• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ನಕಲಿ ಕಂಪನಿಗಳ ಗುರುತಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

TNN Correspondent Posted On October 28, 2017
0


0
Shares
  • Share On Facebook
  • Tweet It

ದೆಹಲಿ: ನೋಟು ನಿಷೇಧದ ಬಳಿಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೇನಾಮಿ ಆಸ್ತಿ ಹಾಗೂ ಕಪ್ಪು ಹಣದ ವಿರುದ್ಧದ ಕಾರ್ಯಾಚರಣೆ ಮುಂದುವರಿಸಿದ್ದು, ನಕಲಿ ಕಂಪನಿಗಳನ್ನು ಗುರುತಿಸುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ನೋಟು ನಿಷೇಧದ ಬಳಿಕ ಆದಾಯ ತೆರಿಗೆ ಇಲಾಖೆ ಅಕ್ರಮವಾಗಿ ವಹಿವಾಟು ನಡೆಸಿದ 2.1 ಲಕ್ಷ ಕಂಪನಿಗಳನ್ನು ಗುರುತಿಸಿದ್ದು, ಈಗ ಆ ಕಂಪನಿಗಳ ವಹಿವಾಟು, ಆಸ್ತಿ, ಉತ್ಪಾದನೆ ಸೇರಿ ನಾನಾ ಅಂಶ ಶೋಧಿಸುವ ಜವಾಬ್ದಾರಿಯನ್ನು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.

ಈಗಾಗಲೇ ರಾಜ್ಯ ಸರ್ಕಾರಗಳು ನಕಲಿ ಕಂಪನಿಗಳ ಪತ್ತೆ ಹಚ್ಚುವಿಕೆ ಕಾರ್ಯದಲ್ಲಿ ನಿರತವಾಗಿದ್ದರೂ, ಪ್ರಕ್ರಿಯೆ ತಾರ್ಕಿಕ ಅಂತ್ಯ ಕಂಡಿಲ್ಲ. ಹಾಗಾಗಿ ಕೂಡಲೇ ಕಂಪನಿಗಳ ಪತ್ತೆ ಹಚ್ಚಿ ಸರ್ಕಾರಕ್ಕೆ ವರದಿ ನೀಡಬೇಕು ಎಂದು ಕೇಂದ್ರ ಕಾನೂನು ಹಾಗೂ ಕಾರ್ಪೋರೇಟ್ ವ್ಯವಹಾರ ಖಾತೆ ರಾಜ್ಯ ಸಚಿವ ಪಿ.ಪಿ.ಚೌಧರಿ ಸೂಚನೆ ನೀಡಿದ್ದಾರೆ.

ಆದಾಗ್ಯೂ ಜಿಲ್ಲಾಡಳಿತಕ್ಕೆ ಇಂಥ ವಹಿವಾಟು ನಡೆಸುವ ಕಂಪನಿಗಳ ಮೇಲೆ ಕಣ್ಣಿಡಲು ತಿಳಿಸಿದ್ದರೂ, ರಾಜ್ಯ ಸರ್ಕಾರಗಳು ಬೇನಾಮಿ ಆಸ್ತಿ, ಕಂಪನಿಯ ಒಡೆತನ, ವಹಿವಾಟು, ಆಸ್ತಿ ಗಳಿಕೆ ಪ್ರಮಾಣದಲ್ಲಿನ ಏರಿಕೆ ಕುರಿತು ತನಿಖೆ ನಡೆಸಬೇಕು ಎಂದಿದ್ದಾರೆ.

ಕೇಂದ್ರ ಸರ್ಕಾರ 2016ರ ನ.8ರಂದು ನೋಟು ನಿಷೇಧದ ಬಳಿಕ ಬೇನಾಮಿ ಆಸ್ತಿ ಮೇಲೂ ಕಣ್ಣಿಟ್ಟಿದ್ದು, ಹಲವು ಕಂಪನಿಗಳ ನೋಂದಣಿ ಸಹ ರದ್ದುಗೊಳಿಸಿದೆ. ಆ ಮೂಲಕ ಕಪ್ಪು ಹಣದ ವಿರುದ್ಧ ಸಮರ ಸಾರಿ ನಿಂತಿದೆ.

0
Shares
  • Share On Facebook
  • Tweet It




Trending Now
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
  • Popular Posts

    • 1
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search