• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಈ ಹಿಂದೂಗಳ ಬಗ್ಗೆ ಯಾರೂ ಮಾತಾಡಲಿಲ್ಲ, ಆದರೂ ಅವರಿಗೆ ಸಿಕ್ಕಿತು ಭಾರತದ ನಾಗರಿಕತ್ವ

TNN Correspondent Posted On October 27, 2017
0


0
Shares
  • Share On Facebook
  • Tweet It

ನಮ್ಮ ದೇಶವನ್ನ ಜಾತ್ಯತೀತ, ವಿವಿಧತೆಯಲ್ಲಿ ಏಕತೆ ಹೊಂದಿದ ದೇಶ ಎಂದು ನಾವು ಎಷ್ಟೇ ಹೇಳಿದರೂ, ಇಬ್ಬಂದಿತನ, ತಾರತಮ್ಯ, ಓಲೈಸುವಿಕೆಯಿಂದ ಮಾತ್ರ ನಾವು ಬಿಡುಗಡೆ ಹೊಂದಿಲ್ಲ ಹಾಗೂ ಹೊಂದುವ ಲಕ್ಷಣಗಳೂ ಇಲ್ಲ.

ಯೋಚಿಸಿ ನೋಡಿ. ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳುವ ಮುಸ್ಲಿಮರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಾಕಿ ಸಲಹುವ ಜತೆಗೆ ಅವರಿಗೆ ದೇಶದ ಮತದಾನದ ಹಕ್ಕು, ಐಡಿ, ಆಧಾರ್ ಕಾರ್ಡ್ ನೀಡುತ್ತಾರೆ. ಅವರೇ ಕೋಮುಗಲಭೆಗೆ, ಹಿಂದೂ ವಿರೋಧಿ ಕೃತ್ಯಗಳಲ್ಲಿ ತೊಡಗುತ್ತಾರೆ ಎಂಬುದು ಗೊತ್ತಿದ್ದರೂ ಮಮತಾ ಹೀಗೆ ಮಾಡುತ್ತಾರೆ. ಇನ್ನು ಮ್ಯಾನ್ಮಾರಿನಿಂದ ಗಡಿಪಾರಾಗಿ ಬರುವ ರೋಹಿಂಗ್ಯಾ ಮುಸ್ಲಿಮರು ಮಗ್ಗಲು ಮುಳ್ಳು ಎಂದು ಗೊತ್ತಿದ್ದರೂ ರಾಹುಲ್ ಗಾಂಧಿ, ಅಸಾದುದ್ದೀನ್ ಓವೈಸಿಯಂಥವರು ಅವರನ್ನು ಸಾಕಬೇಕು ಎಂದು ಬೊಬ್ಬೆ ಹಾಕುತ್ತಾರೆ.

ಆದರೆ, ಕಾಶ್ಮೀರದ ನಿರಾಶ್ರಿತ ಹಿಂದೂ ಪಂಡಿತರು, ಹಿಂದೂಗಳ ರಕ್ಷಣೆ ಬಗ್ಗೆ ಯಾರೂ ಮಾತನಾಡುವುದಿಲ್ಲ. ಇಷ್ಟಾದರೂ ಹಿಂದೂಗಳನ್ನು ರಕ್ಷಿಸುವ ಕೆಲಸವನ್ನು ಕೇಂದ್ರ ಸರ್ಕಾರ ಕೊನೆಗೂ ಮಾಡಿತಲ್ಲ ಎಂಬುದೇ ಸಮಾಧಾನಕರ.

ಹೌದು, ಹಲವು ವರ್ಷಗಳ ಹಿಂದೆ ಕಾಶ್ಮೀರದಲ್ಲಿ ಹಿಂಸೆ ಅನುಭವಿಸಿ ಭಾರತಕ್ಕೆ ಬಂದು ನೆಲೆಸಿದ್ದ 51 ಹಿಂದೂ ಕುಟುಂಬಗಳಿಗೆ ಕೇಂದ್ರ ಸರ್ಕಾರ ದೇಶದ ನಾಗರಿಕತ್ವ ನೀಡಿ ಮಾನವೀಯತೆ ಮೆರೆದಿದೆ.

ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಆಸಕ್ತಿ ವಹಿಸಿ ಹಿಂದೂ ಕುಟುಂಬಗಳಿಗೆ ದೇಶದ ನಾಗರಿಕತ್ವ ನೀಡಿದ್ದು, ಕೇಂದ್ರ ಗೃಹಖಾತೆ ರಾಜ್ಯ ಸಚಿವ ಹಂಸರಾಜ್ ಆಹಿರ್ ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದಾರೆ.

ಹಿಂದೂ ಕುಟುಂಬಗಳಿಗೆ ದೇಶದ ನಾಗರಿಕತ್ವ ನೀಡುವ ಮೂಲಕ, ಕೇಂದ್ರ ಸರ್ಕರದ ನೆರವಿನೊಂದಿಗೆ ಛತ್ತೀಸ್ ಗಡ ವಲಸಿಗರಿಗೆ ಭಾರತದ ನಾಗರಿಕತ್ವ ನೀಡಿದ ಮೊದಲ ರಾಜ್ಯ ಎಂಬ ಖ್ಯಾತಿಗೂ ಭಾಜನವಾಗಿದೆ ಎಂದು ಆಹಿರ್ ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಹಿಂಸೆ ತಾಳಲಾರದೆ ಹಲವು ವರ್ಷಗಳ ಹಿಂದೆ ಸುಮಾರು 51 ಹಿಂದೂ ಕುಟುಂಬಗಳು ಛತ್ತೀಸ್ ಗಡದಲ್ಲಿ ನೆಲೆಸಿದ್ದವು. ಇದನ್ನು ಮನಗಂಡ ಸರ್ಕಾರ ನಾಗರಿಕತ್ವ ನೀಡಿದೆ. ಆದಾಗ್ಯೂ, ಈ ಹಿಂದೂ ಕುಟುಂಬಗಳ ರಕ್ಷಣೆ ಬಗ್ಗೆ ಯಾರೂ ಮಾತನಾಡದಿದ್ದರೂ, ಮಾಧ್ಯಮಗಳು ವರದಿ ಮಾಡದಿದ್ದರೂ ಹಿಂದೂಗಳ ರಕ್ಷಣೆಗೆ ಮುಂದಾಗಿದ್ದು ಕೇಂದ್ರ ಸರ್ಕಾರದ ಹೆಗ್ಗಳಿಕೆಯೇ ಸರಿ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search