• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ಅವರಿಂದ ಮನೆಕೆಲಸದವರ ಮೇಲೆ ಹಲ್ಲೆ!

Tulunadu News Posted On October 27, 2017


  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಕವಿತಾ ಸನಿಲ್ ಗುರುವಾರ ಸಂಜೆ ತನ್ನ ಫ್ಲಾಟಿನಲ್ಲಿ ಕೆಲಸ ಮಾಡುವ ಮನೆ ಕೆಲಸದ ಹೆಂಗಸು ಕಮಲಾ ಎಂಬುವವರ ಮೇಲೆ ಹಲ್ಲೆ ನಡೆಸಿದ ವಿಷಯ ಬೆಳಕಿಗೆ ಬಂದಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಮಲಾ ಅವರು ಕವಿತಾ ಸನಿಲ್ ತಮ್ಮ ಮೇಲೆ ಹೊಡೆದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಕವಿತಾ ಸನಿಲ್ ಹೊಡೆದ ಕಾರಣದ ಬಗ್ಗೆ ಕೇಳಿದಾಗ ಅವರ ಮಗಳಿಗೆ ತಾನು ಹೊಡೆದಿದ್ದೇನೆ ಎಂದು ತಮಗೆ ಅವರು ಹಲ್ಲೆ ಮಾಡಿದ್ದಾರೆ ಎಂದು ಕವಿತಾ ಸನಿಲ್ ಹೇಳುತ್ತಿದ್ದಾರೆ. ಆದರೆ ತಾವು ಯಾವ ಮಗುವನ್ನು ಕೂಡ ಹೊಡಿದಿಲ್ಲ. ಕವಿತಾ ಸನಿಲ್ ಮಂಗಳೂರು ನಗರದಲ್ಲಿ ಉನ್ನತ ಹುದ್ದೆಯಲ್ಲಿ ಇದ್ದಾರೆ ತಮಗೆ ಗೊತ್ತಿದೆ ಎಂದು ಹೇಳಿದ ಕಮಲಾ ಅವರು ತಾವು ಮನೆಕೆಲಸದವರಾಗಿದ್ದು ದೊಡ್ಡವರ ಮಕ್ಕಳನ್ನು ಹೊಡೆಯುವಂತಹ ಕೆಲಸ ಮಾಡಲು ಸಾಧ್ಯಾನಾ ಎಂದು ಪ್ರಶ್ನಿಸಿದ್ದಾರೆ.


ತಾನು ಮತ್ತು ತನ್ನ ಗಂಡ ಕವಿತಾ ಸನಿಲ್ ಅವರು ವಾಸಿಸುವ ಫ್ಲಾಟಿನಲ್ಲಿ ಕೆಲಸ ಮಾಡುತ್ತಿದ್ದು ತನ್ನ ಗಂಡ ಪುಂಡಲೀಕ ಅದೇ ಫ್ಲಾಟಿನಲ್ಲಿ ಕಾವಲುಗಾರರಾಗಿದ್ದಾರೆ. ಕವಿತಾ ಸನಿಲ್ ಹಲ್ಲೆ ಮಾಡಿದ ನಂತರ ಆ ಫ್ಲಾಟಿನಲ್ಲಿ ವಾಸಿಸಲು ಭಯವಾಗಿದ್ದು ತಮಗೆ ರಕ್ಷಣೆ ಬೇಕಾಗಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಭಯಪಡುವ ವಾತಾವರಣ ಇದೆ ಎಂದು ಕಮಲಾ ಹೇಳಿದ್ದಾರೆ. ಪುಂಡಲೀಕ ಅವರು ಮಾತನಾಡಿ ತಾವು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನವರಾಗಿದ್ದು ಕಳೆದ ಹತ್ತು ತಿಂಗಳಿಂದ ಸಾಗರ್ ಫುಲೇಮಾರ್ ರೆಸಿಡೆನ್ಸಿ ಯಲ್ಲಿ ಕೆಲಸಕ್ಕೆ ಇದ್ದು ಕೆಲಸ ಸರಿಯಾಗಿ ನಿರ್ವಹಿಸುತ್ತಿದ್ದು ಈ ಪ್ರಕರಣ ಆದ ನಂತರ ಅಲ್ಲಿ ಕೆಲಸ ಮಾಡಲು ಹೆದರಿಕೆ ಆಗುತ್ತಿದೆ ಎಂದು ಹೇಳಿದ್ದಾರೆ.

 

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search