• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಬ್ದುಲ್‌ ಕರೀಂ ತೆಲಗಿ ಸಾವು

TNN Correspondent Posted On October 26, 2017
0


0
Shares
  • Share On Facebook
  • Tweet It

ಛಾಪಾ ಕಾಗದ ಪ್ರಕರಣದ ಪ್ರಮುಖ ಆರೋಪಿ ಕರೀಂಲಾಲಾ ತೆಲಗಿ ಅಲಿಯಾಸ್‌ ಅಬ್ದುಲ್‌ ಕರೀಂ ತೆಲಗಿ ಹೆಸರೇ ಸಾಕಷ್ಟು ಜನರಿಗೆ ಮರೆತುಹೋಗಿತ್ತು. ಆದರೆ ಶಿಕ್ಷೆಗೊಳಗಾಗಿ ಜೈಲಿನಲ್ಲಿದ್ದ ತೆಲಗಿ ಅಕ್ಟೋಬರ್‌ ೨೬ರಂದು (ಇಂದು) ಮೃತಪಟ್ಟಿದ್ದಾನೆ. ಅನಾರೋಗ್ಯ ನಿಮಿತ್ತ ಒಂದು ವಾರದ ಹಿಂದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿತ್ತು.


ಮೂಲತಃ ಖಾನಾಪುರದವನಾದ ತೆಲಗಿ, ಎಂಟು ವರ್ಷ ದುಬೈನಲ್ಲಿದ್ದು ಭಾರತಕ್ಕೆ ಮರಳಿದ ನಂತರ ನಕಲಿ ಪಾಸ್‌ಪೋರ್ಟ್, ಛಾಪಾಕಾಗದ ತಯಾರಿಸುವುದರಲ್ಲಿ ತೊಡಗಿಕೊಂಡ. ನಕಲಿ ಛಾಪಾಕಾಗದದ ಉದ್ಯಮವನ್ನು ಈತ ಎಷ್ಟು ದೊಡ್ಡದಾಗಿ ಬೆಳೆಸಿದ್ದ ಅಂದರೆ ಈತ ೩೫೦ ಜನರನ್ನು ಇದೇ ಕೆಲಸಕ್ಕಾಗಿ ನೇಮಿಸಿಕೊಂಡಿದ್ದ. ಇವರು ಬ್ಯಾಂಕ್‌, ವಿಮಾ ಕಂಪೆನಿಗಳು ಸೇರಿದಂತೆ ವಿವಿಧೆಡೆ ನಕಲಿ ಛಾಪಾಕಾಗದಗಳನ್ನು ಮಾರಾಟ ಮಾಡುತ್ತಿದ್ದರು. ೨೦೦ ಕೋಟಿ ರು. ಮೌಲ್ಯದ ಛಾಪಾಕಾಗದ ಮಾರಾಟ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಈ ನಕಲಿ ದಂಧೆಯಲ್ಲಿ ಸರಕಾರಿ ನೌಕರರು ಹಾಗೂ ಪೊಲೀಸ್ ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಭಾಗಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೨೦೦೧ರ ನವೆಂಬರ್‌ನಲ್ಲಿ ಈತನನ್ನು ರಾಜಸ್ಥಾನದ ಅಜ್ಮೇರ್‌ನಲ್ಲಿ ಬಂಧಿಸಲಾಗಿತ್ತು. ಅಂದಿನಿಂದಲೂ ಈತ ಜೈಲಿನಲ್ಲಿಯೇ ಇದ್ದ. ಈತನೊಂದಿಗೆ ಸಾಕಷ್ಟು ರಾಜಕಾರಣಿಗಳು ಶಾಮೀಲಾಗಿದ್ದಾರೆ ಎಂಬ ಸುದ್ದಿ ಇತ್ತಾದರೂ, ಯಾರ ಹೆಸರೂ ಹೊರಗೆ ಬರಲಿಲ್ಲ.
ಅಬ್ದುಲ್‌ ಕರೀಂ ತೆಲಗಿಗೆ ಏಡ್ಸ್ ಸೇರಿದಂತೆ ಹಲವು ರೋಗಗಳಿದ್ದವು ಎಂಬುದು ಈ ಹಿಂದೆಯೇ ವರದಿಯಾಗಿತ್ತು. ಐದಾರು ವರ್ಷಗಳ ಹಿಂದೆಯೇ ಈತನಿಗೆ ಏಡ್ಸ್ ಇರುವ ಸಂಗತಿ ಬಹಿರಂಗವಾಗಿ, ದೊಡ್ಡ ಸುದ್ದಿಯಾಗಿತ್ತು.

0
Shares
  • Share On Facebook
  • Tweet It


Telagi


Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search