• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಣಕಿದರೆ ಬಿಡ್ತೀವಾ ಮತ್ತೆ, ಕಾಶ್ಮೀರದಲ್ಲಿ 170 ಉಗ್ರರ ಹತ್ಯೆ

TNN Correspondent Posted On November 3, 2017
0


0
Shares
  • Share On Facebook
  • Tweet It

ಶ್ರೀನಗರ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳಕ್ಕೆ ಕಡಿವಾಣ ಹಾಕುತ್ತಿದ್ದು, ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನೇ ಕೈಗೊಂಡಿದೆ.

ಹೀಗೆ ಕಾಶ್ಮೀರದಲ್ಲಿ ನುಸುಳಲು ಯತ್ನಿಸಿದ, ದಾಳಿ ಮಾಡಿದ ಬಹುತೇಕ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೆ ಬರೋಬ್ಬರಿ 170 ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2017ರ ಆರಂಭದಲ್ಲೇ, ಅಂದರೆ ಫೆಬ್ರವರಿ ಮುಗಿಯುವುದರೊಳಗೆ ಪಾಕಿಸ್ತಾನ ಕೃಪಾಪೋಷಿತ 22 ಉಗ್ರರನ್ನು ಹತ್ಯೆ ಮಾಡಲಾಗಿತ್ತು. ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಉಗ್ರರನ್ನು ಹತ್ಯೆ ಮಾಡಲಾದ ಖ್ಯಾತಿ ಸೈನ್ಯದ ಮುಡಿಗೇರಿದೆ.

ಆದಾಗ್ಯೂ, ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರವಾದಕ್ಕೆ ಬ್ರೇಕ್ ಹಾಕುತ್ತಿದ್ದು, ಕಲ್ಲು ತೂರಾಟ, ಉಗ್ರ ಚಟುವಟಿಕೆಗಳನ್ನು ನಿಗ್ರಹಿಸಲಾಗುತ್ತಿದೆ. ಅಲ್ಲದೆ ಕಲ್ಲು ತೂರಾಟಗಾರರನ್ನು ಪೋಷಿಸುತ್ತಿದ್ದ ಪ್ರತ್ಯೇಕತಾವಾದಿಗಳು ಹಾಗೂ ಅವರ ಮುಖಂಡ ಸೈಯದ್ ಶಾ ಗೀಲಾನಿ ವಿರುದ್ಧ ಎನ್ಐಎ ತನಿಖೆ ನಡೆಸುತ್ತಿದ್ದು, ಭಯೋತ್ಪಾದಕರಿಂದ ಹಣ ಪಡೆದು ಉಗ್ರ ಚಟುವಟಿಕೆಗಳಿಗೆ ನೀಡಿದ ಆರೋಪವೂ ಇವರ ಮೇಲಿದೆ. ಹಾಗಾಗಿ ಕಲ್ಲು ತೂರಾಟ ಪ್ರಕರಣ ಕಡಿಮೆಯಾಗುತ್ತಿವೆ.

ಕಳೆದ ಮೇ ನಿಂದ ಭಾರತೀಯ ಸೇನೆ ವಿಶೇಷವಾಗಿ ಕಾರ್ಯಾಚರಣೆ ನಡೆಸಿದ್ದು ಪ್ರಸಕ್ತ ವರ್ಷದಲ್ಲಿ ಲಷ್ಕರೆ ತಯ್ಯಬಾ, ಹಿಜ್ಬುಲ್ ಮುಜಾಹಿದ್ದೀನ್ ಪ್ರಮುಖ ಉಗ್ರರನ್ನು ಹತ್ಯೆ ಮಾಡಲಾಗಿದೆ. 2016ರಲ್ಲಿ ಭಾರತೀಯ ಭದ್ರತಾ ಸಿಬ್ಬಂಧಿ 88 ಉಗ್ರರನ್ನು ಹತ್ಯೆ ಮಾಡಿತ್ತು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search