• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಪ್ರಧಾನಿಯಾಗಲು ರಾಹುಲ್ ಗಾಂಧಿಗೆ ಅರ್ಧ ಕ್ರೆಡಿಟ್ ಅಲ್ಲ, ಕಾಂಗ್ರೆಸ್ ಸೋಲಿನ ಪೂರ್ತಿ ಕ್ರೆಡಿಟ್ ಸಲ್ಲಬೇಕು

-ರಾಘವ್ ದೀಪಕ್, ಪತ್ರಿಕೋದ್ಯಮ ವಿದ್ಯಾರ್ಥಿ ಮಂಗಳೂರು Posted On October 29, 2017
0


0
Shares
  • Share On Facebook
  • Tweet It

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿ ನರೇಂದ್ರ ಮೋದಿ ಪ್ರಧಾನಿಯಾಗುವಲ್ಲಿ ರಾಹುಲ್ ಗಾಂಧಿ ಅವರ ಪಾಲು ತುಂಬ ಇದೆ. ಹಾಗಾಗಿ ನರೇಂದ್ರ ಮೋದಿ ಪ್ರಧಾನಿಯಾಗಲು ರಾಹುಲ್ ಗಾಂಧಿಗೆ ಶೇ.50ರಷ್ಟು ಕ್ರೆಡಿಟ್ ಸಲ್ಲಬೇಖು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಹೇಳಿದ್ದಾರೆ.

ಚುನಾವಣೆ ಪ್ರಚಾರದ ವೇಳೆ ರಾಹುಲ್ ಗಾಂಧಿ ಮೋದಿ ಅವರನ್ನು ಅಣಕ, ಅಪಹಾಸ್ಯ ಮಾಡಿದ್ದು ಮೋದಿ ಅವರ ಗೆಲುವಿಗೆ ಸಹಕಾರಿಯಾಯಿತು ಎಂದಿದ್ದಾರೆ ಠಾಕ್ರೆ.

ಆದರೆ, ನರೇಂದ್ರ ಮೋದಿ ಗೆಲುವಿನ ಕುರಿತು ಇಷ್ಟೆಲ್ಲ ಹೇಳಿರುವ ರಾಜ್ ಠಾಕ್ರೆ, ಕಾಂಗ್ರೆಸ್ ಸೋಲಿಗೆ ಯಾರು ಕಾರಣ ಎಂದು ಹೇಳೇ ಇಲ್ಲ. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಕಾಡೆ ಮಲಗಲು, ಪ್ರತಿಪಕ್ಷ ಸ್ಥಾನಕ್ಕೂ ಅರ್ಹತೆಯಿಲ್ಲದಂತೆ ಜನ ತಿರಸ್ಕರಿಸಿದಕ್ಕೆ ಕಾರಣ ರಾಹುಲ್ ಗಾಂಧಿ ಎಂದು ಎಲ್ಲೂ ಹೇಳಿಲ್ಲ.

ಖಂಡಿತವಾಗಿಯೂ 2014ರಲ್ಲಿ ದೇಶಾದ್ಯಂತ ನರೇಂದ್ರ ಮೋದಿ ಅಲೆಯಿತ್ತು. ಅವರು ಗುಜರಾತ್ ಅಭಿವೃದ್ಧಿಪಡಿಸಿದ ಪರಿ, ವ್ಯಕ್ತಿತ್ವ, ಕಾಂಗ್ರೆಸ್ಸಿನ ಭ್ರಷ್ಟಾಚಾರ, ದೇಶಕ್ಕೊಬ್ಬ ಸಮರ್ಥ ನಾಯಕ ಬೇಕು ಎಂಬ ಜನರ ಆಕಾಂಕ್ಷೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಿತು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ.

ಠಾಕ್ರೆಯವರ ಈ ರಾಜಕೀಯ ಪ್ರೇರಿತ ಹೇಳಿಕೆ ಗಮನಿಸುವುದಾದರೆ, ಕಾಂಗ್ರೆಸ್ ಸೋಲಿಗೆ ರಾಹುಲ್ ಗಾಂಧಿಯೇ ಕಾರಣ. ಏಕೆಂದರೆ, 2014ರಲ್ಲಿ ರಾಹುಲ್ ಗಾಂಧಿಯವರಿಗೆ ಪ್ರಧಾನಿಯಾಗುವ ಉತ್ಕಟ ಬಯಕೆ ಶುರುವಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಪರೋಕ್ಷವಾಗಿ ರಾಹುಲ್ ಗಾಂಧಿ ನಾಯಕತ್ವದಲ್ಲೇ ಚುನಾವಣೆ ಎದುರಿಸಿತು.

ಆದರೆ ಅಷ್ಟೊತ್ತಿಗೆ ರಾಹುಲ್ ಗಾಂಧಿ “ಪಪ್ಪು” ಎಂದೇ ಖ್ಯಾತರಾಗಿದ್ದರು. ಪತ್ರಕರ್ತ ಆರ್ನಬ್ ಗೋಸ್ವಾಮಿಗೆ ನೀಡಿದ ಸಂದರ್ಶನದಲ್ಲಿ ರಾಹುಲ್ ಗಾಂಧಿ ಎಂಥ ಮಹತ್ವಾಕಾಂಕ್ಷೆ ಹಾಗೂ ದೂರದೃಷ್ಟಿ ಹೊಂದಿದ ನಾಯಕ ಎಂಬುದು ಎಲ್ಲರಿಗೂ ಗೊತ್ತಾಗಿತ್ತು. ಮೇಲಾಗಿ ಈತ ದೇಶವಾಳಲು ಅನರ್ಹ ಎಂದು ತೀರ್ಮಾನಿಸಿದ್ದರು. ಇದೇ ಕಾರಣಕ್ಕೆ ಕಾಂಗ್ರೆಸ್ ಧೂಳೀಪಟವಾಯಿತು.

ರಾಜ್ ಠಾಕ್ರೆ ಮೋದಿಗೆ ಗೆಲುವಿನ ಕ್ರೆಡಿಟ್ ರಾಹುಲ್ ಗಾಂಧಿಗೆ ಕೊಡುವುದಕ್ಕಿಂತ, ಕಾಂಗ್ರೆಸ್ ಸೋಲಿನ ಸಂಪೂರ್ಣ ಕ್ರೆಡಿಟ್ ರಾಹುಲ್ ಗೆ ಕೊಟ್ಟರೆ ಒಳ್ಳೆಯದು ಹಾಗೂ ಅದು ಅಷ್ಟೇ ಸಮಂಜಸ.

 

 

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
-ರಾಘವ್ ದೀಪಕ್, ಪತ್ರಿಕೋದ್ಯಮ ವಿದ್ಯಾರ್ಥಿ ಮಂಗಳೂರು October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
-ರಾಘವ್ ದೀಪಕ್, ಪತ್ರಿಕೋದ್ಯಮ ವಿದ್ಯಾರ್ಥಿ ಮಂಗಳೂರು October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search