• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶ್ರೀರಾಮಸೇನೆ ರಾಜ್ಯ ಉಪಾಧ್ಯಕ್ಷ, ಹಿಂದುತ್ವ ಪ್ರತಿಪಾದಕ ಸಿದ್ಧಲಿಂಗ ಶ್ರೀಗಳ ಬಂಧನ

TNN Correspondent Posted On October 31, 2017


  • Share On Facebook
  • Tweet It

ಕಲಬುರಗಿ: ಪ್ರಬಲ ಹಿಂದೂತ್ವದ ಪ್ರತಿಪಾದಕ, ಸಿದ್ದರಾಮಯ್ಯ ಕಾಂಗ್ರೆಸ್ ಸರಕಾರವನ್ನುಮತ್ತು ರಾಜ್ಯ ಸರಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯನ್ನು ಪ್ರಬಲವಾಗಿ ಖಂಡಿಸಿ, ಕಾಂಗ್ರೆಸ್ ಮುಖಂಡರಿಗೆ ಮುಳ್ಳಾಗಿದ್ದ ಶ್ರೀರಾಮಸೇನೆಯ ರಾಜ್ಯ ಉಪಾಧ್ಯಕ್ಷ ಜೇವರ್ಗಿ ತಾಲೂಕಿನ ಆಂದೋಲಾದ ಸಿದ್ಧಲಿಂಗ ಶ್ರೀಗಳನ್ನು ಜೇವರ್ಗಿ ಪೊಲೀಸರು ಬಂಧಿಸಿದ್ದಾರೆ. ಕೊಲೆ ಯತ್ನಕ್ಕೆ ಪ್ರಚೋದನೆ ಆರೋಪದ ಮೇಲೆ ಶ್ರೀಗಳನ್ನು ಆಂದೋಲಾದಲ್ಲಿ ವಶಪಡಿಸಿಕೊಳ್ಳಲಾಗಿದೆ.

ಸಿದ್ಧಲಿಂಗ ಶ್ರೀಗಳ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಒಂದು ಪ್ರಕರದಲ್ಲಿ ಜಾಮೀನು ದೊರೆತಿದೆ. ಇನ್ನು ಮೂರು ಪ್ರಕರಣಗಳ ವಿಚಾರಣೆಗಾಗಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಪೊಲೀಸರು ಟಿಪ್ಪು ಸುಲ್ತಾನ ಜಯಂತಿಯನ್ನು ಯಶಸ್ವಿ ಮಾಡಲು ಶ್ರೀಗಳನ್ನು ಬಂಧಿಸಿದ್ದಾರೆ. ಇದಕ್ಕೆ ರಾಜ್ಯ ಸರಕಾರದ ಕುಮ್ಮಕ್ಕಿದೆ ಎಂದು ಭಕ್ತರು ಆರೋಪಿಸಿದ್ದಾರೆ. ಈ ಹಿಂದೆ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಸಿದ್ಧಲಿಂಗ ಶ್ರೀಗಳು ಪ್ರತಿಭಟನೆ, ಹೋರಾಟ ಮತ್ತು ಭಾಷಣಗಳನ್ನು ಮಾಡಿದ್ದರು. ಇದರಿಂದ ಕಾಂಗ್ರೆಸ್ ಮುಖಂಡರ ಕೆಂಗಣ್ಣಿಗೆ ಗುರಿಯಾಗಿದ್ದರು.

ಅಲ್ಲದೇ ಸಿದ್ಧಲಿಂಗ ಶ್ರೀ 2018 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತಿದ್ದು, ಅದಕ್ಕಾಗಿಯೇ ಈಗಿನಿಂದಲೇ ಅವರನ್ನು ಹಣಿಯುವ ಕೆಲಸ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಸಿದ್ಧಲಿಂಗ ಶ್ರೀಗಳನ್ನು ಬಂಧಿಸಿದರೆ ಹೋರಾಟ ಮಾಡಲಾಗುವುದು ಎಂದು ಶ್ರೀರಾಮಚಂದ್ರಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಸೇರಿ ಹಲವು ಸ್ವಾಮೀಜಿಗಳು ಭಾನುವಾರ ಕಲಬುರಗಿಯಲ್ಲಿ ಎಚ್ಚರಿಕೆ ನೀಡಿದ್ದರು. ಆದರೂ ಸರಕಾರ ಶತಾಯಗತಾಯ ಪ್ರಬಲ ಹಿಂದೂತ್ವದ ಪ್ರತಿಪಾದಕರಾದ ಸಿದ್ಧಲಿಂಗ ಶ್ರೀಗಳನ್ನು ಹತ್ತಿಕ್ಕಲು ಮುಂದಾಗಿದೆ ಎಂದು ಆರೋಪಿಸಿದೆ.

  • Share On Facebook
  • Tweet It


- Advertisement -


Trending Now
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
Tulunadu News March 23, 2023
Leave A Reply

  • Recent Posts

    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
  • Popular Posts

    • 1
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 2
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 3
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 4
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 5
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search