• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಮಲ್ ಹಾಸನ್ ಹೇಳಿಕೆಗೆ ಕಮಲ ಆಕ್ರೋಶ, ಹಫೀಜ್ ಸಯೀದ್ ಗೆ ಹೋಲಿಕೆ

TNN Correspondent Posted On November 3, 2017
0


0
Shares
  • Share On Facebook
  • Tweet It

ಮೆಲ್ಲಗೆ ಕಮ್ಯುನಿಸ್ಟ್ ಪಾರ್ಟಿ ಸೇರಲು ಇಚ್ಛಿಸಿರುವ ಅಥವಾ ತಮ್ಮದೇ ಒಂದು ಪಕ್ಷ ಕಟ್ಟಿ ರಾಜಕೀಯ ಪ್ರವೇಶಿಸಲು ಹೊರಟಿರುವ ನಟ ಕಮಲ್ ಹಾಸನ್ “ಹಿಂದೂ ಉಗ್ರವಾದ ಎಲ್ಲ ಎನ್ನುವಂತಿಲ್ಲ” ಎಂಬ ಹೇಳಿಕೆಗೆ ಬಿಜೆಪಿ ಭಾರಿ ಆಕ್ರೋಶ ವ್ಯಕ್ತಪಡಿಸಿದೆ.

ಕಮಲ್ ಹಾಸನ್ ಇಂಥಾ ಹೇಳಿಕೆ ಖಂಡನೀಯವಾಗಿದ್ದು, ಅವರು ಲಷ್ಕರೆ ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಇದ್ದ ಹಾಗೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಜಿ.ವಿ.ಎಲ್.ನರಸಿಂಹರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಹಿಡಿತದಲ್ಲಿರುವ ಕಾಂಗ್ರೆಸ್ ಹಲವು ದಶಕದಿಂದ ಮುಸ್ಲಿಮರ ಮತಕ್ಕಾಗಿ ಭಾರತದ ಸಮುದಾಯ ಹಾಗೂ ಹಿಂದೂಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಅಂಥವರ ಬಗ್ಗೆ ಮಾತನಾಡದ ಕಮಲ್ ಸುಮ್ಮನೆ ಹಿಂದೂಗಳ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಸುಶೀಲ್ ಕುಮಾರ್ ಶಿಂಧೆ ಹಾಗೂ ಪಿ.ಚಿದಂಬರಂ ಸಂಸತ್ತಿನಲ್ಲೇ ಹಿಂದೂ ಭಯೋತ್ಪಾದನೆ ಅಸ್ತಿತ್ವದ ಕುರಿತು ಮಾತನಾಡಿದ್ದರು. ಈಗ ಅವರ ಸಾಲಿಗೆ ಕಮಲ್ ಹಾಸನ್ ಸಹ ಸೇರಿದ್ದು, ಇವರೆಲ್ಲರೂ ಪಾಕಿಸ್ತಾನಕ್ಕೆ ಬೆಂಬಲ ನೀಡುವಂಥವರು, ಇವರೆಲ್ಲರೂ ಹಫೀಜ್ ಸಯೀದ್ ಇದ್ದಹಾಗೆ ಎಂದು ಟೀಕಿಸಿದ್ದಾರೆ.

ತಮಿಳು ವಾರಪತ್ರಿಕೆ ಆನಂದ ವಿಕಟನ್ ನಲ್ಲಿ “ಹಿಂದೂ ಉಗ್ರವಾದವನ್ನು ತಳ್ಳಿಹಾಕುವಂತಿಲ್ಲ. ಕೇರಳದ ಹಿಂಸಾಚಾರಕ್ಕೆ ಹಿಂದೂಗಳೇ ಕಾರಣ. ಬಲಪಂಥೀಯ ಕೋಮುವಾದ ಹೆಚ್ಚಾಗುತ್ತಿದೆ” ಎಂದು ಲೇಖನ ಬರೆದಿದ್ದು ವಿವಾದಕ್ಕೆ ಕಾರಣವಾಗಿದೆ. ಆದರೆ ಇಷ್ಟೆಲ್ಲ ಮಾತನಾಡುವ ಕಮಲ್ ಹಾಸನ್ ಮುಸ್ಲಿಂ ಭಯೋತ್ಪಾದನೆ ಬಗ್ಗೆ ಮಾತನಾಡುವ ಧೈರ್ಯ ಹೊಂದಿದ್ದಾರಾ? ಎಂಬುದೇ ಪ್ರಶ್ನೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search