• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಖಾದಿ ಫಾರ್ ನೇಶನ್, ಖಾದಿ ಫಾರ್ ಫ್ಯಾಶನ್: ನರೇಂದ್ರ ಮೋದಿ

TNN Correspondent Posted On October 29, 2017


  • Share On Facebook
  • Tweet It

ದೇಶದ ಸಂಪ್ರದಾಯದ ಸಂಕೇತವಾದ ಖಾದಿ ಬಳಕೆ ಈಗ ರೂಪಾಂತರವಾಗಿದ್ದು, ಖಾದಿ ಫಾರ್ ನೇಶನ್, ಖಾದಿ ಫಾರ್ ಫ್ಯಾಶನ್ ಎಂಬಂತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮನ್ ಕೀ ಬಾತ್ ರೇಡಿಯೋ ಸರಣಿಯ 37ನೇ ಕಾರ್ಯಕ್ರಮದಲ್ಲಿ ದೇಶದ ಜನರನ್ನುದ್ದೇಶಿಸಿದ ಮಾತನಾಡಿದ ಅವರು, ದೇಶದ ಅಭಿವೃದ್ಧಿಗೆ ಖಾದಿ ಬಳಸಿ ಎಂದು ಕರೆ ನೀಡಿದರು.

ಜಮ್ಮು-ಕಾಶ್ಮೀರದ ಗುರೇಜ್ ವಲಯದಲ್ಲಿ ಸೈನಿಕರ ಜತೆ ದೀಪಾವಳಿ ಆಚರಿಸಿದ್ದು ಸಂತಸ ತಂದಿದೆ. ನನಗೆ ಆ ಮಧುರ ಕ್ಷಣಗಳೂ ಎಂದಿಗೂ ಸ್ಮೃತಿಪಟಲದಲ್ಲಿರುವಂಥವು ಎಂದು ಮೋದಿ ಸ್ಮರಿಸಿದರು.

ನಾವೆಲ್ಲರೂ ನಮ್ಮ ಸೈನಿಕರ ಶೌರ್ಯವನ್ನು ಮೆಚ್ಚಬೇಕು. ವಿಶ್ವಸಂಸ್ಥೆಯ ಶಾಂತಿ ಸ್ಥಾಪನೆ ಘಟಕಕ್ಕೆ ನಮ್ಮ ಹೆಮ್ಮೆಯ 18 ಸಾವಿರ ಯೋಧರು ಅಮೋಘ ಕೊಡುಗೆ ನೀಡಿದ್ದಾರೆ. ಅವರ ಸೇವೆ ಸ್ಮರಣೀಯ ಎಂದು ಪ್ರಧಾನಿ ಶ್ಲಾಘಿಸಿದರು.

ಛಾತಾ ಪೂಜೆ ಕುರಿತು ಮಾತನಾಡುವ ಮೂಲಕ ಕಾರ್ಯಕ್ರಮ ಆರಂಭಿಸಿದ ಮೋದಿ, “ಛಾತ್ ಪೂಜೆ ನಿಸರ್ಗವನ್ನು ಆರಾಧಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತದೆ. ಸೂರ್ಯ ಮತ್ತು ಚಂದ್ರ ಪಹಾಪರ್ವ ಛಾತ್ ನ ಕೇಂದ್ರ ಬಿಂದು ಎಂದು ತಿಳಿಸಿದರು.

ಭಾರತ ವಸುದೈವ ಕುಟುಂಬಕಂ ಎಂಬ ತತ್ವದಂತೆ ಕಾರ್ಯನಿರ್ವಹಿಸುತ್ತಿದ್ದು, ಎಂದಿಗೂ ಶಾಂತಿ ಹಾಗೂ ಏಕತೆ ಸಾರುವುದೇ ನಮ್ಮ ನೆಲದ ಗುಣವೈಶಿಷ್ಟ್ಯ ಎಂದು ಹೇಳಿದರು.

 

  • Share On Facebook
  • Tweet It


- Advertisement -


Trending Now
ಮಂಗಳೂರಿನ ಕಥೆ ಏನಾಗಿತ್ತು?
Tulunadu News November 29, 2023
42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
Tulunadu News November 28, 2023
Leave A Reply

  • Recent Posts

    • ಮಂಗಳೂರಿನ ಕಥೆ ಏನಾಗಿತ್ತು?
    • 42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!
    • ದುಬಾರಿ ಗಿಫ್ಟ್ ಸಿಗದ ಕೋಪ, ಹೆಂಡತಿ ಹೊಡೆದು ಗಂಡ ಮೃತ್ಯು!
    • ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಜೋರು ಮಾಡಬಾರದಾ?
    • ಸರಕಾರಕ್ಕೆ ಶಾಲೆಯಲ್ಲಿ ಶಿಕ್ಷಣಕ್ಕಿಂತ ಆಹಾರವೇ ಮುಖ್ಯವಾಯಿತೇ!
    • ಬಸ್ ಕಂಡಕ್ಟರ್ ಗೆ ಚಾಕು ಹಾಕಿದವನ ಕಾಲಿಗೆ ಶೂಟ್ ಮಾಡಿ ಬಂಧಿಸಿದ ಯುಪಿ ಪೊಲೀಸರು
    • ಚೀನಾದಲ್ಲಿ ಮತ್ತೊಂದು ಸೋಂಕು, ಎಚ್ಚರವಹಿಸಲು ಭಾರತ ನಿರ್ಧಾರ
  • Popular Posts

    • 1
      ಮಂಗಳೂರಿನ ಕಥೆ ಏನಾಗಿತ್ತು?
    • 2
      42 ಕೋಟಿ ಮನೆಯಲ್ಲಿ ಸಿಕ್ಕಿದ್ದ ಅಂಬಿಕಾಪತಿ ಸಾವಿನ ಬಗ್ಗೆ ಕೆಂಪಣ್ಣ ಹೇಳಿದ್ದೇನು?
    • 3
      ಕಾಂತಾರಾ - 1 ತುಳು ಭಾಷೆಗೆ ಡಬ್ ಆಗಲ್ವಾ?
    • 4
      ಮೀನಿನ ರೇಟ್ ಜಾಸ್ತಿ ಆಗಲು ಏನು ಕಾರಣ ಗೊತ್ತಾ?
    • 5
      ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search