• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಷ್ಟ್ರಗೀತೆ ಹೇರಿಕೆ ಎನ್ನುವವರು, ಚೀನಾದಲ್ಲಿ ರಾಷ್ಟ್ರಗೀತೆಗೆ ಅವಮಾನಿಸಿದರೆ ಏನಾಗುತ್ತದೆ? ಈ ಸುದ್ದಿ ಓದಿ…

TNN Correspondent Posted On November 1, 2017
0


0
Shares
  • Share On Facebook
  • Tweet It

ನಮ್ಮ ದೇಶದಲ್ಲಿ ಯಾರು ಏನು ಬೇಕಾದರೂ ಮಾತನಾಡಬಹುದು, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ದೇಶದ ವಿರುದ್ಧ ಎಲುಬಿಲ್ಲದ ನಾಲಗೆ ಹರಿಬಿಡಬಹುದು, ಸಿನಿಮಾ ಮಂದಿರಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿದರೆ, ನಾನು ಎದ್ದು ನಿಲ್ಲಲ್ಲ ಎಂದು ಉದ್ಧಟತನ ಮೆರೆಯಬಹುದು, ಮೇಲಾಗಿ ಇದು ರಾಷ್ಟ್ರಭಕ್ತಿ ಹೆಸರಲ್ಲಿ ಹೇರಿಕೆ ಎಂದು ಜರಿಯಬಹುದು. ಹೀಗೆ ಮಿದುಳಿನ ಕಸವನ್ನೆಲ್ಲ ಹೊರಹಾಕಬಹುದು…

ಆದರೆ, ಚೀನಾದಲ್ಲಿ ಮಾತ್ರ ಇವೆಲ್ಲವೂ ನಿಷಿದ್ಧ. ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ರಾಷ್ಟ್ರಗೀತೆಗೆ ಅವಮಾನ ಮಾಡುವವರಿಗೆ ಭಾರಿ ದಂಡ, ಮೂರು ವರ್ಷ ಜೈಲು ಶಿಕ್ಷೆ ವಿಧಿಸುವ ಕಠಿಣ ಕಾನೂನು ಜಾರಿಗೆ ಮುಂದಾಗಿದೆ.

ಇದಕ್ಕಾಗಿ ದೇಶದ ಅಪರಾಧ ಕಾನೂನು ಹಾಗೂ ದಂಡಸಂಹಿತೆಗೆ ತಿದ್ದುಪಡಿ ತರುವ ಮಹತ್ತರ ನಿರ್ಧಾರ ಕೈಗೊಂಡಿದ್ದು, ಸಂಸತ್ತಿನ ಒಪ್ಪಿಗೆ ಸಹ ಪಡೆಯಲಾಗಿದೆ.

ರಾಷ್ಟ್ರಗೀತೆ ಎಂಬುದು ಎಲ್ಲ ಗೀತೆಗಳಿಗಿಂತ ವಿಭಿನ್ನ. ಇದು ದೇಶದ ಹೆಮ್ಮೆಯ ಹಾಗೂ ಗೌರವದ ಪ್ರತೀಕ. ಹಾಗಾಗಿ ಯಾರೂ ಅವಮಾನ ಮಾಡುವಂತಿಲ್ಲ ಎಂಬ ದಿಸೆಯಲ್ಲಿ ಕರಡು ತಯಾರಿಸಲಾಗಿದೆ ಎಂದು ತಿಳಿದುಬಂದಿದೆ.

ಆದರೆ ನಮ್ಮ ದೇಶದಲ್ಲಿ ಮಾತ್ರ ಸಿನಿಮಾ ಟಿಕೆಟ್ ಪಡೆಯಲು ನೂಕುನುಗ್ಗಲಿನಲ್ಲಿ ತಾಸುಗಟ್ಟಲೇ ಗುದ್ದಾಡುವ ನಮ್ಮವರು ಸಿನಿಮಾ ಆರಂಭವಾಗುತ್ತಲೇ 52 ಸೆಕೆಂಡು ಎದ್ದುನಿಲ್ಲಲು ಸಾಮರ್ಥ್ಯವಿಲ್ಲದಂತೆ ಆಡುತ್ತಾರೆ. ಇದು ನಾಚಿಕೆಗೇಡಿನ ಸಂಗತಿ ಅಲ್ಲವೇ?

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search