• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೇರಳದಲ್ಲಿ ಹೀಗೊಂದು ಪರಿಸರ ಸ್ನೇಹಿ ಮದುವೆ ಶೈಲಿ…

TNN Correspondent Posted On October 31, 2017


  • Share On Facebook
  • Tweet It

ಎಲ್ಲರೂ ಪರಿಸರ ಕಾಪಾಡಬೇಕು, ಅರಣ್ಯ ರಕ್ಷಿಸಬೇಕು, ಜಲಸಂಪತ್ತಿನ ರಕ್ಷಣೆ ಮಾಡಬೇಕು, ನೀರು, ಆಹಾರ ಉಳಿಸಬೇಕು…

ಹೀಗೆ ವೇದಿಕೆ ಸಿಕ್ಕರೆ ಎಲ್ಲರೂ ಮಾರುದ್ದ ಭಾಷಣ ಬಿಗಿಯುತ್ತೇವೆ. ಆದರೆ ನಮ್ಮೆದುರೇ ಪ್ಲಾಸ್ಟಿಕ್ ಬಾಟಲಿಯಲ್ಲಿ ಬಿಸ್ಲೇರಿ ನೀರು ನೋಡು ನಗುತ್ತಿರುತ್ತದೆ. ವೇದಿಕೆ ಇಳಿದ ಮೇಲಂತೂ ನಾವ್ಯಾರೋ, ನಮ್ಮ ಮಾತುಗಳಾವವೋ ಎಂಬಂತೆ ವರ್ತಿಸುತ್ತೇವೆ.

ಆದರೆ ಕೇರಳದ ಕಣ್ಣೂರು ಜಿಲ್ಲೆ ಕೊಲಾದ್ ನಲ್ಲಿ ಹಾಗಲ್ಲ. ಪರಿಸರ ರಕ್ಷಣೆ ಇಲ್ಲಿ ಸಿದ್ಧಾಂತ ಅಲ್ಲ, ಪ್ರಾಯೋಗಿಕ…

ಹೌದು, ಈ ಊರಿನಲ್ಲಿ ಮದುವೆಯಾಗಬೇಕಾದರೆ ಪಂಚಾಯಿತಿಯಲ್ಲಿ ನೋಂದಣಿ ಮಾಡಿಸಿರಬೇಕು. ಮದುವೆಯಲ್ಲಿ ಪ್ಲಾಸ್ಟಿಕ್ ತಟ್ಟೆ, ಲೋಟ ಉಪಯೋಗಿಸುವಂತಿಲ್ಲ ಎಂದು ಪಂಚಾಯಿತಿ ನಿಯಮ ಮಾಡಿದೆ. ಹಾಗೊಂದು ವೇಳೆ ಯಾರಾದರೂ ನಿಯಮ ಉಲ್ಲಂಘಿಸಿದರೆ 10 ಸಾವಿರ ರುಪಾಯಿ ದಂಡ ಹಾಕಲಾಗುತ್ತದೆ. ಮದುವೆ ನೋಂದಣಿ ರದ್ದುಗೊಳಿಸಲಾಗುತ್ತದೆ.

ಈ ಪರಿಸರ ಸ್ನೇಹಿ ಕಠಿಣ ನಿಯಮದಿಂದ ಪ್ರಸ್ತುತ ಬಹುತೇಕ ಜನ ಮದುವೆಯಲ್ಲಿ ಪ್ಲಾಸ್ಟಿಕ್ ವಸ್ತು ಬಳಸುತ್ತಿಲ್ಲ. ಪಂಚಾಯಿತಿಯ ಕಟ್ಟುನಿಟ್ಟಿನ ನಿಯಮವನ್ನು ಕಡ್ಡಾಯವಾಗಿ ಪಾಲಿಸುತ್ತಾರೆ. ಕೆಲವೊಬ್ಬರು ಉಪಟಳ ಮಾಡಿದರೆ ದಂಡಕ್ಕೆ ಗುರಿಯಾಗಿಯೂ ಇದ್ದರೆ.

ಪರಿಸರ ರಕ್ಷಣೆ ದೃಷ್ಟಿಯಿಂದ ಪಂಚಾಯಿತಿ ಈ ನಿಯಮ ಜಾರಿಗೆ ತಂದ್ದಿದ್ದು, ಈ ಕುರಿತು ಜಾಗೃತಿ ಸಹ ಮೂಡಿಸಲಾಗಿದೆ. ಈ ಜಾಗೃತಿ ಅಭಿಯಾನದ ರೂಪ ಪಡೆದು ಈಗ 100 ಜನ ಸೇರುವ ಪ್ರತಿ ಕಾರ್ಯಕ್ರಮದಲ್ಲೂ ಪ್ಲಾಸ್ಟಿಕ್ ವಸ್ತು ಬಳಸುವುದಿಲ್ಲ ಎಂಬ ಮತ್ತೊಂದು ನಿಯಮ ಜಾರಿಗೊಳಿಸಲಾಗಿದೆ.

ನಾವು ಸಹ ಮನಸ್ಸು ಮಾಡಿದರೆ, ಪರಿಸರದ ಬಗ್ಗೆ ನಿಜವಾಗಿಯೂ ಕಾಳಜಿ ವಹಿಸಿದರೆ ಕೇರಳ ಮಾದರಿ ಅನುಸರಿಸೋಣ.

  • Share On Facebook
  • Tweet It


- Advertisement -


Trending Now
ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
Tulunadu News July 4, 2022
ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
Tulunadu News July 2, 2022
Leave A Reply

  • Recent Posts

    • ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
  • Popular Posts

    • 1
      ನುಪೂರ್ ಕ್ಷಮೆ ಕೇಳಬೇಕು ಎಂದ ನ್ಯಾಯಾಧೀಶರ ಹೇಳಿಕೆ ಮತ್ತು ವಾಸ್ತವ!
    • 2
      ಮೇಲಿನವರು ಏನೂ ಹೇಳಬಹುದು, ಅನುಷ್ಟಾನ ಆಗಬೇಕಲ್ಲ!
    • 3
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 4
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 5
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search