• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ಅವರಿಂದ ಮನೆಕೆಲಸದವರ ಮೇಲೆ ಹಲ್ಲೆ!

Tulunadu News Posted On October 27, 2017
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಕವಿತಾ ಸನಿಲ್ ಗುರುವಾರ ಸಂಜೆ ತನ್ನ ಫ್ಲಾಟಿನಲ್ಲಿ ಕೆಲಸ ಮಾಡುವ ಮನೆ ಕೆಲಸದ ಹೆಂಗಸು ಕಮಲಾ ಎಂಬುವವರ ಮೇಲೆ ಹಲ್ಲೆ ನಡೆಸಿದ ವಿಷಯ ಬೆಳಕಿಗೆ ಬಂದಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಮಲಾ ಅವರು ಕವಿತಾ ಸನಿಲ್ ತಮ್ಮ ಮೇಲೆ ಹೊಡೆದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಕವಿತಾ ಸನಿಲ್ ಹೊಡೆದ ಕಾರಣದ ಬಗ್ಗೆ ಕೇಳಿದಾಗ ಅವರ ಮಗಳಿಗೆ ತಾನು ಹೊಡೆದಿದ್ದೇನೆ ಎಂದು ತಮಗೆ ಅವರು ಹಲ್ಲೆ ಮಾಡಿದ್ದಾರೆ ಎಂದು ಕವಿತಾ ಸನಿಲ್ ಹೇಳುತ್ತಿದ್ದಾರೆ. ಆದರೆ ತಾವು ಯಾವ ಮಗುವನ್ನು ಕೂಡ ಹೊಡಿದಿಲ್ಲ. ಕವಿತಾ ಸನಿಲ್ ಮಂಗಳೂರು ನಗರದಲ್ಲಿ ಉನ್ನತ ಹುದ್ದೆಯಲ್ಲಿ ಇದ್ದಾರೆ ತಮಗೆ ಗೊತ್ತಿದೆ ಎಂದು ಹೇಳಿದ ಕಮಲಾ ಅವರು ತಾವು ಮನೆಕೆಲಸದವರಾಗಿದ್ದು ದೊಡ್ಡವರ ಮಕ್ಕಳನ್ನು ಹೊಡೆಯುವಂತಹ ಕೆಲಸ ಮಾಡಲು ಸಾಧ್ಯಾನಾ ಎಂದು ಪ್ರಶ್ನಿಸಿದ್ದಾರೆ.


ತಾನು ಮತ್ತು ತನ್ನ ಗಂಡ ಕವಿತಾ ಸನಿಲ್ ಅವರು ವಾಸಿಸುವ ಫ್ಲಾಟಿನಲ್ಲಿ ಕೆಲಸ ಮಾಡುತ್ತಿದ್ದು ತನ್ನ ಗಂಡ ಪುಂಡಲೀಕ ಅದೇ ಫ್ಲಾಟಿನಲ್ಲಿ ಕಾವಲುಗಾರರಾಗಿದ್ದಾರೆ. ಕವಿತಾ ಸನಿಲ್ ಹಲ್ಲೆ ಮಾಡಿದ ನಂತರ ಆ ಫ್ಲಾಟಿನಲ್ಲಿ ವಾಸಿಸಲು ಭಯವಾಗಿದ್ದು ತಮಗೆ ರಕ್ಷಣೆ ಬೇಕಾಗಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಭಯಪಡುವ ವಾತಾವರಣ ಇದೆ ಎಂದು ಕಮಲಾ ಹೇಳಿದ್ದಾರೆ. ಪುಂಡಲೀಕ ಅವರು ಮಾತನಾಡಿ ತಾವು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನವರಾಗಿದ್ದು ಕಳೆದ ಹತ್ತು ತಿಂಗಳಿಂದ ಸಾಗರ್ ಫುಲೇಮಾರ್ ರೆಸಿಡೆನ್ಸಿ ಯಲ್ಲಿ ಕೆಲಸಕ್ಕೆ ಇದ್ದು ಕೆಲಸ ಸರಿಯಾಗಿ ನಿರ್ವಹಿಸುತ್ತಿದ್ದು ಈ ಪ್ರಕರಣ ಆದ ನಂತರ ಅಲ್ಲಿ ಕೆಲಸ ಮಾಡಲು ಹೆದರಿಕೆ ಆಗುತ್ತಿದೆ ಎಂದು ಹೇಳಿದ್ದಾರೆ.

 

 

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search