• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಮಲ್ ಹಾಸನ್ ಹೇಳಿಕೆಗೆ ಕಮಲ ಆಕ್ರೋಶ, ಹಫೀಜ್ ಸಯೀದ್ ಗೆ ಹೋಲಿಕೆ

TNN Correspondent Posted On November 3, 2017
0


0
Shares
  • Share On Facebook
  • Tweet It

ಮೆಲ್ಲಗೆ ಕಮ್ಯುನಿಸ್ಟ್ ಪಾರ್ಟಿ ಸೇರಲು ಇಚ್ಛಿಸಿರುವ ಅಥವಾ ತಮ್ಮದೇ ಒಂದು ಪಕ್ಷ ಕಟ್ಟಿ ರಾಜಕೀಯ ಪ್ರವೇಶಿಸಲು ಹೊರಟಿರುವ ನಟ ಕಮಲ್ ಹಾಸನ್ “ಹಿಂದೂ ಉಗ್ರವಾದ ಎಲ್ಲ ಎನ್ನುವಂತಿಲ್ಲ” ಎಂಬ ಹೇಳಿಕೆಗೆ ಬಿಜೆಪಿ ಭಾರಿ ಆಕ್ರೋಶ ವ್ಯಕ್ತಪಡಿಸಿದೆ.

ಕಮಲ್ ಹಾಸನ್ ಇಂಥಾ ಹೇಳಿಕೆ ಖಂಡನೀಯವಾಗಿದ್ದು, ಅವರು ಲಷ್ಕರೆ ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಇದ್ದ ಹಾಗೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಜಿ.ವಿ.ಎಲ್.ನರಸಿಂಹರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಹಿಡಿತದಲ್ಲಿರುವ ಕಾಂಗ್ರೆಸ್ ಹಲವು ದಶಕದಿಂದ ಮುಸ್ಲಿಮರ ಮತಕ್ಕಾಗಿ ಭಾರತದ ಸಮುದಾಯ ಹಾಗೂ ಹಿಂದೂಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಅಂಥವರ ಬಗ್ಗೆ ಮಾತನಾಡದ ಕಮಲ್ ಸುಮ್ಮನೆ ಹಿಂದೂಗಳ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಸುಶೀಲ್ ಕುಮಾರ್ ಶಿಂಧೆ ಹಾಗೂ ಪಿ.ಚಿದಂಬರಂ ಸಂಸತ್ತಿನಲ್ಲೇ ಹಿಂದೂ ಭಯೋತ್ಪಾದನೆ ಅಸ್ತಿತ್ವದ ಕುರಿತು ಮಾತನಾಡಿದ್ದರು. ಈಗ ಅವರ ಸಾಲಿಗೆ ಕಮಲ್ ಹಾಸನ್ ಸಹ ಸೇರಿದ್ದು, ಇವರೆಲ್ಲರೂ ಪಾಕಿಸ್ತಾನಕ್ಕೆ ಬೆಂಬಲ ನೀಡುವಂಥವರು, ಇವರೆಲ್ಲರೂ ಹಫೀಜ್ ಸಯೀದ್ ಇದ್ದಹಾಗೆ ಎಂದು ಟೀಕಿಸಿದ್ದಾರೆ.

ತಮಿಳು ವಾರಪತ್ರಿಕೆ ಆನಂದ ವಿಕಟನ್ ನಲ್ಲಿ “ಹಿಂದೂ ಉಗ್ರವಾದವನ್ನು ತಳ್ಳಿಹಾಕುವಂತಿಲ್ಲ. ಕೇರಳದ ಹಿಂಸಾಚಾರಕ್ಕೆ ಹಿಂದೂಗಳೇ ಕಾರಣ. ಬಲಪಂಥೀಯ ಕೋಮುವಾದ ಹೆಚ್ಚಾಗುತ್ತಿದೆ” ಎಂದು ಲೇಖನ ಬರೆದಿದ್ದು ವಿವಾದಕ್ಕೆ ಕಾರಣವಾಗಿದೆ. ಆದರೆ ಇಷ್ಟೆಲ್ಲ ಮಾತನಾಡುವ ಕಮಲ್ ಹಾಸನ್ ಮುಸ್ಲಿಂ ಭಯೋತ್ಪಾದನೆ ಬಗ್ಗೆ ಮಾತನಾಡುವ ಧೈರ್ಯ ಹೊಂದಿದ್ದಾರಾ? ಎಂಬುದೇ ಪ್ರಶ್ನೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search