• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಮತಾ ಬ್ಯಾನರ್ಜಿಯಿಂದ ಮತ್ತೊಂದು ಅಪಸವ್ಯ ಮೊಬೈಲ್ ನಂಬರ್ ಗೆ ಆಧಾರ ಲಿಂಕ್ ಮಾಡಲ್ಲ ಎಂದ ಬಂಗಾಳ ಸಿಎಂ

TNN Correspondent Posted On October 26, 2017


  • Share On Facebook
  • Tweet It

 

ಕೋಲ್ಕತ್ತಾ: ಕೇಂದ್ರ ಸರ್ಕಾರದ ನೋಟು ನಿಷೇಧವನ್ನು ವಿರೋಧಿಸಿ ಪಡೆ ಕಟ್ಟಿ ನಗಪಾಟಲಿಗೀಡಾಗಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ. ಪಶ್ಚಿಮ ಬಂಗಾಳದಲ್ಲಿ ದಸರಾ ಹಿನ್ನೆಲೆ ದುರ್ಗಾ ಪೂಜೆಗೆ ಅಡ್ಡಲಾಗಿ ನಿಂತು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಮಮತಾ. ಕೇಂದ್ರ ಸರ್ಕಾರದ ವಿರುದ್ಧ ಆಗಾಗ ಗುಟುರು ಹಾಕುವ ಮಮತಾ ಬ್ಯಾನರ್ಜಿ ಈ ಮತ್ತೊಂದು ಅಪಸವ್ಯ ತೆಗೆದಿದ್ದಾರೆ.

ಹೌದು, ಕೇಂದ್ರ ಸರ್ಕಾರ ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿರುವ ಆದೇಶ ಧಿಕ್ಕರಿಸಲು ಹೊರಟಿರುವ ಮಮತಾ ಬ್ಯಾನರ್ಜಿ, “ತನ್ನ ಮೊಬೈಲ್ ಸಂಪರ್ಕ ಕಡಿತಗೊಳಿಸಿದರೂ ಸರಿಯೇ, ಮೊಬೈಲ್ ನಂಬರ್ ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲ್ಲ” ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ.

ಸಾರ್ವಜನಿಕರ ಹಕ್ಕು ಹಾಗೂ ಖಾಸಗಿತನದ ವಿಷಯಗಳಲ್ಲಿ ಕೇಂದ್ರ ಸರ್ಕಾರ ವಿನಾಕಾರಣ ಮಧ್ಯಸ್ಥಿಕೆ ವಹಿಸುತ್ತಿದೆ. ಆಧಾರ್ ಸಂಖ್ಯೆ ಮೊಬೈಲ್ ನಂಬರಿಗೆ ಲಿಂಕ್ ಮಾಡುವ ಆದೇಶವೇ ಸರಿಯಿಲ್ಲ. ನಾನಂತೂ ಲಿಂಕ್ ಮಾಡಿಸುವುದಿಲ್ಲ ಎಂದಿದ್ದಾರೆ.

ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಪ್ರಶ್ನಿಸಿದವರ ವಿರುದ್ಧ ಆದಾಯ ತೆರಿಗೆ ಇಲಾಖೆ ಹಾಗೂ ಸಿಬಿಐ ಅಸ್ತ್ರ ಬಳಸಲಾಗುತ್ತಿದೆ ಎಂದು ಪಕ್ಷದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಆದರೆ ಕೇಂದ್ರ ಸರ್ಕಾರವನ್ನು ವಿರೋಧಿಸುವ ಭರದಲ್ಲಿ ಮಮತಾ ಬ್ಯಾನರ್ಜಿ ಇಂಥ ಉದ್ಧಟತನದ ಹೇಳಿಕೆ ನೀಡುವುದು ಎಷ್ಟರಮಟ್ಟಿಗೆ ಸಮಂಜಸ ಎನ್ನುವುದೇ ಪ್ರಶ್ನೆಯಾಗಿದೆ.

  • Share On Facebook
  • Tweet It


- Advertisement -


Trending Now
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
Tulunadu News February 2, 2023
Leave A Reply

  • Recent Posts

    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
  • Popular Posts

    • 1
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 2
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 3
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 4
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 5
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search