• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಶ್ರೀರಾಮಸೇನೆ ರಾಜ್ಯ ಉಪಾಧ್ಯಕ್ಷ, ಹಿಂದುತ್ವ ಪ್ರತಿಪಾದಕ ಸಿದ್ಧಲಿಂಗ ಶ್ರೀಗಳ ಬಂಧನ

TNN Correspondent Posted On October 31, 2017
0


0
Shares
  • Share On Facebook
  • Tweet It

ಕಲಬುರಗಿ: ಪ್ರಬಲ ಹಿಂದೂತ್ವದ ಪ್ರತಿಪಾದಕ, ಸಿದ್ದರಾಮಯ್ಯ ಕಾಂಗ್ರೆಸ್ ಸರಕಾರವನ್ನುಮತ್ತು ರಾಜ್ಯ ಸರಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯನ್ನು ಪ್ರಬಲವಾಗಿ ಖಂಡಿಸಿ, ಕಾಂಗ್ರೆಸ್ ಮುಖಂಡರಿಗೆ ಮುಳ್ಳಾಗಿದ್ದ ಶ್ರೀರಾಮಸೇನೆಯ ರಾಜ್ಯ ಉಪಾಧ್ಯಕ್ಷ ಜೇವರ್ಗಿ ತಾಲೂಕಿನ ಆಂದೋಲಾದ ಸಿದ್ಧಲಿಂಗ ಶ್ರೀಗಳನ್ನು ಜೇವರ್ಗಿ ಪೊಲೀಸರು ಬಂಧಿಸಿದ್ದಾರೆ. ಕೊಲೆ ಯತ್ನಕ್ಕೆ ಪ್ರಚೋದನೆ ಆರೋಪದ ಮೇಲೆ ಶ್ರೀಗಳನ್ನು ಆಂದೋಲಾದಲ್ಲಿ ವಶಪಡಿಸಿಕೊಳ್ಳಲಾಗಿದೆ.

ಸಿದ್ಧಲಿಂಗ ಶ್ರೀಗಳ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಒಂದು ಪ್ರಕರದಲ್ಲಿ ಜಾಮೀನು ದೊರೆತಿದೆ. ಇನ್ನು ಮೂರು ಪ್ರಕರಣಗಳ ವಿಚಾರಣೆಗಾಗಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಪೊಲೀಸರು ಟಿಪ್ಪು ಸುಲ್ತಾನ ಜಯಂತಿಯನ್ನು ಯಶಸ್ವಿ ಮಾಡಲು ಶ್ರೀಗಳನ್ನು ಬಂಧಿಸಿದ್ದಾರೆ. ಇದಕ್ಕೆ ರಾಜ್ಯ ಸರಕಾರದ ಕುಮ್ಮಕ್ಕಿದೆ ಎಂದು ಭಕ್ತರು ಆರೋಪಿಸಿದ್ದಾರೆ. ಈ ಹಿಂದೆ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಸಿದ್ಧಲಿಂಗ ಶ್ರೀಗಳು ಪ್ರತಿಭಟನೆ, ಹೋರಾಟ ಮತ್ತು ಭಾಷಣಗಳನ್ನು ಮಾಡಿದ್ದರು. ಇದರಿಂದ ಕಾಂಗ್ರೆಸ್ ಮುಖಂಡರ ಕೆಂಗಣ್ಣಿಗೆ ಗುರಿಯಾಗಿದ್ದರು.

ಅಲ್ಲದೇ ಸಿದ್ಧಲಿಂಗ ಶ್ರೀ 2018 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತಿದ್ದು, ಅದಕ್ಕಾಗಿಯೇ ಈಗಿನಿಂದಲೇ ಅವರನ್ನು ಹಣಿಯುವ ಕೆಲಸ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಸಿದ್ಧಲಿಂಗ ಶ್ರೀಗಳನ್ನು ಬಂಧಿಸಿದರೆ ಹೋರಾಟ ಮಾಡಲಾಗುವುದು ಎಂದು ಶ್ರೀರಾಮಚಂದ್ರಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಸೇರಿ ಹಲವು ಸ್ವಾಮೀಜಿಗಳು ಭಾನುವಾರ ಕಲಬುರಗಿಯಲ್ಲಿ ಎಚ್ಚರಿಕೆ ನೀಡಿದ್ದರು. ಆದರೂ ಸರಕಾರ ಶತಾಯಗತಾಯ ಪ್ರಬಲ ಹಿಂದೂತ್ವದ ಪ್ರತಿಪಾದಕರಾದ ಸಿದ್ಧಲಿಂಗ ಶ್ರೀಗಳನ್ನು ಹತ್ತಿಕ್ಕಲು ಮುಂದಾಗಿದೆ ಎಂದು ಆರೋಪಿಸಿದೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search