• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಬ್ದುಲ್‌ ಕರೀಂ ತೆಲಗಿ ಸಾವು

TNN Correspondent Posted On October 26, 2017
0


0
Shares
  • Share On Facebook
  • Tweet It

ಛಾಪಾ ಕಾಗದ ಪ್ರಕರಣದ ಪ್ರಮುಖ ಆರೋಪಿ ಕರೀಂಲಾಲಾ ತೆಲಗಿ ಅಲಿಯಾಸ್‌ ಅಬ್ದುಲ್‌ ಕರೀಂ ತೆಲಗಿ ಹೆಸರೇ ಸಾಕಷ್ಟು ಜನರಿಗೆ ಮರೆತುಹೋಗಿತ್ತು. ಆದರೆ ಶಿಕ್ಷೆಗೊಳಗಾಗಿ ಜೈಲಿನಲ್ಲಿದ್ದ ತೆಲಗಿ ಅಕ್ಟೋಬರ್‌ ೨೬ರಂದು (ಇಂದು) ಮೃತಪಟ್ಟಿದ್ದಾನೆ. ಅನಾರೋಗ್ಯ ನಿಮಿತ್ತ ಒಂದು ವಾರದ ಹಿಂದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಆತನನ್ನು ದಾಖಲಿಸಲಾಗಿತ್ತು.


ಮೂಲತಃ ಖಾನಾಪುರದವನಾದ ತೆಲಗಿ, ಎಂಟು ವರ್ಷ ದುಬೈನಲ್ಲಿದ್ದು ಭಾರತಕ್ಕೆ ಮರಳಿದ ನಂತರ ನಕಲಿ ಪಾಸ್‌ಪೋರ್ಟ್, ಛಾಪಾಕಾಗದ ತಯಾರಿಸುವುದರಲ್ಲಿ ತೊಡಗಿಕೊಂಡ. ನಕಲಿ ಛಾಪಾಕಾಗದದ ಉದ್ಯಮವನ್ನು ಈತ ಎಷ್ಟು ದೊಡ್ಡದಾಗಿ ಬೆಳೆಸಿದ್ದ ಅಂದರೆ ಈತ ೩೫೦ ಜನರನ್ನು ಇದೇ ಕೆಲಸಕ್ಕಾಗಿ ನೇಮಿಸಿಕೊಂಡಿದ್ದ. ಇವರು ಬ್ಯಾಂಕ್‌, ವಿಮಾ ಕಂಪೆನಿಗಳು ಸೇರಿದಂತೆ ವಿವಿಧೆಡೆ ನಕಲಿ ಛಾಪಾಕಾಗದಗಳನ್ನು ಮಾರಾಟ ಮಾಡುತ್ತಿದ್ದರು. ೨೦೦ ಕೋಟಿ ರು. ಮೌಲ್ಯದ ಛಾಪಾಕಾಗದ ಮಾರಾಟ ಮಾಡಿರಬಹುದು ಎಂದು ಅಂದಾಜಿಸಲಾಗಿದೆ. ಈ ನಕಲಿ ದಂಧೆಯಲ್ಲಿ ಸರಕಾರಿ ನೌಕರರು ಹಾಗೂ ಪೊಲೀಸ್ ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಭಾಗಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ೨೦೦೧ರ ನವೆಂಬರ್‌ನಲ್ಲಿ ಈತನನ್ನು ರಾಜಸ್ಥಾನದ ಅಜ್ಮೇರ್‌ನಲ್ಲಿ ಬಂಧಿಸಲಾಗಿತ್ತು. ಅಂದಿನಿಂದಲೂ ಈತ ಜೈಲಿನಲ್ಲಿಯೇ ಇದ್ದ. ಈತನೊಂದಿಗೆ ಸಾಕಷ್ಟು ರಾಜಕಾರಣಿಗಳು ಶಾಮೀಲಾಗಿದ್ದಾರೆ ಎಂಬ ಸುದ್ದಿ ಇತ್ತಾದರೂ, ಯಾರ ಹೆಸರೂ ಹೊರಗೆ ಬರಲಿಲ್ಲ.
ಅಬ್ದುಲ್‌ ಕರೀಂ ತೆಲಗಿಗೆ ಏಡ್ಸ್ ಸೇರಿದಂತೆ ಹಲವು ರೋಗಗಳಿದ್ದವು ಎಂಬುದು ಈ ಹಿಂದೆಯೇ ವರದಿಯಾಗಿತ್ತು. ಐದಾರು ವರ್ಷಗಳ ಹಿಂದೆಯೇ ಈತನಿಗೆ ಏಡ್ಸ್ ಇರುವ ಸಂಗತಿ ಬಹಿರಂಗವಾಗಿ, ದೊಡ್ಡ ಸುದ್ದಿಯಾಗಿತ್ತು.

0
Shares
  • Share On Facebook
  • Tweet It


Telagi


Trending Now
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
  • Popular Posts

    • 1
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 2
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 3
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 4
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 5
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

  • Privacy Policy
  • Contact
© Tulunadu Infomedia.

Press enter/return to begin your search