• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕಾಂಗ್ರೆಸ್ಸಿನ ಹೊಲಸು ಬಾಣಗಳನ್ನು ಎದುರಿಸಿ ನಿಲ್ತಾರಾ ವಜ್ರದೇಹಿ?

Tulunadu News Posted On October 30, 2017
0


0
Shares
  • Share On Facebook
  • Tweet It

ಮಂಗಳೂರಿನ ಹಿಂದೂತ್ವದ ಫೈರ್ ಬ್ರಾಂಡ್ ಸನ್ಯಾಸಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಕರಾವಳಿಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಚುನಾವಣೆಗೆ ನಿಲ್ಲುತ್ತಾರೆ ಎಂದು ಸುದ್ದಿಯಾಗುತ್ತಿದೆ. ಅದನ್ನು ಸ್ವಾಮೀಜಿ ಸ್ಪಷ್ಟವಾಗಿ ನಿರಾಕರಿಸಿಯೂ ಇಲ್ಲ, ಒಪ್ಪಿಕೊಂಡಿರುವುದು ಇಲ್ಲ. ಎಲ್ಲದಕ್ಕೂ ಸಮಯವೇ ಉತ್ತರ ನೀಡಲಿದೆ ಎಂದು ಪತ್ರಕತ್ತರು ಕೇಳಿದರೆ ಹೇಳುತ್ತಿದ್ದಾರೆ.
ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಆದ ಬಳಿಕ ಕರ್ನಾಟಕದಲ್ಲಿಯೂ ಅನೇಕ ಸಂತರಿಗೆ ರಾಜ್ಯವನ್ನು ರಾಜಕೀಯವಾಗಿ ಮುನ್ನಡೆಸಬೇಕೆಂಬ ಮಹತ್ವಾಕಾಂಕ್ಷೆ ಬಂದಿರುವುದು ಸುಳ್ಳಲ್ಲ. ಆದರೆ ರಾಜಕೀಯ ಮತ್ತು ಆಧ್ಯಾತ್ಮ ಎನ್ನುವುದು ಅಕ್ಷರಶ: ಬೇರೆ ಬೇರೆ. ಎರಡಕ್ಕೂ ಸಂಬಂಧ ಕಲ್ಪಿಸಲು ಸಾಧ್ಯವಿಲ್ಲ. ಆಧ್ಯಾತ್ಮ ಲೋಕದಲ್ಲಿರುವವರಿಗೆ ಬೇಕಾದ ಮನಸ್ಥಿತಿ, ಸ್ಥಿತಪ್ರಜ್ಞೆ, ಭಗವಂತನೆಡೆಗೆ ತುಡಿತ, ವ್ರತ, ಪೂಜೆ ಮತ್ತು ಪುನಸ್ಕಾರ ಮತ್ತು ಸಮಾಜದಲ್ಲಿ ತನ್ನವರು ದಾರಿ ತಪ್ಪಿದಾಗ ಭೋದಿಸುವ ತತ್ವಗಳು ರಾಜಕೀಯದಕ್ಕೆ ಹೋದ ಬಳಿಕ ಉಳಿಯಲು ಅಸಾಧ್ಯ. ಅಲ್ಲಿ ಒಮ್ಮೆ ಪ್ರವೇಶ ಮಾಡಿದರೆ ಅದು ಒಂದು ರೀತಿಯಲ್ಲಿ ಅಂಟು ಇದ್ದ ಹಾಗೆ. ನಂತರ ಅಧಿಕಾರ ಬಿಟ್ಟು ಇಳಿಯಲು ಮನಸ್ಸು ಬರುವುದಿಲ್ಲ. ಅಧಿಕಾರದಿಂದ ಇಳಿಯಬಾರದು ಎಂದಾದರೆ ಎಲ್ಲರನ್ನೂ ಸಂತೋಷವಾಗಿ ಇಡಬೇಕಾಗುತ್ತದೆ. ಎದುರಾಳಿ ಪಕ್ಷದವರು ಉರುಳಿಸುವ ದಾಳಕ್ಕೆ ತಿರುಗೇಟು ನೀಡಲು ವಾಮ ಮಾರ್ಗ ಅನುಸರಿಸುವ ಅಗತ್ಯ ಕೂಡ ಬರಬಹುದು. ಏಕಾಗ್ರತೆ ಉಳಿಯುವುದು ಕಷ್ಟಸಾಧ್ಯ. ಕಾರಣ ದಿನ ಬೆಳಗಾದರೆ ಜನರ ಸಮಸ್ಯೆ ಎದುರಿಸಬೇಕಾದ ಅನಿವಾರ್ಯತೆ. ಅದು ಬಿಟ್ಟರೆ ಜನರಿಂದ ದೂರ ಎನ್ನುವ ಆರೋಪ. ಸಂತರಾಗಿದ್ದಲ್ಲಿ ಗಂಟೆಗಟ್ಟಲೆ ಪೂಜೆ, ಪುನಸ್ಕಾರ, ಜಪ, ತಪ, ಶ್ಲೋಕ ಪಾರಾಯಣ ಮಾಡಲು ಸಮಯಾವಕಾಶವಿದೆ. ಅದೇ ರಾಜಕಾರಣಿಯಾದರೆ ಅದನ್ನು ಮಾಡಲು ಅಲ್ಲ, ಇದಕ್ಕೆ ಹೋಗಲು ಇಲ್ಲ. ಕೊನೆಗೆ ಒಬ್ಬ ಒಳ್ಳೆಯ ಸನ್ಯಾಸಿಯೂ ಆಗದೆ, ಒಳ್ಳೆಯ ರಾಜಕಾರಣಿಯೂ ಆಗದೆ ಉಳಿಯುವ ಅಪಾಯ ಇದೆ.
ಸನ್ಯಾಸಿಯಾಗಿದ್ದರೆ ಹಿಂದೂ ಧರ್ಮದವರಿಗೆ ಮಾರ್ಗದಶ್ಯಕರಾಗಿ ಈ ಧರ್ಮಕ್ಕೆ ನಿಷ್ಟರಾಗಿರಬಹುದು. ಅದೇ ಸನ್ಯಾಸಿ ರಾಜಕಾರಣಿಯಾದರೆ ಬೇರೆ ಧರ್ಮದವರನ್ನು ಹೀಯಾಳಿಸಿ ಮಾತನಾಡಲು ಆಗುತ್ತಾ? ವಜ್ರದೇಹಿ ಸ್ವಾಮೀಜಿಯವರಿಗೆ ರಾಜಕೀಯಕ್ಕೆ ಬರಲು ಯಾರ ಆಕ್ಷೇಪವೂ ಇರಲಿಕ್ಕಿಲ್ಲ. ಆದರೆ ಚುನಾವಣೆಯ ಸಂದರ್ಭದಲ್ಲಿ ಎದುರು ಪಕ್ಷದವರು ಬಿಡುವ ಬಾಣಗಳಿಗೆ ಉತ್ತರ ಕೊಡಲು ಎಲ್ಲದಕ್ಕೂ ಸಿದ್ಧರಾಗಿರಬೇಕಾಗುತ್ತದೆ. ಆಲ್ ದಿ ಬೆಸ್ಟ್ ಸ್ವಾಮೀಜಿ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search