• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕೆಣಕಿದರೆ ಬಿಡ್ತೀವಾ ಮತ್ತೆ, ಕಾಶ್ಮೀರದಲ್ಲಿ 170 ಉಗ್ರರ ಹತ್ಯೆ

TNN Correspondent Posted On November 3, 2017


  • Share On Facebook
  • Tweet It

ಶ್ರೀನಗರ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳಕ್ಕೆ ಕಡಿವಾಣ ಹಾಕುತ್ತಿದ್ದು, ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನೇ ಕೈಗೊಂಡಿದೆ.

ಹೀಗೆ ಕಾಶ್ಮೀರದಲ್ಲಿ ನುಸುಳಲು ಯತ್ನಿಸಿದ, ದಾಳಿ ಮಾಡಿದ ಬಹುತೇಕ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೆ ಬರೋಬ್ಬರಿ 170 ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2017ರ ಆರಂಭದಲ್ಲೇ, ಅಂದರೆ ಫೆಬ್ರವರಿ ಮುಗಿಯುವುದರೊಳಗೆ ಪಾಕಿಸ್ತಾನ ಕೃಪಾಪೋಷಿತ 22 ಉಗ್ರರನ್ನು ಹತ್ಯೆ ಮಾಡಲಾಗಿತ್ತು. ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಉಗ್ರರನ್ನು ಹತ್ಯೆ ಮಾಡಲಾದ ಖ್ಯಾತಿ ಸೈನ್ಯದ ಮುಡಿಗೇರಿದೆ.

ಆದಾಗ್ಯೂ, ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರವಾದಕ್ಕೆ ಬ್ರೇಕ್ ಹಾಕುತ್ತಿದ್ದು, ಕಲ್ಲು ತೂರಾಟ, ಉಗ್ರ ಚಟುವಟಿಕೆಗಳನ್ನು ನಿಗ್ರಹಿಸಲಾಗುತ್ತಿದೆ. ಅಲ್ಲದೆ ಕಲ್ಲು ತೂರಾಟಗಾರರನ್ನು ಪೋಷಿಸುತ್ತಿದ್ದ ಪ್ರತ್ಯೇಕತಾವಾದಿಗಳು ಹಾಗೂ ಅವರ ಮುಖಂಡ ಸೈಯದ್ ಶಾ ಗೀಲಾನಿ ವಿರುದ್ಧ ಎನ್ಐಎ ತನಿಖೆ ನಡೆಸುತ್ತಿದ್ದು, ಭಯೋತ್ಪಾದಕರಿಂದ ಹಣ ಪಡೆದು ಉಗ್ರ ಚಟುವಟಿಕೆಗಳಿಗೆ ನೀಡಿದ ಆರೋಪವೂ ಇವರ ಮೇಲಿದೆ. ಹಾಗಾಗಿ ಕಲ್ಲು ತೂರಾಟ ಪ್ರಕರಣ ಕಡಿಮೆಯಾಗುತ್ತಿವೆ.

ಕಳೆದ ಮೇ ನಿಂದ ಭಾರತೀಯ ಸೇನೆ ವಿಶೇಷವಾಗಿ ಕಾರ್ಯಾಚರಣೆ ನಡೆಸಿದ್ದು ಪ್ರಸಕ್ತ ವರ್ಷದಲ್ಲಿ ಲಷ್ಕರೆ ತಯ್ಯಬಾ, ಹಿಜ್ಬುಲ್ ಮುಜಾಹಿದ್ದೀನ್ ಪ್ರಮುಖ ಉಗ್ರರನ್ನು ಹತ್ಯೆ ಮಾಡಲಾಗಿದೆ. 2016ರಲ್ಲಿ ಭಾರತೀಯ ಭದ್ರತಾ ಸಿಬ್ಬಂಧಿ 88 ಉಗ್ರರನ್ನು ಹತ್ಯೆ ಮಾಡಿತ್ತು.

  • Share On Facebook
  • Tweet It


- Advertisement -


Trending Now
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
Leave A Reply

  • Recent Posts

    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
  • Popular Posts

    • 1
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 2
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 3
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 4
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 5
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search