• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಣಕಿದರೆ ಬಿಡ್ತೀವಾ ಮತ್ತೆ, ಕಾಶ್ಮೀರದಲ್ಲಿ 170 ಉಗ್ರರ ಹತ್ಯೆ

TNN Correspondent Posted On November 3, 2017
0


0
Shares
  • Share On Facebook
  • Tweet It

ಶ್ರೀನಗರ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳಕ್ಕೆ ಕಡಿವಾಣ ಹಾಕುತ್ತಿದ್ದು, ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನೇ ಕೈಗೊಂಡಿದೆ.

ಹೀಗೆ ಕಾಶ್ಮೀರದಲ್ಲಿ ನುಸುಳಲು ಯತ್ನಿಸಿದ, ದಾಳಿ ಮಾಡಿದ ಬಹುತೇಕ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೆ ಬರೋಬ್ಬರಿ 170 ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2017ರ ಆರಂಭದಲ್ಲೇ, ಅಂದರೆ ಫೆಬ್ರವರಿ ಮುಗಿಯುವುದರೊಳಗೆ ಪಾಕಿಸ್ತಾನ ಕೃಪಾಪೋಷಿತ 22 ಉಗ್ರರನ್ನು ಹತ್ಯೆ ಮಾಡಲಾಗಿತ್ತು. ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಉಗ್ರರನ್ನು ಹತ್ಯೆ ಮಾಡಲಾದ ಖ್ಯಾತಿ ಸೈನ್ಯದ ಮುಡಿಗೇರಿದೆ.

ಆದಾಗ್ಯೂ, ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರವಾದಕ್ಕೆ ಬ್ರೇಕ್ ಹಾಕುತ್ತಿದ್ದು, ಕಲ್ಲು ತೂರಾಟ, ಉಗ್ರ ಚಟುವಟಿಕೆಗಳನ್ನು ನಿಗ್ರಹಿಸಲಾಗುತ್ತಿದೆ. ಅಲ್ಲದೆ ಕಲ್ಲು ತೂರಾಟಗಾರರನ್ನು ಪೋಷಿಸುತ್ತಿದ್ದ ಪ್ರತ್ಯೇಕತಾವಾದಿಗಳು ಹಾಗೂ ಅವರ ಮುಖಂಡ ಸೈಯದ್ ಶಾ ಗೀಲಾನಿ ವಿರುದ್ಧ ಎನ್ಐಎ ತನಿಖೆ ನಡೆಸುತ್ತಿದ್ದು, ಭಯೋತ್ಪಾದಕರಿಂದ ಹಣ ಪಡೆದು ಉಗ್ರ ಚಟುವಟಿಕೆಗಳಿಗೆ ನೀಡಿದ ಆರೋಪವೂ ಇವರ ಮೇಲಿದೆ. ಹಾಗಾಗಿ ಕಲ್ಲು ತೂರಾಟ ಪ್ರಕರಣ ಕಡಿಮೆಯಾಗುತ್ತಿವೆ.

ಕಳೆದ ಮೇ ನಿಂದ ಭಾರತೀಯ ಸೇನೆ ವಿಶೇಷವಾಗಿ ಕಾರ್ಯಾಚರಣೆ ನಡೆಸಿದ್ದು ಪ್ರಸಕ್ತ ವರ್ಷದಲ್ಲಿ ಲಷ್ಕರೆ ತಯ್ಯಬಾ, ಹಿಜ್ಬುಲ್ ಮುಜಾಹಿದ್ದೀನ್ ಪ್ರಮುಖ ಉಗ್ರರನ್ನು ಹತ್ಯೆ ಮಾಡಲಾಗಿದೆ. 2016ರಲ್ಲಿ ಭಾರತೀಯ ಭದ್ರತಾ ಸಿಬ್ಬಂಧಿ 88 ಉಗ್ರರನ್ನು ಹತ್ಯೆ ಮಾಡಿತ್ತು.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search