• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಉಗ್ರರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಬೇರೆ ರೀತಿಯ ಉತ್ತರ: ಪಾಕಿಸ್ತಾನಕ್ಕೆ ಅಮೆರಿಕ ತಪರಾಕಿ

TNN Correspondent Posted On October 28, 2017
0


0
Shares
  • Share On Facebook
  • Tweet It

ವಾಷಿಂಗ್ಟನ್: ಭಾರತದಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಹೇಗೆ ಪಾಕಿಸ್ತಾನವನ್ನು ಬಗ್ಗುಬಡಿಯುತ್ತಿದ್ದಾರೋ, ಹಾಗೆಯೇ ಅಮರಿಕದಲ್ಲಿ ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದ ಮೇಲೆ ಪಾಕಿಸ್ತಾನದ ವಿರುದ್ಧ ಹಲವು ಅಸ್ತ್ರ ಬಳಸುತ್ತಿದ್ದಾರೆ.

ಪಾಕಿಸ್ತಾನ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಈ ದಾರಿಯಲ್ಲಿ ಪಾಕಿಸ್ತಾನ ಎಡವಿದರೆ ಅಮೆರಿಕ ಬೇರೆಯದೇ ರೀತಿಯಲ್ಲಿ ಉತ್ತರಿಸಬೇಕಾಗುತ್ತದೆ ಎಂದು ಸರ್ಕಾರದ ಕಾರ್ಯದರ್ಶಿ ರೆಕ್ಸ್ ಟಿಲ್ಲರ್ ಸನ್ ಪಾಕಿಗೆ ಭಾರಿ ತಪರಾಕಿ ನೀಡಿದ್ದಾರೆ.

ಪಾಕಿಸ್ತಾನಕ್ಕೆ ಉಗ್ರರ ವಿರುದ್ಧ ಕ್ರಮ ಕೈಗೊಳ್ಳದೆ ಬೇರೆ ದಾರಿಯಿಲ್ಲ. ಅದು ಮೊದಲು ಉಗ್ರರ ಸ್ವರ್ಗ ಎಂಬ ಹಣೆಪಟ್ಟಿಯಿಂದ ಹೊರಬರಬೇಕು. ಉಗ್ರರನ್ನು ಸಾಕಿ-ಸಲಹುವುದನ್ನು ಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಉಗ್ರರನ್ನು ಪೋಷಣೆ ಮಾಡುವುದರಿಂದಲೇ ಕುಖ್ಯಾತಿಯಾಗಿರುವ ಪಾಕಿಸ್ತಾನ ಮೂಲತಃ ಸಾರ್ವಭೌಮತ್ವ ರಾಷ್ಟ್ರ. ಹಾಗಾಗಿ ನಾವು ಯಾವುದೇ ಬೇಡಿಕೆ ಇಡದೇ, ಭಯೋತ್ಪಾದನೆ ನಿಗ್ರಹಿಸಿ ಎಂದು ಹೇಳುತ್ತಿದ್ದೇವೆ. ಒಂದು ವೇಳೆ ಪಾಕಿಸ್ತಾನ ತನ್ನ ಚಾಳಿಯೇ ಮುಂದುವರಿಸಿದರೆ ಅಥವಾ ಉಗ್ರ ಪೋಷಣೆಯಲ್ಲಿ ಮುಂದುವರಿದರೆ ಯಾವ ತಂತ್ರ ಬಳಸಿ ಅದನ್ನು ತಡೆಯಬೇಕು ಎಂಬುದು ನಮಗೆ ಗೊತ್ತು ಎಂದಿದ್ದಾರೆ.

ನಾವು ಇದುವರೆಗೂ ಪಾಕಿಸ್ತಾನದ ಜತೆ ನಡೆಸಿದ ಮಾತುಕತೆಯಲ್ಲಿ ಪಾಕಿಸ್ತಾನದ್ದೇ ಶೇ.80ರಷ್ಟು ಮಾತು ಕೇಳಿದ್ದೇವೆ ಹಾಗೂ ನಾವು ಶೇ.20ರಷ್ಟು ಮಾತ್ರ ಮಾತನಾಡಿದ್ದೇವೆ. ಆದರೆ ಈಗ ಕಾಲ ಬದಲಾಗಿದೆ. ಪಾಕ್ ಪ್ರಧಾನಿ ಅಬ್ಬಾಸಿ ಜತೆ ನಾವು ಮಾತನಾಡಿದ್ದು, ಇನ್ನು ಮುಂದೆ ಪಾಕಿಸ್ತಾನ ಬರೀ ಬಾಯಿಮಾತಿನಲ್ಲೇ ಭಯೋತ್ಪಾದನೆ ನಿಗ್ರಹಿಸದೆ, ಕಾರ್ಯ ರೂಪಕ್ಕೆ ತರಬೇಕು ಎಂದು ಜಿನೀವಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರೆಕ್ಸ್ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search