 331 ಕ್ವಿಂಟಾಲ್, ಜಿಗಣಿಯಲ್ಲಿ 125 ಕ್ವಿಂಟಲ್ ಹಾಗೂ ಸರ್ಜಾಪುರದಲ್ಲಿ 100 ಕ್ವಿಂಟಾಲ್ ಗೋಧಿ ಪತ್ತೆಯಾಗಿದ್ದು ಸಂಪೂರ್ಣವಾಗಿ ಹಾಳಾಗಿದ್ದು ಮನುಷ್ಯ ತಿನ್ನಲು ಯೋಗ್ಯವಲ್ಲದ ಸ್ಥಿತಿಗೆ ತಲುಪಿದೆ, ಫಲಾನುಭವಿಗಳಿಗೆ ಸಿಗಬೇಕಾದ ಆಹಾರ ಇಲಿಗಳ ಪಾಲಾಗಿದೆ.

ಬಡ ಜನರ ಹಸಿವನ್ನು ನೀಗಿಸುವ ಪ್ರಮುಖ ಯೋಜನೆಯಾಗಿ ರಾಜ್ಯ ಸರ್ಕಾರ ಹೆಮ್ಮೆಯಿಂದ ಜಾರಿಗೆ ತಂದಿರುವ ಯೋಜನೆ ಇದಾಗಿದ್ದು, ಬಡವರ ಹಸಿವನ್ನು ನೀಗಿಸ ಬೇಕಾದ ಆಹಾರ ಕೊಳೆಯುತ್ತಿರುವ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೀಘ್ರವೇ ಆಹಾರ ಪದಾರ್ಥಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search