• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಂಜುನಾಥನ ಸನ್ನಿಧಾನಕ್ಕೆ ಮೋದಿ, ಸಕಲ ಸಿದ್ಧತೆ, ಬಿಗಿ ಬಂದೋಬಸ್ತ್

TNN Correspondent Posted On October 29, 2017


  • Share On Facebook
  • Tweet It

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಲಿದ್ದು, ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಅದ್ದೂರಿಯಾಗಿ ಸಿಂಗಾರಗೊಳಿಸಲಾಗಿದೆ.

ಆದಾಗ್ಯೂ ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಸಿದ್ಧತೆ ಪೂರ್ಣಗೊಂಡಿದ್ದು, ಭಾರಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಬೆಳಗ್ಗೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಆಗಮಿಸಲಿರುವ ಮೋದಿ, ಬಳಿಕ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ವಸಹಾಯ ಸಂಘಗಳ 38 ಲಕ್ಷ ಸದಸ್ಯರಲ್ಲಿ 10 ಲಕ್ಷ ಸದಸ್ಯರು ಜನಧನ ಖಾತೆ ಹೊಂದಿದ್ದು, ಅವರಿಗೆ ರುಪೇ ಕಾರ್ಡ್ ವಿತರಿಸುವ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಬಳಿಕ ಬೃಹತ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ.

ನರೇಂದ್ರ ಮೋದಿ ಅವರ ಈ ಒಂದು ದಿನಧ ಭೇಟಿಯಲ್ಲಿ ಬೆಂಗಳೂರು, ಧರ್ಮಸ್ಥಳ ಹಾಗೂ ಬೀದರ್ ಗೆ ಭೇಟಿ ನೀಡಲಿದ್ದಾರೆ. ಬೀದರ್ ನಲ್ಲಿ ಬೀದರ್-ಕಲಬುರಗಿ ರೈಲಿಗೆ ಮೋದಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 1.30ರಿಂದ ಮೋದಿ ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಬಿಗಿ ಬಂದೋಬಸ್ತ್

ಮೋದಿ ಭೇಟಿ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ 2500 ಪೊಲೀಸ್ ಸಿಬ್ಬಂದಿ, ವಿಶೇಷ ರಕ್ಷಣಾ ಪಡೆ ನಿಯೋಜಿಸಲಾಗಿದೆ. ಇದೇ ಕಾರಣಕ್ಕೆ ಭಾನುವಾರ ಮಧ್ಯಾಹ್ನದವರೆಗೆ ಸಾರ್ವಜನಿಕರಿಗೆ ಧರ್ಮಸ್ಥಳ ದರ್ಶನ ಸ್ಥಗಿತಗೊಳಿಸಲಾಗಿದೆ.

ಹೀಗಿದೆ ನರೇಂದ್ರ ಮೋದಿ ವೇಳಾಪಟ್ಟಿ
  • ಬೆಳಗ್ಗೆ 7.30ಕ್ಕೆ ದಹಲಿಯಿಂದ ವಿಮಾನದಲ್ಲಿ ಧರ್ಮಸ್ಥಳದತ್ತ ಮೋದಿ.
  • 15ಕ್ಕೆ ಮಂಗಳೂರಿಗೆ ಆಗಮನ
  • 30ಕ್ಕೆ ಧರ್ಮಸ್ಥಳ ಮಂಜುನಾಥನ ದರ್ಶನ
  • 30ಕ್ಕೆ ಉಜಿರೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಫಲಾನುಭವಿಗಳಿಗೆ ರುಪೇ ಕಾರ್ಡ್ ವಿತರಣೆ
  • 30ಕ್ಕೆ ಬೆಂಗಳೂರಿಗೆ ತೆರಳಲಿರುವ ಪ್ರಧಾನಿ.
  • ಮಧ್ಯಾಹ್ನ30 ಬೆಂಗಳೂರಿನ ಅರಮನೆ ಆವರಣದಲ್ಲಿ ಸೌಂದರ್ಯ ಲಹರಿ ಪಾರಾಯಣ
  • ಸಂಜೆ30 ಬೀದರ್‌-ಕಲಬುರಗಿ ನೂತನ ರೈಲು ಮಾರ್ಗ ಲೋಕಾರ್ಪಣೆ

 

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search