• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಮತಾ ಬ್ಯಾನರ್ಜಿಯಿಂದ ಮತ್ತೊಂದು ಅಪಸವ್ಯ ಮೊಬೈಲ್ ನಂಬರ್ ಗೆ ಆಧಾರ ಲಿಂಕ್ ಮಾಡಲ್ಲ ಎಂದ ಬಂಗಾಳ ಸಿಎಂ

TNN Correspondent Posted On October 26, 2017
0


0
Shares
  • Share On Facebook
  • Tweet It

 

ಕೋಲ್ಕತ್ತಾ: ಕೇಂದ್ರ ಸರ್ಕಾರದ ನೋಟು ನಿಷೇಧವನ್ನು ವಿರೋಧಿಸಿ ಪಡೆ ಕಟ್ಟಿ ನಗಪಾಟಲಿಗೀಡಾಗಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ. ಪಶ್ಚಿಮ ಬಂಗಾಳದಲ್ಲಿ ದಸರಾ ಹಿನ್ನೆಲೆ ದುರ್ಗಾ ಪೂಜೆಗೆ ಅಡ್ಡಲಾಗಿ ನಿಂತು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಮಮತಾ. ಕೇಂದ್ರ ಸರ್ಕಾರದ ವಿರುದ್ಧ ಆಗಾಗ ಗುಟುರು ಹಾಕುವ ಮಮತಾ ಬ್ಯಾನರ್ಜಿ ಈ ಮತ್ತೊಂದು ಅಪಸವ್ಯ ತೆಗೆದಿದ್ದಾರೆ.

ಹೌದು, ಕೇಂದ್ರ ಸರ್ಕಾರ ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿರುವ ಆದೇಶ ಧಿಕ್ಕರಿಸಲು ಹೊರಟಿರುವ ಮಮತಾ ಬ್ಯಾನರ್ಜಿ, “ತನ್ನ ಮೊಬೈಲ್ ಸಂಪರ್ಕ ಕಡಿತಗೊಳಿಸಿದರೂ ಸರಿಯೇ, ಮೊಬೈಲ್ ನಂಬರ್ ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲ್ಲ” ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ.

ಸಾರ್ವಜನಿಕರ ಹಕ್ಕು ಹಾಗೂ ಖಾಸಗಿತನದ ವಿಷಯಗಳಲ್ಲಿ ಕೇಂದ್ರ ಸರ್ಕಾರ ವಿನಾಕಾರಣ ಮಧ್ಯಸ್ಥಿಕೆ ವಹಿಸುತ್ತಿದೆ. ಆಧಾರ್ ಸಂಖ್ಯೆ ಮೊಬೈಲ್ ನಂಬರಿಗೆ ಲಿಂಕ್ ಮಾಡುವ ಆದೇಶವೇ ಸರಿಯಿಲ್ಲ. ನಾನಂತೂ ಲಿಂಕ್ ಮಾಡಿಸುವುದಿಲ್ಲ ಎಂದಿದ್ದಾರೆ.

ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಪ್ರಶ್ನಿಸಿದವರ ವಿರುದ್ಧ ಆದಾಯ ತೆರಿಗೆ ಇಲಾಖೆ ಹಾಗೂ ಸಿಬಿಐ ಅಸ್ತ್ರ ಬಳಸಲಾಗುತ್ತಿದೆ ಎಂದು ಪಕ್ಷದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಆದರೆ ಕೇಂದ್ರ ಸರ್ಕಾರವನ್ನು ವಿರೋಧಿಸುವ ಭರದಲ್ಲಿ ಮಮತಾ ಬ್ಯಾನರ್ಜಿ ಇಂಥ ಉದ್ಧಟತನದ ಹೇಳಿಕೆ ನೀಡುವುದು ಎಷ್ಟರಮಟ್ಟಿಗೆ ಸಮಂಜಸ ಎನ್ನುವುದೇ ಪ್ರಶ್ನೆಯಾಗಿದೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search