• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

370ರ ಕಲಂ ಹೊರತಾಗಿಯೂ ಮೋದಿ ಕಾಶ್ಮೀರ ಸ್ಥಿತಿ ಬದಲಾಯಿಸಬಲ್ಲರು: ಮೆಹಬೂಬಾ ಮುಫ್ತಿ

TNN Correspondent Posted On November 5, 2017
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಜನರ ಹಕ್ಕು 370 ಕಲಂ. ಅದನ್ನು ಹೊರತು ಪಡಿಸಿಯೂ ತಮಗಿರುವ ಅಭೂತಪೂರ್ವ ಜನಾದೇಶದಿಂದ ಮೋದಿ ಕಾಶ್ಮೀರದ ಸ್ಥಿತಿಯನ್ನು ಬದಲಾಯಿಸಬಹುದು ಎಂದು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಕಾಶ್ಮೀರದ ಸ್ವಾಯತ್ತತೆ ಕುರಿತು ಸರಣಿ ಟ್ವೀಟ್ ಮಾಡಿರುವ ಮುಫ್ತಿ ‘ಕಾಶ್ಮೀರದ ಭೌಗೋಳಿಕ ಸಾಂಸ್ಕೃತಿಕ ವಿಶೇಷದ ಲಾಭ ದೇಶ ಪಡೆಯಬೇಕು. ಇದರಿಂದ ಆರ್ಥಿಕ ಲಾಭ ಪಡೆಯಲು ಮುಂದಾಗಬೇಕು. ಮೋದಿ ಅವರಿಂದ ಕಾಶ್ಮೀರದ ಬದಲಾವಣೆ ಸಾಧ್ಯವಿದೆ ಎಂದು ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

370ನೇ ಕಲಂ ಜಮ್ಮು ಕಾಶ್ಮೀರದ ಜನರಿಗೆ ಭಾರತ ನೀಡಿರುವ ಬದ್ಧತೆ. ಅದನ್ನು ಕಿತ್ತುಕೊಳ್ಳುವುದು ಸಲ್ಲ. ಅದರೊಂದಿಗೆ ಕೈ ಜೋಡಿಸಿ ಜಮ್ಮು ಮತ್ತು ಕಾಶ್ಮೀರದ ಬದಲಾವಣೆಗೆ ಮುನ್ನುಡಿ ಬರೆಯಬೇಕು ಎಂದು ಹೇಳಿದ್ದಾರೆ.

ಪ್ರಸ್ತುತ ಜಮ್ಮು ಕಾಶ್ಮೀರ ಸರಕಾರದ ಪಾಲುದಾರ ಬಿಜೆಪಿಯ ಕೆಲ ಶಾಸಕರು 370ನೇ ಕಲಂನ ವಿಶೇಷಾಧಿಕಾರವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದರು. ಆದ್ದರಿಂದ ಮುಫ್ತಿ ಈ ರೀತಿಯ ಟ್ವೀಟ್ ಗಳನ್ನು ಮಾಡಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚೆಗೆ ಕಾಶ್ಮೀರದ ಬಿಜೆಪಿ ವಕ್ತಾರ ಪ್ರೊ.ವೀರೇಂದ್ರ ಗುಪ್ತಾ ಇತ್ತೀಚೆಗೆ ‘370ನೇ ಕಲಂ ರದ್ದು ಪಡಿಸಬೇಕು. ಕಲಂ ನಿಂದ ಪ್ರತ್ಯೇಕವಾದಿಗಳಿಗೆ ಅನುಕೂಲವಾಗುತ್ತಿದೆ. ಅಲ್ಲದೇ ಭಾರತದ ವಿಭಜನೆಗೆ ಪೂರಕವಾಗುತ್ತಿದೆ. ವಿದೇಶಗಳು ಭಾರತದ ನೆಲದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶ ನೀಡಿದಂತಾಗುತ್ತಿದೆ. ಆದ್ದರಿಂದ ಕೂಡಲೇ 370ನೇ ಕಲಂ ರದ್ದು ಪಡಿಸಬೇಕು. ರದ್ದುಪಡಿಸಲು ಇದು ಸಕಾಲ ಎಂದು ಹೇಳಿಕೆ ನೀಡಿದ್ದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search