• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮುಸ್ಲಿಂ ಆಟೋ ಡ್ರೈವರ್ ಮಗನಾದ ಆತ ಟೀಂ ಇಂಡಿಯಾ ಸೇರಿದ ಹಾಗೂ ರಾಷ್ಟ್ರಗೀತೆ ಮೊಳಗುತ್ತಲೇ ಕಣ್ಣೀರಿತ್ತ

TNN Correspondent Posted On November 5, 2017
0


0
Shares
  • Share On Facebook
  • Tweet It

 ನಾವಿಲ್ಲಿ ಚಿತ್ರಮಂದಿರದಲ್ಲಿ ರಾಷ್ಟ್ರಗೀತೆ  ಮೊಳಗಿದರೆ ಎದ್ದು ನಿಲ್ಲಬೇಕೋ, ಬೇಡವೋ ಎಂದು ಚಿಂತಿಸುತ್ತಿದ್ದರೆ, ನಾನು ನಿಲ್ಲಲ್ಲ, ಏಕೆ ನಿಲ್ಲಬೇಕು ಎಂದು ಕೆಲವರು ಬೊಬ್ಬೆ ಹಾಕುತ್ತಿದ್ದರೆ, ರಾಷ್ಟ್ರಗೀತೆ ಹಾಡಿಸೋಕೆ ಅದೇನು ಶಾಲೆಯೇ ಎಂದು ಎಲುಬಿಲ್ಲದ ನಾಲಗೆ ಹರಿಬಿಡುತ್ತಿದ್ದರೆ, ಅಲ್ಲೊಬ್ಬ 23ರ ಯುವಕ ಟೀಂ ಇಂಡಿಯಾ ಕ್ರಿಕೆಟ್ ತಂಡ ಸೇರಿದ್ದ.

ನಿನ್ನೆ ರಾಜ್ ಕೋಟ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಎರಡನೇ ಅಂತಾರಾಷ್ಟ್ರೀಯ ಟ್ವೆಂಟಿ ಟ್ವೆಂಟಿ ಪಂದ್ಯದ ಆರಂಭಕ್ಕೂ ಮುನ್ನ ಕೋಚ್ ರವಿಶಾಸ್ತ್ರಿ ಅವನಿಗೆ ಟೀಂ ಇಂಡಿಯಾದ ಕ್ಯಾಪ್ ಕೊಟ್ಟರು.

ನಂತರ, ಜನಗಣಮನ ಮೊಳಗುತ್ತಲೇ ಆತ ಭಾವನೆ ತಡೆದುಕೊಳ್ಳಲಾಗಲಿಲ್ಲ. ಕಣ್ಣಲ್ಲಿ ನೀರು ಜಿನುಗುತ್ತಿದ್ದವು.

ಆತನ ಹೆಸರು ಮೊಹಮ್ಮದ್ ಸಿರಾಜ್.

ಬಡ ಮುಸ್ಲಿಮ್ ಆಟೋ ಡ್ರೈವರನ ಮಗನಾದ ಸಿರಾಜ್ 2015ರಲ್ಲಿ ಪ್ರಥಮ ದರ್ಜೆ ಕ್ರಿಕೆಟಿಗೆ ಪದಾರ್ಪಣೆ ಮಾಡಿ, 2017ರಲ್ಲಿ ಐಪಿಎಲ್ ಗೂ ಕಾಲಿರಿಸಿದರು. ಆಗ ಬಂದ 2.4 ಕೋಟಿ ರೂ. ಕಂಡು ಖುಷಿಯಾದ ಈತ ಮೊದಲು ಅಪ್ಪ ಆಟೋ ಓಡಿಸುವುದನ್ನು ನಿಲ್ಲಿಸಿದ.

ಶನಿವಾರ ಆರಂಭವಾದ ಪಂದ್ಯದಲ್ಲಿ ಸಿರಾಜ್ ರಾಷ್ಟ್ರಗೀತೆ ಮೊಳಗುವಾಗ ಇದಕ್ಕಾಗಿಯೇ ಇಷ್ಟು ದಿನ ಶ್ರಮಿಸಿದೆ ಎಂಬ ಕಾರಣಕ್ಕಾಗಿಯೋ, ಕೊನೆಗೂ ಅಂತಾರಾಷ್ಟ್ರೀಯ ಪಂದ್ಯವೊಂದರ ಆರಂಭಕ್ಕೂ ಮೊದಲು ದೇಶಭಕ್ತಿ ಗೀತೆ ಕೇಳುವಂತಾಯಿತಲ್ಲ ಎಂಬ ಸಾರ್ಥಕ ಭಾವದಿಂದಲೋ, ದೇಶಕ್ಕಾಗಿ ಆಡುವ ಅವಕಾಶ ನನ್ನದಾಯಿತಲ್ಲ ಎಂಬ ಮನೋಭಾವನೆಯಿಂದಲೋ ಆತ ಸಿರಾಜ್ ಕಣ್ಣೀರಿಟ್ಟು ದೇಶದ ಮನಗೆದ್ದಿದ್ದಾನೆ.

ಈಗ ಸಿರಾಜ್ ರಾಷ್ಟ್ರಗೀತೆಗೆ ಕಣ್ಣೀರಟ್ಟ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಸಹ ವ್ಯಕ್ತವಾಗಿವೆ. ಸಿರಾಜ್ ದೇಶಭಕ್ತಿ ಹೀಗೆಯೇ ಇರಲಿ, ಆಶಿಶ್ ನೆಹ್ರಾ ಸ್ಥಾನವನ್ನು ಸಮರ್ಪಕವಾಗಿ ತುಂಬಿ ದೇಶಕ್ಕೆ ಕೀರ್ತಿ ತರಲಿ. ಹಾಗೆಯೇ ಗೆದ್ದಲು ಹಿಡಿದ ಮನಸ್ಸುಗಳಿಗೆ ಸಿರಾಜ್ ದೇಶಭಕ್ತಿ ಮಾದರಿಯಾಗಲಿ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search