• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ಅವರಿಂದ ಮನೆಕೆಲಸದವರ ಮೇಲೆ ಹಲ್ಲೆ!

Tulunadu News Posted On October 27, 2017
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಕವಿತಾ ಸನಿಲ್ ಗುರುವಾರ ಸಂಜೆ ತನ್ನ ಫ್ಲಾಟಿನಲ್ಲಿ ಕೆಲಸ ಮಾಡುವ ಮನೆ ಕೆಲಸದ ಹೆಂಗಸು ಕಮಲಾ ಎಂಬುವವರ ಮೇಲೆ ಹಲ್ಲೆ ನಡೆಸಿದ ವಿಷಯ ಬೆಳಕಿಗೆ ಬಂದಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಮಲಾ ಅವರು ಕವಿತಾ ಸನಿಲ್ ತಮ್ಮ ಮೇಲೆ ಹೊಡೆದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಕವಿತಾ ಸನಿಲ್ ಹೊಡೆದ ಕಾರಣದ ಬಗ್ಗೆ ಕೇಳಿದಾಗ ಅವರ ಮಗಳಿಗೆ ತಾನು ಹೊಡೆದಿದ್ದೇನೆ ಎಂದು ತಮಗೆ ಅವರು ಹಲ್ಲೆ ಮಾಡಿದ್ದಾರೆ ಎಂದು ಕವಿತಾ ಸನಿಲ್ ಹೇಳುತ್ತಿದ್ದಾರೆ. ಆದರೆ ತಾವು ಯಾವ ಮಗುವನ್ನು ಕೂಡ ಹೊಡಿದಿಲ್ಲ. ಕವಿತಾ ಸನಿಲ್ ಮಂಗಳೂರು ನಗರದಲ್ಲಿ ಉನ್ನತ ಹುದ್ದೆಯಲ್ಲಿ ಇದ್ದಾರೆ ತಮಗೆ ಗೊತ್ತಿದೆ ಎಂದು ಹೇಳಿದ ಕಮಲಾ ಅವರು ತಾವು ಮನೆಕೆಲಸದವರಾಗಿದ್ದು ದೊಡ್ಡವರ ಮಕ್ಕಳನ್ನು ಹೊಡೆಯುವಂತಹ ಕೆಲಸ ಮಾಡಲು ಸಾಧ್ಯಾನಾ ಎಂದು ಪ್ರಶ್ನಿಸಿದ್ದಾರೆ.


ತಾನು ಮತ್ತು ತನ್ನ ಗಂಡ ಕವಿತಾ ಸನಿಲ್ ಅವರು ವಾಸಿಸುವ ಫ್ಲಾಟಿನಲ್ಲಿ ಕೆಲಸ ಮಾಡುತ್ತಿದ್ದು ತನ್ನ ಗಂಡ ಪುಂಡಲೀಕ ಅದೇ ಫ್ಲಾಟಿನಲ್ಲಿ ಕಾವಲುಗಾರರಾಗಿದ್ದಾರೆ. ಕವಿತಾ ಸನಿಲ್ ಹಲ್ಲೆ ಮಾಡಿದ ನಂತರ ಆ ಫ್ಲಾಟಿನಲ್ಲಿ ವಾಸಿಸಲು ಭಯವಾಗಿದ್ದು ತಮಗೆ ರಕ್ಷಣೆ ಬೇಕಾಗಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಭಯಪಡುವ ವಾತಾವರಣ ಇದೆ ಎಂದು ಕಮಲಾ ಹೇಳಿದ್ದಾರೆ. ಪುಂಡಲೀಕ ಅವರು ಮಾತನಾಡಿ ತಾವು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನವರಾಗಿದ್ದು ಕಳೆದ ಹತ್ತು ತಿಂಗಳಿಂದ ಸಾಗರ್ ಫುಲೇಮಾರ್ ರೆಸಿಡೆನ್ಸಿ ಯಲ್ಲಿ ಕೆಲಸಕ್ಕೆ ಇದ್ದು ಕೆಲಸ ಸರಿಯಾಗಿ ನಿರ್ವಹಿಸುತ್ತಿದ್ದು ಈ ಪ್ರಕರಣ ಆದ ನಂತರ ಅಲ್ಲಿ ಕೆಲಸ ಮಾಡಲು ಹೆದರಿಕೆ ಆಗುತ್ತಿದೆ ಎಂದು ಹೇಳಿದ್ದಾರೆ.

 

 

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search