• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭಾರತಕ್ಕಿದೆ ಭಯೋತ್ಪಾದನೆ ಎದುರಿಸುವ ತಾಕತ್ತು: ರಾಜನಾಥ್ ಸಿಂಗ್

TNN Correspondent Posted On November 2, 2017
0


0
Shares
  • Share On Facebook
  • Tweet It

ಹೈದರಾಬಾದ್: ಭಾರತದ ರಕ್ಷಣಾ ಇಲಾಖೆ ಜಾಗತಿಕ ಭಯೋತ್ಪಾದನೆಯನ್ನು ಎದುರಿಸುವ ತಾಕತ್ತನ್ನು ಹೊಂದಿದೆ. ಐಸಿಸ್ ಸಂಘಟನೆ ಭಾರತ ಪ್ರವೇಶ ತಡೆಯಲು ಮತ್ತು ಮೂಗುದಾರ ಹಾಕಲು ಭಾರತದ ಗುಪ್ತಚರ ಇಲಾಖೆ ಮತ್ತು ರಕ್ಷಣಾ ಇಲಾಖೆ ಕಾರ್ಯ ನಿರ್ವಹಿಸುತ್ತಿವೆ. ವಿಶ್ವಕ್ಕೆ ಮಾರಕವಾಗಿರುವ ಐಸಿಸ್ ನಂತಹ ಸಂಘಟನೆಗಳನ್ನು ಬಗ್ಗುಬಡಿಯುವ ಶಕ್ತಿ ಭಾರತಕ್ಕಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್ ನ ವಲ್ಲಭಬಾಯಿ ಪಟೇಲ್ ನ್ಯಾಷನಲ್ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಮುಂದಿನ ಐದು ವರ್ಷದಲ್ಲಿ ಭಾರತದಲ್ಲಿ ಭಯೋತ್ಪಾದನೆ ಮತ್ತು ಕೋಮುವಾದವನ್ನು ತಡೆಯಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರ, ನಕ್ಸಲಿಸಂ ತಡೆಗಟ್ಟುವ ಗುರಿ ಹೊಂದಬೇಕಿದೆ ಎಂದು ಹೇಳಿದರು.

ಪ್ರಸ್ತುತ ವಿಶ್ವ ಭಯೋತ್ಪಾದನೆಯ ಭೀತಿಯಲ್ಲಿದೆ. ಇನ್ನು ಐಸಿಸ್ ನಂತಹ ಸಂಘಟನೆಗಳು ಅಂತರ್ಜಾಲವನ್ನು ಬಳಸಿ ಉಗ್ರತ್ವವನ್ನು ಹರಡುತ್ತಿವೆ. ಅದು ಭಾರತಕ್ಕೆ ಕಾಲಿಡದಂತೆ ನೋಡಿಕೊಳ್ಳಬೇಕು. ನಮ್ಮ ಗುಪ್ತಚರ ಮತ್ತು ರಕ್ಷಣಾ ಸಂಸ್ಥೆಗಳು ದುಷ್ಟರಿಗೆ ತಕ್ಕ ಪ್ರತಿಕ್ರಿಯೆಯನ್ನು ನೀಡುತ್ತಿವೆ. ಯಾವುದೇ ಆತಂಕ ಪಡುವಂತಿಲ್ಲ. ಆದರೆ ಮುನ್ನಚ್ಚರಿಕೆಯಲ್ಲಿರಬೇಕು ಎಂದು ಎಚ್ಚರಿಕೆ ನೀಡಿದರು.

ಪೊಲೀಸ್ ಇಲಾಖೆ ರಕ್ಷಣೆಗೆ ಭಾರತ ಸರಕಾರ ಸದಾ ಸಿದ್ಧವಾಗಿದೆ. ಪೊಲೀಸ್ ಇಲಾಖೆ ಬಲವರ್ಧನೆಯನ್ನು ಮಾಡಲು ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಗ್ಗಟ್ಟಿನಿಂದ ಕೂಡಿ ಈ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕಿದೆ. ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸೋಣ ಎಂದು ಸಲಹೆ ನೀಡಿದರು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search