• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಜಿಎಸ್ಟಿ, ನೋಟು ನಿಷೇಧ ಪರಿಣಾಮ: ಪ್ರಮುಖ 8 ವಲಯಗಳಲ್ಲಿ ಭಾರಿ ಬೆಳವಣಿಗೆ

TNN Correspondent Posted On November 1, 2017
0


0
Shares
  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೋಟು ನಿಷೇಧ ಹಾಗೂ ಸರಕು ಮತ್ತು ಸೇವಾ ತೆರಿಗೆಯಂಥ ಪ್ರಮುಖ ಯೋಜನೆಗಳು ದೇಶದ ಪ್ರಮುಖ ಔದ್ಯಮಿಕ ವಲಯಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತಿವೆ.

ಇದಕ್ಕೆ ಪುಷ್ಟಿ ನೀಡುವಂತೆ ದೇಶದ ಪ್ರಮುಖ 8 ಔದ್ಯಮಿಕ ವಲಯಗಳಲ್ಲಿ ಭಾರಿ ಏರಿಕೆ ಕಂಡಿದ್ದು, ಸೆಪ್ಟೆಂಬರ್ ನಲ್ಲಿ ಶೇ.5.2ಕ್ಕೆ ಏರಿದೆ. ಇದು ಕಳೆದ ಆರು ತಿಂಗಳಲ್ಲೇ ಗರಿಷ್ಠ ಏರಿಕೆ ಎಂದು ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ.

ಕಲ್ಲಿದ್ದಿಲು, ಕಚ್ಚಾತೈಲ, ನೈಸರ್ಗಿಕ ಅನಿಲ, ರಸಗೊಬ್ಬರ, ಸ್ಟೀಲ್, ಸಿಮೆಂಟ್, ಮರುಸಂಸ್ಕರಣ ಹಾಗೂ ವಿದ್ಯುತ್ ಉತ್ಪಾದನೆಯಲ್ಲಿ ಗಣನೀಯ ಏರಿಕೆ ಕಂಡಿದೆ. ಅದರಲ್ಲೂ ಕಲ್ಲಿದ್ದಿಲು, ನೈಸರ್ಗಿಕ ಅನಿಲ, ಮರುಸಂಸ್ಕರಣ ಉತ್ಪನ್ನದಲ್ಲಿ ಶೇ.10.6ರಷ್ಟು ಏರಿಕೆ ಕಂಡು ಬಂದಿರುವುದು ದೇಶದ ಆರ್ಥಿಕ ಬೆಳವಣಿಗೆಗೆ ಪೂರಕ ಎಂದು ಅರ್ಥಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕಳೆದ ಮಾರ್ಚ್ ನಲ್ಲಿ ಈ ವಲಯಗಳಲ್ಲಿ ಇಷ್ಟು ಪ್ರಮಾಣ ಏರಿಕೆ ಕಾಣಲಾಗಿತ್ತಾದರೂ ಬಳಿಕ ಕುಂಠಿತವಾಗಿ 2.6ಕ್ಕೆ ಕುಸಿದಿತ್ತು. ಆದರೆ ಈಗ ಚೇತರಿಕೆ ಕಂಡು ಆರು ತಿಂಗಳಲ್ಲೇ ಗರಿಷ್ಠ ಏರಿಕೆ ಕಂಡಿವೆ. ಆದಾಗ್ಯೂ, ಈ ಎಂಟು ವಲಯಗಳ ಉತ್ಪನ್ನ ಪ್ರಮಾಣ ಶೇ.41ರಷ್ಟಿದೆ ಎಂದು ತಿಳಿದುಬಂದಿದೆ.

ನೋಟು ನಿಷೇಧ, ಜಿಎಸ್ಟಿಯಿಂದ ದೇಶದ ವಿತ್ತೀಯ ವ್ಯವಸ್ಥೆ ಹಾಳಾಯಿತು ಎಂದು ಬೊಬ್ಬೆ ಹಾಕುತ್ತಿದ್ದವರ ಬಾಯಿಗೆ ಈ ಬೆಳವಣಿಗೆ ಖಾರ ಸುರಿದಂತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಚೇತರಿಕೆಯಾಗುವ ನಿರೀಕ್ಷೆ ಇದೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search