• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೆ.ಜೆ.ಜಾರ್ಜ್ ರಕ್ಷಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೊಂದಿಷ್ಟು ಪ್ರಶ್ನೆಗಳು…

-ವಿಶಾಲ್ ಪುಡಿಯಂಡ, ಮಡಿಕೇರಿ Posted On October 28, 2017


  • Share On Facebook
  • Tweet It

ಡಿ.ವೈ.ಎಸ್.ಪಿ. ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರಿಗೆ ರಕ್ಷಣೆ, ಬೆನ್ನುಗೋಡೆಯಾಗಿ ನಿಂತಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ. ಖಂಡಿತವಾಗಿಯೂ ಮುಖ್ಯಮಂತ್ರಿಯಾದವರು ತಮ್ಮ ಸಂಪುಟ ಸಚಿವರ ರಕ್ಷಣೆಗೆ ಬದ್ಧವಾಗಿರಬೇಕು. ಆದರೆ ಯಾವ ವಿಷಯದಲ್ಲಿ ಎಂಬುದು ಅಷ್ಟೇ ಮಹತ್ತರ ಪಾತ್ರ ವಹಿಸುತ್ತದೆ. ಈಗ ಗಣಪತಿ ಸಾವು ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸುತ್ತಿದ್ದು, ಜಾರ್ಜ್ ಅವರನ್ನೇ ಆರೋಪಿ ನಂ.1 ಎಂದು ದೂರು ದಾಖಲಿಸಿದೆ. ಇಷ್ಟಾದರೂ ಸಿದ್ದರಾಮಯ್ಯ ಮಾತ್ರ ಜಾರ್ಜ್ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದಿದ್ದಾರೆ. ಹೀಗೆ ಆರೋಪ ಹೊತ್ತ ಸಚಿವರನ್ನು ಬೆಂಬಲಿಸುತ್ತಿರುವ ಮುಖ್ಯಮಂತ್ರಿ ಅವರಿಗೆ ಒಂದಷ್ಟು ಪ್ರಶ್ನೆ ಕೇಳಲೇಬೇಕಾಗಿದೆ. ಅದೂ ಸಾಮಾನ್ಯ ನಾಗರಿಕನಾಗಿ ಕೇಳಬೇಕಿದೆ.

  • ಆರಂಭದಿಂದಲೂ ನಮ್ಮದು ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಮುಖ್ಯಮಂತ್ರಿ ಘಂಟಾಘೋಷವಾಗಿ ಹೇಳುತ್ತಲೇ ಬಂದಿದ್ದಾರೆ. ಹೀಗಿದ್ದರೂ, ಕಿರುಕುಳ ಆರೋಪ ಹೊತ್ತಿರುವ ಜಾರ್ಜ್ ಅವರನ್ನು ರಕ್ಷಣೆ ಮಾಡುವ ದರ್ದು ನಿಮಗೇನಿದೆ?
  • ನನ್ನ ಸಾವಿಗೆ ಪೊಲೀಸ್ ಅಧಿಕಾರಿಗಳು ಸೇರಿ, ಆಗ ಗೃಹಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರ ಹೆಸರನ್ನು ಪ್ರಸ್ತಾಪಿಯೇ ಡಿವೈಎಸ್ಪಿ ಗಣಪತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ವಿಡಿಯೋದಲ್ಲೂ ಜಾರ್ಜ್ ಹೆಸರು ಉಲ್ಲೇಖವಾಗಿದೆ. ಆತ್ಮಹತ್ಯೆ ಮಾಡಿಕೊಂಡವರೇ ಜಾರ್ಜ್ ಕಿರುಕುಳ ನೀಡಿದ್ದಾರೆ ಎಂದಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂಗೇಕೆ ಹಿಂಜರಿಕೆ?
  • ಅದು ಡಿ.ಕೆ.ರವಿ ನಿವಾಸದ ಮೇಲೆ ಐಟಿಯೇ ದಾಳಿ ಮಾಡಲಿ ಅಥವಾ ಸಿಬಿಐ ಕೆ.ಜೆ.ಜಾರ್ಜ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಿ. ನೇರವಾಗಿ ಕೇಂದ್ರ ಸರ್ಕಾರವನ್ನೇ ಟೀಕಿಸುತ್ತೀರಿ. ಬೆಂಕಿ ಇಲ್ಲದೆ ಹೊಗೆ ಆಡುತ್ತದೆಯೇ? ಆರೋಪ ಸಾಬೀತಾಗುವ ತನಕವೂ ಕಾಯುವುದಿಲ್ಲ, ಮೊದಲೇ ಕೇಂದ್ರದತ್ತ ಬೆರಳು ಮಾಡುತ್ತೀರಿ. ಏಕೆ? ಜನರನ್ನು ಮರುಳು ಮಾಡಲೇ?
  • ಸಿಬಿಐಅನ್ನು ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕೆ ಬಳಸುತ್ತಿದೆ ಎಂದು ಆರೋಪಿಸುವ ನೀವು, ಕೆ.ಜೆ.ಜಾರ್ಜ್ ಹಾಗೂ ನಿಮ್ಮದೇ ಸಂಪುಟದ ಮತ್ತೊಬ್ಬ ಸಚಿವನ ಕಾಮಕೇಳಿ ವಿಡಿಯೋ ಸಿಕ್ಕಾಗಲೂ ಕ್ಲೀನ್ ಚಿಟ್ ನೀಡಿತಲ್ಲ ಸಿಐಡಿ? ಇದನ್ನು ನೀವು ಹೇಗೆ ಬಳಸಿಕೊಳ್ಳುತ್ತಿದ್ದೀರಿ ಮಾರಾಯ್ರೇ?
  • ಅದೇನೋ ದೊಡ್ಡದಾಗಿ, ಸಮರ್ಪಕ ಕೆಲಸ ನಿರ್ವಹಿಸದ ಸಚಿವರು ಎಂಬ ಹಣೆಪಟ್ಟಿ ಕಟ್ಟಿ, ಅಂಬರೀಶ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಸಿಳಿದಿರಿ. ಆದರೆ, ಬೆಂಗಳೂರಿನ ಗುಂಡಿ ಸಹ ಮುಚ್ಚಿಸದೆ ಜನರ ಜೀವದ ಜತೆ ಆಟವಾಡುತ್ತಿರುವ ಕೆ.ಜೆ.ಜಾರ್ಜ್ ಅವರನ್ನೇಕೆ ನಗರಾಭಿವೃದ್ಧಿ ಸಚಿವ ಸ್ಥಾನದಿಂದ ಕೆಳಗಿಸಿಲ್ಲ? ಅದೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವೂ ಜಾರ್ಜ್ ವಿರುದ್ಧ ಇದ್ದರೂ ರಾಜೀನಾಮೆ ಕೇಳದೆ ಅವರ ಬೆಂಬಲಕ್ಕೇಕೆ ನಿಂತಿರಿ? ಚುನಾವಣೆಯಲ್ಲಿ ಅಲ್ಪಸಂಖ್ಯಾತರ ವೋಟು ತಪ್ಪುತ್ತವೆ ಅಂತಲಾ?
  • ಗಣಪತಿ ಸಾವಿನ ಬಳಿಕ ಕೆ.ಜೆ.ಜಾರ್ಜ್ ವಿರುದ್ಧ ಆರೋಪ ಕೇಳಿಬರುತ್ತಲೇ ಅವರ ರಾಜೀನಾಮೆ ಪಡೆದಿರಿ. ಆದರೆ ಈಗ ಸಿಬಿಐ ಎಫ್ಐಆರ್ ದಾಖಲಿಸಿದರೂ ಏಕೆ ರಾಜೀನಾಮೆ ಪಡೆಯುತ್ತಿಲ್ಲ. ಆಗ ಹೇಗಿದ್ದರೂ ಸಿಐಡಿ ಕ್ಲೀನ್ ಚಿಟ್ ನೀಡುತ್ತದೆ ಎಂಬ ಭರವಸೆ ಇತ್ತೇ? ಈಗ ಅವರು ನಿರಪರಾಧಿ ಆಗಿ ಹೊರಬರಲಾರರು ಎಂದು ರಾಜೀನಾಮೆ ಪಡೆಯುತ್ತಿಲ್ಲವೇ?
  • ಆಗೋ ಅನಿಷ್ಟಕ್ಕೆಲ್ಲ ಶನೀಶ್ವರನೇ ಕಾರಣ ಎಂಬಂತೆ, ಕೇಂದ್ರದತ್ತಲೇ ಬೆರಳು ಮಾಡುವ ನೀವು ಕರ್ನಾಟದಲ್ಲಿ ಭ್ರಷ್ಟಾಚಾರದ ವಿರುದ್ಧ, ಹಿಂದೂಗಳ ಹತ್ಯೆ, ವಿಚಾರವಾದಿಗಳ ಹತ್ಯೆ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ? ಸ್ವಲ್ಪ ವಿವರಿಸುವಿರಾ?
  • ನೀವು ನಿಜವಾಗಲೂ ಕಳಂಕರಹಿತ ಆಡಳಿತ ನೀಡುವವರೇ ಆಗಿದ್ದರೆ ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐ ತನಿಖೆ ನಡೆಸಲಿ ಬಿಡಿ. ನಿರಪರಾಧಿಯಾಗಿದ್ದರೆ ಯಾರು ವಿಚಾರಣೆ ಮಾಡಿದರೂ ಶಿಕ್ಷೆಯಾಗಲ್ಲ. ಅಷ್ಟಕ್ಕೂ ನೂರು ಅಪರಾಧಿಗಳಿಗೆ ಶಿಕ್ಷೆಯಾಗದಿದ್ದರೂ ಪರವಾಗಿಲ್ಲ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂಬುದು ನಮ್ಮ ನ್ಯಾಯಾಂಗ ಧ್ಯೇಯ. ಹೀಗಿರುವಾಗ ವಿಚಾರಣೆ ನಡೆಯುತ್ತಲೇ, ನೀವೇಕೆ ಕುಂಬಳ ಕಳ್ಳನ ಹಾಗೆ ಬೆನ್ನು ಮುಟ್ಟಿಕೊಳ್ಳುತ್ತೀರಿ?

 

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
-ವಿಶಾಲ್ ಪುಡಿಯಂಡ, ಮಡಿಕೇರಿ September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
-ವಿಶಾಲ್ ಪುಡಿಯಂಡ, ಮಡಿಕೇರಿ September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search