• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇಂದ್ರದಿಂದ ಮತ್ತೊಂದು ದಿಟ್ಟ ನಿರ್ಧಾರ: 431 ಪಾಕಿಸ್ತಾನಿ ವಲಸಿಗ ಹಿಂದೂಗಳಿಗೆ ಭಾರತದ ನಾಗರಿಕತ್ವ

TNN Correspondent Posted On October 30, 2017


  • Share On Facebook
  • Tweet It

ಮೊನ್ನೆಯಷ್ಟೇ ಪಾಕಿಸ್ತಾನದಿಂದ ಭಾರತಕ್ಕೆ ವಲಸೆ ಬಂದಿದ್ದ 51 ಹಿಂದೂ ಕುಟುಂಬಗಳಿಗೆ ಭಾರತದ ನಾಗರಿಕತ್ವ ನೀಡಿದ್ದ ಕೇಂದ್ರ ಸರ್ಕಾರ ಈಗ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದು ಪಾಕಿಸ್ತಾನದಿಂದ ವಲಸೆ ಬಂದಿರುವ 431 ಹಿಂದೂಗಳಿಗೆ ಭಾರತದ ನಾಗರಿತ್ವ ನೀಡಿದೆ.

ಇವರಲ್ಲಿ ಪಾಕಿಸ್ತಾನದ ಜತೆಗೆ ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ರಾಷ್ಟ್ರಗಳಿಂದ ತೊಂದರೆ ಅನುಭವಿಸಿ ಭಾರತಕ್ಕೆ ಬಂದು ನೆಲೆಸಿದವರಿದ್ದು, ದೀರ್ಘಾವಧಿ ವೀಸಾ, ಪ್ಯಾನ್ ಹಾಗೂ ಆಧಾರ್ ಕಾರ್ಡ್ ನೀಡುವ ಜತೆಗೆ ಭಾರತದಲ್ಲಿ ಆಸ್ತಿ ಖರೀದಿಸುವ ಹಕ್ಕನ್ನೂ ನರೇಂದ್ರ ಮೋದಿ ಸರ್ಕಾರ ನೀಡಿದೆ.

ಇವುಗಳ ಜತೆಗೆ ವಾಹನಾ ಚಾಲನಾ ಪರವಾನಗಿ, ಸ್ವಯಂ ಉದ್ಯೋಗ, ಉದ್ಯಮದಲ್ಲಿ ಪಾಲ್ಗೊಳ್ಳುವ ಹಕ್ಕನ್ನೂ ಸರ್ಕಾರ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬರೀ ಹಿಂದೂಗಳಿಗಷ್ಟೇ ಅಲ್ಲದೆ, ಡಿ.29ರಿಂದ 31ರ ವರೆಗೆ ಪಂಜಾಬಿನ ಖದಾನಾ ಎಂಬಲ್ಲಿ ನಡೆಯುವ 123ನೇ ಜಲ್ಸಾ ಸಲಾನ ಕಾರ್ಯಕ್ರಮಕ್ಕೆ ಪಾಕಿಸ್ತಾನದಿಂದ ಆಗಮಿಸುವ 1800 ಅಹಮ್ಮದೀಯರಿಗೂ ಭಾರತ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿದೆ. ಭಾರತ 2015ರಲ್ಲಿ ಹೀಗೆ ಭದ್ರತೆ ನೀಡಿದ್ದ ಕಾರಣಕ್ಕೇ 5000 ಪಾಕಿಸ್ತಾನಿ ಅಹಮ್ಮದೀಯರು ಭಾಗವಹಿಸಿದ್ದರು.

ಒಟ್ಟಿನಲ್ಲಿ ಪಾಕಿಸ್ತಾನ ಎಷ್ಟೇ ಕುತಂತ್ರ ತೋರಿದರೂ, ಭಾರತಕ್ಕೆ ಉಗ್ರರನ್ನು ಬಿಟ್ಟು ಉಪಟಳ ಮಾಡಿದರೂ ಭಾರತ ಮಾತ್ರ ಪಾಕಿಸ್ತಾನಿ ನಾಗರಿಕರಿಗೆ ಭಾರತದಲ್ಲಿ ರಕ್ಷಣೆ, ಚಿಕಿತ್ಸೆಗಾಗಿ ವೀಸಾ ಸೇರಿ ಅಲ್ಲಿಂದ ಇಲ್ಲಿ ಬಂದು ನೆಲೆಸಿರುವವರಿಗೆ ನಾಗರಿಕತ್ವ ನೀಡಿ ಮಾನವೀಯತೆ ಮೆರೆಯುತ್ತಿದೆ. ಹಾಂಗಂತ ಭಾರತವೇನು ಕಾಶ್ಮೀರದಲ್ಲಿ ಉಗ್ರರು ಬಂದರೆ ಬಂದೂಕು ನಳನಳಿಸದೆ ಬಿಡುವುದಿಲ್ಲ ಮತ್ತೆ!

 

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search