• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ಅವರಿಂದ ಮನೆಕೆಲಸದವರ ಮೇಲೆ ಹಲ್ಲೆ!

Tulunadu News Posted On October 27, 2017
0


0
Shares
  • Share On Facebook
  • Tweet It

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಕವಿತಾ ಸನಿಲ್ ಗುರುವಾರ ಸಂಜೆ ತನ್ನ ಫ್ಲಾಟಿನಲ್ಲಿ ಕೆಲಸ ಮಾಡುವ ಮನೆ ಕೆಲಸದ ಹೆಂಗಸು ಕಮಲಾ ಎಂಬುವವರ ಮೇಲೆ ಹಲ್ಲೆ ನಡೆಸಿದ ವಿಷಯ ಬೆಳಕಿಗೆ ಬಂದಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕಮಲಾ ಅವರು ಕವಿತಾ ಸನಿಲ್ ತಮ್ಮ ಮೇಲೆ ಹೊಡೆದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಕವಿತಾ ಸನಿಲ್ ಹೊಡೆದ ಕಾರಣದ ಬಗ್ಗೆ ಕೇಳಿದಾಗ ಅವರ ಮಗಳಿಗೆ ತಾನು ಹೊಡೆದಿದ್ದೇನೆ ಎಂದು ತಮಗೆ ಅವರು ಹಲ್ಲೆ ಮಾಡಿದ್ದಾರೆ ಎಂದು ಕವಿತಾ ಸನಿಲ್ ಹೇಳುತ್ತಿದ್ದಾರೆ. ಆದರೆ ತಾವು ಯಾವ ಮಗುವನ್ನು ಕೂಡ ಹೊಡಿದಿಲ್ಲ. ಕವಿತಾ ಸನಿಲ್ ಮಂಗಳೂರು ನಗರದಲ್ಲಿ ಉನ್ನತ ಹುದ್ದೆಯಲ್ಲಿ ಇದ್ದಾರೆ ತಮಗೆ ಗೊತ್ತಿದೆ ಎಂದು ಹೇಳಿದ ಕಮಲಾ ಅವರು ತಾವು ಮನೆಕೆಲಸದವರಾಗಿದ್ದು ದೊಡ್ಡವರ ಮಕ್ಕಳನ್ನು ಹೊಡೆಯುವಂತಹ ಕೆಲಸ ಮಾಡಲು ಸಾಧ್ಯಾನಾ ಎಂದು ಪ್ರಶ್ನಿಸಿದ್ದಾರೆ.


ತಾನು ಮತ್ತು ತನ್ನ ಗಂಡ ಕವಿತಾ ಸನಿಲ್ ಅವರು ವಾಸಿಸುವ ಫ್ಲಾಟಿನಲ್ಲಿ ಕೆಲಸ ಮಾಡುತ್ತಿದ್ದು ತನ್ನ ಗಂಡ ಪುಂಡಲೀಕ ಅದೇ ಫ್ಲಾಟಿನಲ್ಲಿ ಕಾವಲುಗಾರರಾಗಿದ್ದಾರೆ. ಕವಿತಾ ಸನಿಲ್ ಹಲ್ಲೆ ಮಾಡಿದ ನಂತರ ಆ ಫ್ಲಾಟಿನಲ್ಲಿ ವಾಸಿಸಲು ಭಯವಾಗಿದ್ದು ತಮಗೆ ರಕ್ಷಣೆ ಬೇಕಾಗಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಭಯಪಡುವ ವಾತಾವರಣ ಇದೆ ಎಂದು ಕಮಲಾ ಹೇಳಿದ್ದಾರೆ. ಪುಂಡಲೀಕ ಅವರು ಮಾತನಾಡಿ ತಾವು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನವರಾಗಿದ್ದು ಕಳೆದ ಹತ್ತು ತಿಂಗಳಿಂದ ಸಾಗರ್ ಫುಲೇಮಾರ್ ರೆಸಿಡೆನ್ಸಿ ಯಲ್ಲಿ ಕೆಲಸಕ್ಕೆ ಇದ್ದು ಕೆಲಸ ಸರಿಯಾಗಿ ನಿರ್ವಹಿಸುತ್ತಿದ್ದು ಈ ಪ್ರಕರಣ ಆದ ನಂತರ ಅಲ್ಲಿ ಕೆಲಸ ಮಾಡಲು ಹೆದರಿಕೆ ಆಗುತ್ತಿದೆ ಎಂದು ಹೇಳಿದ್ದಾರೆ.

 

 

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search