• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಪ್ರೇಮ್ ಕುಮಾರ್ ಧುಮಾಲ್ ಏಕೆ ಹಿಮಾಚಲ ಪ್ರದೇಶ ಸಿಎಂ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದು ಗೊತ್ತಾ?

-ನಾಗೇಂದ್ರ ಹಿರೇಮಠ, ಬೆಂಗಳೂರು Posted On November 1, 2017
0


0
Shares
  • Share On Facebook
  • Tweet It

  • ಜೆ.ಪಿ.ನಡ್ಡಾ ಎಂಬ ಅನುಭವಿ ರಾಜಕಾರಣಿ.
  • ಕಾಂಗ್ರಾ ಪ್ರದೇಶದ ಪ್ರಬಲ ಹಾಗೂ ಅನುಭವಿ ರಾಜಕಾರಣಿ ಶಾಂತಕುಮಾರ್.
  • ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್…

ಹಿಮಾಚಲ ಪ್ರದೇಶದಲ್ಲಿ ಚುನಾವಣೆ ಘೋಷಣೆಯಾಗುತ್ತಲೇ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗಳಿಗೆ ಮೇಲಿನ ಘಟಾನುಘಟಿಗಳ ಹೆಸರುಗಳು ಕೇಳಿಬಂದಿದ್ದವು. ಚುನಾವಣೆ ಹತ್ತಿರ ಬರುತ್ತಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಉತ್ತರ ಪ್ರದೇಶ ಚುನಾವಣೆಯಂತೆಯೇ ಬಿಜೆಪಿ ಗೆಲುವು ಸಾಧಿಸಿದ ಬಳಿಕ ಯಾರನ್ನೋ ಒಬ್ಬರನ್ನು ಮುಖ್ಯಮಂತ್ರಿ ಗಾದಿಗೆ ಕೂರಿಸುತ್ತಾರೆ ಎಂಬ ಮಾತುಗಳೂ ಚಾಲ್ತಿಯಲ್ಲಿದ್ದವು.

ಆದರೆ ನೂತನ ತಂತ್ರ ಹೊಸೆದಿರುವ ಬಿಜೆಪಿ ಪ್ರೇಮ್ ಕುಮಾರ್ ಧುಮಾಲ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದೆ? ಅಷ್ಟಕ್ಕೂ ಪ್ರೇಮ್ ಕುಮಾರ್ ಧುಮಾಲ್ ಅವರನ್ನೇ ಸಿಎಂ ಅಭ್ಯರ್ಥಿ ಎಂದು ಘೋಷಿಸಿದ್ದೇಕೆ? ಇದರ ಹಿಂದೆ ಯಾವ ತಂತ್ರವಿದೆ? ಬೇರೆ ಘಟಾನುಘಟಿಗಳಿಗಿಂತ ಧುಮಾಲ್ ಹೇಗೆ ಪ್ರಬಲ?

ಖಂಡಿತವಾಗಿಯೂ ಜೆ.ಪಿ.ನಡ್ಡಾ ಎಂಬ ಬ್ರಾಹ್ಮಣ ರಾಜಕಾರಣಿ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಎಲ್ಲ ಅರ್ಹತೆಯಿದ್ದವು. ಅಜಯ್ ಜಮ್ವಾಲ್ ಸಹ ರೇಸಿನಲ್ಲಿದ್ದರು. ಆದರೆ ಕಾಂಗ್ರೆಸ್ ವೀರಭದ್ರ ಸಿಂಗ್ ಎಂಬ ಠಾಕೂರ್ ನಾಯಕರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಹಿಮಾಚಲ ಪ್ರದೇಶದಲ್ಲಿ ಠಾಕೂರರು ಶೇ.28ರಷ್ಟಿದ್ದಾರೆ. ಈ ಕಾರಣಕ್ಕೇ ಠಾಕೂರರಾದ ಬಿಜೆಪಿ ಪ್ರೇಮ್ ಕುಮಾರ್ ಧುಮಾಲ್ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿ ಆರಂಭದಲ್ಲೇ ಕಾಂಗ್ರೆಸ್ಸಿಗೆ ಟಾಂಗ್ ನೀಡಿದೆ.

ಬರೀ ಜಾತಿಯೊಂದೇ ಅಲ್ಲ, ಪ್ರೇಮ್ ಕುಮಾರ್ ಧುಮಾಲ್ ಎರಡು ಬಾರಿ (1998-2003, 2008-12) ರಾಜ್ಯದ ಮುಖ್ಯಮಂತ್ರಿಯಾಗಿ ಅನುಭವವೂ ಇದೆ. ಧುಮಾಲ್ ಆಡಳಿತ ಹೇಗೆ ಎಂಬುದು ಜನರಿಗೆ ಗೊತ್ತು, ಅದಕ್ಕಾಗಿಯೇ ಬಿಜೆಪಿ ಧುಮಾಲ್ ಅವರನ್ನು ಆಯ್ಕೆ ಮಾಡಿದೆ.

ಅಷ್ಟೇ ಅಲ್ಲ, ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲು ಈ ಬಾರಿ ಬಿಜೆಪಿ ಹೊಸ ತಂತ್ರ ಮಾಡಿತ್ತು. ರಾಜ್ಯದಲ್ಲಿ ಯಾರ ಪ್ರಭಾವ ಹಾಗೂ ಖ್ಯಾತಿ ಇದೆ ಎಂದು ರಾಜ್ಯ ಬಿಜೆಪಿ ಘಟಕದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದೆ. ಸಮೀಕ್ಷೆ ನಡೆಸಿದೆ. ರಾಜ್ಯ ಬಿಜೆಪಿ ನಾಯಕರ ಅಭಿಪ್ರಾಯ ಸಂಗ್ರಹಿಸಿದೆ. ಇದರಲ್ಲಿ ಜೆ.ಪಿ.ನಡ್ಡಾ ಅವರಿಗಿಂತಲೂ ಧುಮಾಲ್ ಅವರ ವ್ಯಕ್ತಿತ್ವವೇ ಸೆಳೆದ ಹಿನ್ನೆಲೆಯಲ್ಲೇ ಧುಮಾಲರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಆದಾಗ್ಯೂ, ಉತ್ತರ ಪ್ರದೇಶ ಚುನಾವಣೆಯಂತೆಯೇ ಬಿಜೆಪಿ ಗೆಲುವು ಸಾಧಿಸಿದ ಬಳಿಕ ಸಿಎಂ ಅಭ್ಯರ್ಥಿಯನ್ನು ಘೋಷಿಸಬೇಕಿತ್ತು. ಮೋದಿ ಅಲೆಯೂ ಇತ್ತು. ಆದರೆ ಕಾಂಗ್ರೆಸ್ ಠಾಕೂರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹಿನ್ನೆಲೆಯಲ್ಲಿ ಹಾಗೂ ಪ್ರಬಲ ಸ್ಪರ್ಧೆ ಇರುವ ಕಾರಣ ಮತ್ತು ಬಿಜೆಪಿ ಸಿಎಂ ಅಭ್ಯರ್ಥಿ ಘೋಷಿಸದೆ ಜನರನ್ನು ಗೊಂದಲಕ್ಕೀಡುಮಾಡುತ್ತದೆ ಎಂಬ ಮಾತು ಕೇಳಿಬಂದ ಕಾರಣ ಧುಮಾಲ್ ಅವರನ್ನು ನೇಮಿಸಿದೆ.

ಈ ಎಲ್ಲ ಕಾರಣಗಳಿಂದ ಪ್ರೇಮ್ ಧುಮಾಲ್ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಇದು ಸಹಕಾರಿಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಠಾಕೂರರ ಆಯ್ಕೆಯಿಂದ ಕಾಂಗ್ರೆಸ್ಗೆ ನಡುಕ ಸಹ ಹುಟ್ಟಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

 

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
-ನಾಗೇಂದ್ರ ಹಿರೇಮಠ, ಬೆಂಗಳೂರು February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
-ನಾಗೇಂದ್ರ ಹಿರೇಮಠ, ಬೆಂಗಳೂರು February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search