• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಪ್ಪು ಹಣಕ್ಕೆ ಕಡಿವಾಣ ಹಾಕದೆ ಬಿಡಲ್ಲ: ಅರುಣ್ ಜೇಟ್ಲಿ

TNN Correspondent Posted On October 29, 2017
0


0
Shares
  • Share On Facebook
  • Tweet It

ನವದೆಹಲಿ: ಕೇಂದ್ರ ಸರ್ಕಾರದ ಕಪ್ಪು ಹಣದ ವಿರುದ್ಧದ ಹೋರಾಟಕ್ಕೆ ಹಲವು ವಿರೋಧ, ಟೀಕೆ, ಆಕ್ಷೇಪ, ಆರೋಪಗಳು ಕೇಳಿಬರುತ್ತಿದ್ದರೂ, ನಾವು ಕಪ್ಪು ಹಣಕ್ಕೆ ಕಡಿವಾಣ ಹಾಕದೆ ಬಿಡುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಗುಡುಗಿದ್ದಾರೆ.

ಕಾಳಧನಿಕರ ಹುಟ್ಟಡಗಿಸುವುದೇ ನಮ್ಮ ಉದ್ದೇಶವಾಗಿದೆ. ಈ ದಿಸೆಯಲ್ಲಿ ನಾವು ಜಾರಿಗೆ ತಂದ ಸುಧಾರಣಾ ಕ್ರಮಗಳು ಮುಂದಿನ ದಿನಗಳಲ್ಲಿ ಸಕಾರಾತ್ಮಕ ಪರಿಣಾಮ ಬೀರಲಿದ್ದು, ಜನರಿಗೆ ಒಳಿತಾಗಲಿದೆ ಎಂದು ತಿಳಿಸಿದ್ದಾರೆ.

ನೋಟು ನಿಷೇಧ, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಯಂಥ ಮಹತ್ತರ ಯೋಜನೆ ಮೂಲಕ ಸರ್ಕಾರ ಕಪ್ಪು ಹಣ ತಡೆಯಲು ಯತ್ನಿಸುತ್ತಿದೆ. ಈ ಹಾದಿಯಲ್ಲಿ ಯಾವುದೇ ಸವಾಲು ಎದುರಾದರೂ ನಾವು ವಿಮುಖರಾಗುವುದಿಲ್ಲ. ಭಾರತದ ಆರ್ಥಿಕ ವ್ಯವಸ್ಥೆ ಕಸ ಸ್ವಚ್ಛಗೊಳಿಸದೇ ಬಿಡುವುದಿಲ್ಲ ಎಂದಿದ್ದಾರೆ.

ಪ್ರಸ್ತುತ ಭಾರತ ವಿಶ್ವದಲ್ಲೇ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಇದಕ್ಕೆ ಮತ್ತಷ್ಟು ವೇಗ ನೀಡಲು ಅಭಿವೃದ್ಧಿ, ಪಾರದರ್ಶಕ, ಮುಕ್ತ ಹಾಗೂ ಪ್ರಬಲ ಆರ್ಥಿಕ ವ್ಯವಸ್ಥೆ ಇರಬೇಕು ಎಂಬುದೇ ನಮ್ಮ ಆಶಯ. ಹಾಗಾಗಿಯೇ ನಾವು ಯಾವುದೇ ಕಾರಣಕ್ಕೂ ಕಪ್ಪು ಹಣ ಆಧಾರಿತ ಆರ್ಥಿಕ ವ್ಯವಸ್ಥೆ ನಿರ್ಮಾಣ ಹಾಗೂ ಅಸ್ತಿತ್ವ ಉಳಿಸುವುದಿಲ್ಲ ಎಂದು ಜೇಟ್ಲಿ ತಿಳಿಸಿದ್ದಾರೆ.

ಇತ್ತೀಚೆಗೆ ಕೇಂದ್ರದ ನೋಟು ನಿಷೇಧ ಹಾಗೂ ಜಿಎಸ್ಟಿಯಿಂದ ದೇಶದ ಆರ್ಥಿಕ ವ್ಯವಸ್ಥೆ ಮೇಲೆ ನಕಾರಾತ್ಮಕ ಪ್ರಭಾವ ಬೀರುತ್ತಿದೆ ಎಂಬ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಜೇಟ್ಲಿ ಹೇಳಿದ್ದಾರೆ.

 

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search