• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೆಣಕಿದರೆ ಬಿಡ್ತೀವಾ ಮತ್ತೆ, ಕಾಶ್ಮೀರದಲ್ಲಿ 170 ಉಗ್ರರ ಹತ್ಯೆ

TNN Correspondent Posted On November 3, 2017
0


0
Shares
  • Share On Facebook
  • Tweet It

ಶ್ರೀನಗರ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳಕ್ಕೆ ಕಡಿವಾಣ ಹಾಕುತ್ತಿದ್ದು, ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನೇ ಕೈಗೊಂಡಿದೆ.

ಹೀಗೆ ಕಾಶ್ಮೀರದಲ್ಲಿ ನುಸುಳಲು ಯತ್ನಿಸಿದ, ದಾಳಿ ಮಾಡಿದ ಬಹುತೇಕ ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೆ ಬರೋಬ್ಬರಿ 170 ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2017ರ ಆರಂಭದಲ್ಲೇ, ಅಂದರೆ ಫೆಬ್ರವರಿ ಮುಗಿಯುವುದರೊಳಗೆ ಪಾಕಿಸ್ತಾನ ಕೃಪಾಪೋಷಿತ 22 ಉಗ್ರರನ್ನು ಹತ್ಯೆ ಮಾಡಲಾಗಿತ್ತು. ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟು ಉಗ್ರರನ್ನು ಹತ್ಯೆ ಮಾಡಲಾದ ಖ್ಯಾತಿ ಸೈನ್ಯದ ಮುಡಿಗೇರಿದೆ.

ಆದಾಗ್ಯೂ, ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಜಮ್ಮು-ಕಾಶ್ಮೀರದಲ್ಲಿ ಉಗ್ರವಾದಕ್ಕೆ ಬ್ರೇಕ್ ಹಾಕುತ್ತಿದ್ದು, ಕಲ್ಲು ತೂರಾಟ, ಉಗ್ರ ಚಟುವಟಿಕೆಗಳನ್ನು ನಿಗ್ರಹಿಸಲಾಗುತ್ತಿದೆ. ಅಲ್ಲದೆ ಕಲ್ಲು ತೂರಾಟಗಾರರನ್ನು ಪೋಷಿಸುತ್ತಿದ್ದ ಪ್ರತ್ಯೇಕತಾವಾದಿಗಳು ಹಾಗೂ ಅವರ ಮುಖಂಡ ಸೈಯದ್ ಶಾ ಗೀಲಾನಿ ವಿರುದ್ಧ ಎನ್ಐಎ ತನಿಖೆ ನಡೆಸುತ್ತಿದ್ದು, ಭಯೋತ್ಪಾದಕರಿಂದ ಹಣ ಪಡೆದು ಉಗ್ರ ಚಟುವಟಿಕೆಗಳಿಗೆ ನೀಡಿದ ಆರೋಪವೂ ಇವರ ಮೇಲಿದೆ. ಹಾಗಾಗಿ ಕಲ್ಲು ತೂರಾಟ ಪ್ರಕರಣ ಕಡಿಮೆಯಾಗುತ್ತಿವೆ.

ಕಳೆದ ಮೇ ನಿಂದ ಭಾರತೀಯ ಸೇನೆ ವಿಶೇಷವಾಗಿ ಕಾರ್ಯಾಚರಣೆ ನಡೆಸಿದ್ದು ಪ್ರಸಕ್ತ ವರ್ಷದಲ್ಲಿ ಲಷ್ಕರೆ ತಯ್ಯಬಾ, ಹಿಜ್ಬುಲ್ ಮುಜಾಹಿದ್ದೀನ್ ಪ್ರಮುಖ ಉಗ್ರರನ್ನು ಹತ್ಯೆ ಮಾಡಲಾಗಿದೆ. 2016ರಲ್ಲಿ ಭಾರತೀಯ ಭದ್ರತಾ ಸಿಬ್ಬಂಧಿ 88 ಉಗ್ರರನ್ನು ಹತ್ಯೆ ಮಾಡಿತ್ತು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 3
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search