• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಕಲಿ ಕಂಪನಿಗಳ ಗುರುತಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

TNN Correspondent Posted On October 28, 2017


  • Share On Facebook
  • Tweet It

ದೆಹಲಿ: ನೋಟು ನಿಷೇಧದ ಬಳಿಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೇನಾಮಿ ಆಸ್ತಿ ಹಾಗೂ ಕಪ್ಪು ಹಣದ ವಿರುದ್ಧದ ಕಾರ್ಯಾಚರಣೆ ಮುಂದುವರಿಸಿದ್ದು, ನಕಲಿ ಕಂಪನಿಗಳನ್ನು ಗುರುತಿಸುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ನೋಟು ನಿಷೇಧದ ಬಳಿಕ ಆದಾಯ ತೆರಿಗೆ ಇಲಾಖೆ ಅಕ್ರಮವಾಗಿ ವಹಿವಾಟು ನಡೆಸಿದ 2.1 ಲಕ್ಷ ಕಂಪನಿಗಳನ್ನು ಗುರುತಿಸಿದ್ದು, ಈಗ ಆ ಕಂಪನಿಗಳ ವಹಿವಾಟು, ಆಸ್ತಿ, ಉತ್ಪಾದನೆ ಸೇರಿ ನಾನಾ ಅಂಶ ಶೋಧಿಸುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.

ಈಗಾಗಲೇ ರಾಜ್ಯ ಸರ್ಕಾರಗಳು ನಕಲಿ ಕಂಪನಿಗಳ ಪತ್ತೆ ಹಚ್ಚುವಿಕೆ ಕಾರ್ಯದಲ್ಲಿ ನಿರತವಾಗಿದ್ದರೂ, ಪ್ರಕ್ರಿಯೆ ತಾರ್ಕಿಕ ಅಂತ್ಯ ಕಂಡಿಲ್ಲ. ಹಾಗಾಗಿ ಕೂಡಲೇ ಕಂಪನಿಗಳ ಪತ್ತೆ ಹಚ್ಚಿ ಸರ್ಕಾರಕ್ಕೆ ವರದಿ ನೀಡಬೇಕು ಎಂದು ಕೇಂದ್ರ ಕಾನೂನು ಹಾಗೂ ಕಾರ್ಪೋರೇಟ್ ವ್ಯವಹಾರ ಖಾತೆ ರಾಜ್ಯ ಸಚಿವ ಪಿ.ಪಿ.ಚೌಧರಿ ಸೂಚನೆ ನೀಡಿದ್ದಾರೆ.

ಆದಾಗ್ಯೂ ಜಿಲ್ಲಾಡಳಿತಕ್ಕೆ ಇಂಥ ವಹಿವಾಟು ನಡೆಸುವ ಕಂಪನಿಗಳ ಮೇಲೆ ಕಣ್ಣಿಡಲು ತಿಳಿಸಿದ್ದರೂ, ರಾಜ್ಯ ಸರ್ಕಾರಗಳು ಬೇನಾಮಿ ಆಸ್ತಿ, ಕಂಪನಿಯ ಒಡೆತನ, ವಹಿವಾಟು, ಆಸ್ತಿ ಗಳಿಕೆ ಪ್ರಮಾಣದಲ್ಲಿನ ಏರಿಕೆ ಕುರಿತು ತನಿಖೆ ನಡೆಸಬೇಕು ಎಂದಿದ್ದಾರೆ.

ಕೇಂದ್ರ ಸರ್ಕಾರ 2016ರ ನ.8ರಂದು ನೋಟು ನಿಷೇಧದ ಬಳಿಕ ಬೇನಾಮಿ ಆಸ್ತಿ ಮೇಲೂ ಕಣ್ಣಿಟ್ಟಿದ್ದು, ಹಲವು ಕಂಪನಿಗಳ ನೋಂದಣಿ ಸಹ ರದ್ದುಗೊಳಿಸಿದೆ. ಆ ಮೂಲಕ ಕಪ್ಪು ಹಣದ ವಿರುದ್ಧ ಸಮರ ಸಾರಿ ನಿಂತಿದೆ.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 4
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 5
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search