ಕನ್ನಡ ರಾಜ್ಯೋತ್ಸವ: ಕನ್ನಡದಲ್ಲೇ ಶುಭಕೋರಿದ ಪ್ರಧಾನಿ ಮೋದಿ
Posted On November 1, 2017

ದೆಹಲಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ, ಕನ್ನಡ ಉಳಿಸುವ ಕುರಿತು ಸಂದೇಶಗಳ ಮಹಾಪೂರವೇ ಹರಿದು ಬರುತ್ತಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಕುರಿತು ಶುಭಾಶಯ ಕೋರಿದ್ದಾರೆ. ಅದೂ ಅಚ್ಚಕನ್ನಡದಲ್ಲಿ.
ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ನರೇಂದ್ರ ಮೋದಿ ಅವರು ಕರ್ನಾಟಕದ ಧರ್ಮಸ್ಥಳ, ಬೀದರ್, ಬೆಂಗಳೂರಿಗೆ ಭೇಟಿ ನೀಡಿದ್ದರು.
- Advertisement -
Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
February 3, 2023
Leave A Reply