• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

370ರ ಕಲಂ ಹೊರತಾಗಿಯೂ ಮೋದಿ ಕಾಶ್ಮೀರ ಸ್ಥಿತಿ ಬದಲಾಯಿಸಬಲ್ಲರು: ಮೆಹಬೂಬಾ ಮುಫ್ತಿ

TNN Correspondent Posted On November 5, 2017


  • Share On Facebook
  • Tweet It

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜನರ ಹಕ್ಕು 370 ಕಲಂ. ಅದನ್ನು ಹೊರತು ಪಡಿಸಿಯೂ ತಮಗಿರುವ ಅಭೂತಪೂರ್ವ ಜನಾದೇಶದಿಂದ ಮೋದಿ ಕಾಶ್ಮೀರದ ಸ್ಥಿತಿಯನ್ನು ಬದಲಾಯಿಸಬಹುದು ಎಂದು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಕಾಶ್ಮೀರದ ಸ್ವಾಯತ್ತತೆ ಕುರಿತು ಸರಣಿ ಟ್ವೀಟ್ ಮಾಡಿರುವ ಮುಫ್ತಿ ‘ಕಾಶ್ಮೀರದ ಭೌಗೋಳಿಕ ಸಾಂಸ್ಕೃತಿಕ ವಿಶೇಷದ ಲಾಭ ದೇಶ ಪಡೆಯಬೇಕು. ಇದರಿಂದ ಆರ್ಥಿಕ ಲಾಭ ಪಡೆಯಲು ಮುಂದಾಗಬೇಕು. ಮೋದಿ ಅವರಿಂದ ಕಾಶ್ಮೀರದ ಬದಲಾವಣೆ ಸಾಧ್ಯವಿದೆ ಎಂದು ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

370ನೇ ಕಲಂ ಜಮ್ಮು ಕಾಶ್ಮೀರದ ಜನರಿಗೆ ಭಾರತ ನೀಡಿರುವ ಬದ್ಧತೆ. ಅದನ್ನು ಕಿತ್ತುಕೊಳ್ಳುವುದು ಸಲ್ಲ. ಅದರೊಂದಿಗೆ ಕೈ ಜೋಡಿಸಿ ಜಮ್ಮು ಮತ್ತು ಕಾಶ್ಮೀರದ ಬದಲಾವಣೆಗೆ ಮುನ್ನುಡಿ ಬರೆಯಬೇಕು ಎಂದು ಹೇಳಿದ್ದಾರೆ.

ಪ್ರಸ್ತುತ ಜಮ್ಮು ಕಾಶ್ಮೀರ ಸರಕಾರದ ಪಾಲುದಾರ ಬಿಜೆಪಿಯ ಕೆಲ ಶಾಸಕರು 370ನೇ ಕಲಂನ ವಿಶೇಷಾಧಿಕಾರವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದರು. ಆದ್ದರಿಂದ ಮುಫ್ತಿ ಈ ರೀತಿಯ ಟ್ವೀಟ್ ಗಳನ್ನು ಮಾಡಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಕಾಶ್ಮೀರದ ಬಿಜೆಪಿ ವಕ್ತಾರ ಪ್ರೊ.ವೀರೇಂದ್ರ ಗುಪ್ತಾ ಇತ್ತೀಚೆಗೆ ‘370ನೇ ಕಲಂ ರದ್ದು ಪಡಿಸಬೇಕು. ಕಲಂ ನಿಂದ ಪ್ರತ್ಯೇಕವಾದಿಗಳಿಗೆ ಅನುಕೂಲವಾಗುತ್ತಿದೆ. ಅಲ್ಲದೇ ಭಾರತದ ವಿಭಜನೆಗೆ ಪೂರಕವಾಗುತ್ತಿದೆ. ವಿದೇಶಗಳು ಭಾರತದ ನೆಲದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶ ನೀಡಿದಂತಾಗುತ್ತಿದೆ. ಆದ್ದರಿಂದ ಕೂಡಲೇ 370ನೇ ಕಲಂ ರದ್ದು ಪಡಿಸಬೇಕು. ರದ್ದುಪಡಿಸಲು ಇದು ಸಕಾಲ ಎಂದು ಹೇಳಿಕೆ ನೀಡಿದ್ದರು.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search