• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಹೆಜ್ಜೆ ನಿಗೂಢ ಎಂದು ಗೊತ್ತಿಲ್ಲದವರು ಮಾತ್ರ ಹೀಗೆ ಮಾತನಾಡುತ್ತಿದ್ದಾರೆ!

Tulunadu News Posted On October 25, 2017
0


0
Shares
  • Share On Facebook
  • Tweet It

ಅಮಿತ್ ಶಾ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾದ ಮೇಲೆ ಪಕ್ಷದ ಒಳಗುಟ್ಟುಗಳು ಹಿಂದಿನಷ್ಟು ಸುಲಭವಾಗಿ ಹೊರಗೆ ಬೀಳುವುದಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾರನ್ನು ಯಾವಾಗ ಎಲ್ಲಿಂದ ಎತ್ತಿ ಎಲ್ಲಿ ಇಡುತ್ತಾರೆ ಎನ್ನುವುದು ಮೋದಿಗೆ ಮಾತ್ರ ಗೊತ್ತು. ಆದ್ದರಿಂದ ಇತ್ತೀಚೆಗೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಪಕ್ಷದೊಳಗೆ ಏನು ನಡೆಯುತ್ತದೆ ಎಂದು ಊಹಿಸುವುದು ಕಷ್ಟ. ಆದ್ದರಿಂದ ಬಿಜೆಪಿಯ ಒಳಗಿರುವ ಕೆಲವು ವ್ಯಕ್ತಿಗಳು ತಮ್ಮ ಅಂದಾಜಿನ ಮೇಲೆ ಕೊಡುತ್ತಿರುವ ವದಂತಿಗಳನ್ನು ನಂಬಿ ಕೆಲವು ವೆಬ್ ಸೈಟ್ ಗಳು ಸುದ್ದಿಯನ್ನು ಬಿತ್ತರಿಸುತ್ತಿವೆ.
ಇತ್ತೀಚೆಗೆ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾದಾಗ ಯಾರೊಬ್ಬರಿಗೂ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗ್ಡೆ ಕೇಂದ್ರದಲ್ಲಿ ಮಂತ್ರಿಯಾಗುತ್ತಾರೆ ಎನ್ನುವ ಸಣ್ಣ ಕಲ್ಪನೆ ಕೂಡ ಇರಲಿಲ್ಲ. ಮಾಧ್ಯಮದವರು ಕರ್ನಾಟಕದಿಂದ ಯಾರದ್ಯಾರದ್ದೋ ಹೆಸರು ಟೈಪ್ ಮಾಡಿ ಬ್ರೇಕಿಂಗ್ ನ್ಯೂಸ್ ಕೊಡಲು ತಯಾರಿದ್ದರು. ಆದರೆ ನಂತರ ಅನಂತ ಕುಮಾರ್ ಹೆಗ್ಡೆಯವರಿಗೆ ಸಚಿವ ಸಂಪುಟ ಭಾಗ್ಯ ಎಂದು ಹೊಸದಾಗಿ ಟೈಪ್ ಮಾಡಿ ಹಿಂದೆ ಬರೆದಿದ್ದವರ ಹೆಸರು ಡಿಲಿಟ್ ಮಾಡಬೇಕಾಯಿತು. ಸ್ವತ: ಹೆಗಡೆಯವರಿಗೂ ತಾನು ಕೇಂದ್ರ ಸಚಿವನಾಗುತ್ತೇನೆ ಎಂದು ದೆಹಲಿಯಿಂದ ಹಿಂದಿನ ದಿನ ಫೋನ್ ಬರುವ ತನಕ ಗೊತ್ತಿರಲಿಲ್ಲ.
ತಮ್ಮ ಹಿಂದಿನ ಕ್ಯಾಲ್ಕುಲೆಶನ್ ತಪ್ಪಿದ ಕಾರಣ ಈ ಬಾರಿ ಯಾರೋ ಹಬ್ಬಿಸಿದ ಗಾಳಿ ಸುದ್ದಿಯನ್ನು ನಂಬಿ ಕೆಲವು ಮಧ್ಯಮಗಳು ಅನಂತ ಕುಮಾರ್ ಹೆಗ್ಡೆಯವರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುತ್ತಿವೆ.
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ರಾಮ್ ನಾಥ್ ಕೋವಿಂದ್ ಆಯ್ಕೆಯಾಗುತ್ತಾರೆ ಎಂದು ಯಾವ ಮಾಧ್ಯಮ ಹೇಳಿತ್ತು. ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ತಯಾರಾಗಬೇಕಾಗುತ್ತದೆ ಎಂದು ಬಿಜೆಪಿ ಉನ್ನತ ಮುಖಂಡರಿಗೂ ಗೊತ್ತಿರಲಿಲ್ಲ. ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರು ನೇಮಕವಾಗುತ್ತಾರೆ ಎಂದು ಯಾರಾದರೂ ಆರು ತಿಂಗಳ ಮೊದಲೇ ಭವಿಷ್ಯ ಹೇಳಿದ್ರಾ?
ಕಾಂಗ್ರೆಸ್ಸಿನ ಮುಂದಿನ ಅಧ್ಯಕ್ಷ ರಾಹುಲ್ ಗಾಂಧಿ ಎಂದು ಹತ್ತು ವರುಷಗಳ ಮೊದಲೇ ಯಾರು ಬೇಕಾದರೂ ಹೇಳಬಹುದಾಗಿದೆ. ಆದರೆ ಬಿಜೆಪಿಯಲ್ಲಿ ಹಾಗಿಲ್ಲ. ಮೋದಿ ಕೊನೆಯ ಕ್ಷಣದಲ್ಲಿ ಯಾರ ಹೆಗಲ ಮೇಲೆ ಕೈಯಿಡುತ್ತಾರೆ ಎಂದು ಹೇಳಲು ಯಾರಿಗೂ ಸಾಧ್ಯವಿಲ್ಲ. ಅವರ ಪ್ರತಿಯೊಂದು ನಡೆಯ ಹಿಂದೆ ಮುಂದೆ ನೂರಾರು ಚಿಂತನೆಗಳಿರುತ್ತವೆ. ಆದ್ದರಿಂದ ಬಿಜೆಪಿಯ ಒಳಗೆ ಇರುವವರು ಹೀಗೆ ಸುದ್ದಿ ಹಬ್ಬಿಸಿದರೂ ಯಾರೂ ನಂಬಬಾರದು. ಯಾಕೆಂದರೆ ಮೋದಿಯವರ ಬಗ್ಗೆ ಗೊತ್ತಿರುವ ಯಾರೂ ಕೂಡ ಯಾರು ಯಾವಾಗ ಏನಾಗುತ್ತಾರೆ ಎಂದು ಹೇಳಲು ಹೋಗುವುದಿಲ್ಲ!

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search